ನಿಲ್ಲದ ಯುದ್ಧ: ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ವಿದ್ಯಾರ್ಥಿಗಳಿಗೆ ನಾವು ಮುಂದೇನು ಮಾಡುವುದೆನ್ನುವ ಅನಿಶ್ಚಿತತೆ, ಗೊಂದಲ

Team Udayavani, Aug 1, 2022, 6:35 AM IST

ನಿಲ್ಲದ ಯುದ್ಧ: ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಸಾಂದರ್ಭಿಕ ಚಿತ್ರ.

ಬೆಂಗಳೂರು: ವೈದ್ಯ ಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳು ಅಲ್ಲಿಂದ ವಾಪಸಾಗಿ 5 ತಿಂಗಳು ಕಳೆದಿದ್ದು, ಇದೀಗ ಕೇಂದ್ರ ಸರಕಾರವು ಯಾವುದೇ ಅವಕಾಶ ಕಲ್ಪಿಸದಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.

ರಷ್ಯಾ-ಉಕ್ರೇನ್‌ ಯುದ್ಧದ ಪರಿಣಾಮ ಮಾರ್ಚ್‌ ಮೊದಲ ವಾರದಲ್ಲಿ ಭಾರತಕ್ಕೆ ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಯುದ್ಧ ಮುಗಿದ ಅನಂತರ ಮತ್ತೆ ಉಕ್ರೇನ್‌ಗೆ ಹೋಗಬೇಕು ಎಂಬುದು ಭಾಗಶಃ ವಿದ್ಯಾರ್ಥಿಗಳ ಹಂಬಲವಾಗಿದೆ. ಆದರೆ, ಯುದ್ಧ ನಡೆಯುತ್ತಲೇ ಇರುವುದರಿಂದ ಮುಂದೇನು ಮಾಡುವುದು ಎಂಬ ಅನಿಶ್ಚಿತತೆ ಮತ್ತು ಗೊಂದಲದಿಂದ ವಿದ್ಯಾರ್ಥಿಗಳು ಅಡಕತ್ತರಿಯಲ್ಲಿ ಸಿಲುಕಿದ ಹಾಗಾಗಿದೆ.

ರಾಜ್ಯದಲ್ಲಿ ಸುಮಾರು 650 ವಿದ್ಯಾರ್ಥಿಗಳಿದ್ದು, ಉಕ್ರೇನ್‌ನಿಂದ ವಾಪಸಾದ ಅನಂತರ ಏಪ್ರಿಲ್‌/ಮೇ ತಿಂಗಳಿನಲ್ಲಿ ಆನ್‌ಲೈನ್‌ ಮೂಲಕ 2,4 ಮತ್ತು 6ನೇ ಸೆಮಿಸ್ಟರ್‌ ಪರೀಕ್ಷೆಗೆ ಹಾಜರಾಗಿದ್ದಾರೆ. ಇದರ ಜತೆಗೆ ಆಯಾ ಪ್ರಾದೇಶಿಕವಾರು ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳಿಗೂ ಒಳಗಾಗಿದ್ದಾರೆ. ಮೈಸೂರಿನ ಜೆಎಸ್‌ಎಸ್‌, ಬೆಳಗಾವಿಯ ಕೆಎಲ್‌ಇ ಸೇರಿ ವಿವಿಧ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿತ್ತು. ಇದೀಗ ಸೆಪ್ಟೆಂಬರ್‌ನಲ್ಲಿ 3ನೇ ಸೆಮಿಸ್ಟರ್‌ ಆಫ್ಲೈನ್‌ ತರಗತಿಗಳನ್ನು ನಡೆಸುವುದಾಗಿ ಉಕ್ರೇನ್‌ನ ಖಾಕೀìವ್‌ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ನಿರ್ದೇಶನ ನೀಡಿದೆ.

ಆದರೆ, ಯುದ್ಧ ಇನ್ನೂ ನಿಂತಿಲ್ಲದ ಕಾರಣ ತಮ್ಮ ಮಕ್ಕಳನ್ನು ವಾಪಸ್‌ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಅದರ ಬದಲಾಗಿ ಭಾರತದಲ್ಲಿಯೇ ಅಥವಾ ಉಕ್ರೇನ್‌ ಹೊರತುಪಡಿಸಿ ವಿದೇಶಗಳಲ್ಲಿ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನ ಹರಿಸಿದ್ದಾರೆ.

ದೇಶದಲ್ಲೇ ಮುಂದುವರಿಕೆ ಆಸಕ್ತಿ
ವಿದ್ಯಾರ್ಥಿಗಳು ಈವರೆಗೆ ಏನಾದರೂ ದಾರಿಯಾಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಇದೀಗ ಸರಕಾರ ಕೈಚೆಲ್ಲಿರುವುದರಿಂದ ಮೊದಲ ವರ್ಷ ಮಾತ್ರ ಮುಗಿಸಿರುವ ವಿದ್ಯಾರ್ಥಿಗಳು, ಮತ್ತೆ ಉಕ್ರೇನ್‌ಗೆ ಹೋಗುವ ಬದಲು ಭಾರತದಲ್ಲಿಯೇ ಮುಂದಿನ ವರ್ಷ ವೈದ್ಯಕೀಯ ಕೋರ್ಸ್‌ಗಳ ನೀಟ್‌ ಪರೀಕ್ಷೆ ಬರೆಯಲು ಕೆಲವು ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿದ್ದಾರೆ. ಕೆಲವರು ಎಂಜಿನಿಯರಿಂಗ್‌, ಕಾನೂನು ಪದವಿ ಇನ್ನಿತರ ಕೋರ್ಸ್‌ಗಳತ್ತಲೂ ಗಮನ ಹರಿಸುತ್ತಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗಳೇನು?
ಅಂಕಪಟ್ಟಿ ಸೇರಿ ವಿದ್ಯಾರ್ಥಿಗಳ ಶೈಕ್ಷಣಿಕ ಮೂಲ ದಾಖಲಾತಿಗಳು ಉಕ್ರೇನ್‌ನ ವಿಶ್ವವಿದ್ಯಾಲಯಗಳಲ್ಲಿಯೇ ಉಳಿದುಕೊಂಡಿವೆ. ವಿದ್ಯಾರ್ಥಿಗಳು ಇದೀಗ ಬೇರೊಂದು ಕೋರ್ಸ್‌ ಮಾಡಬೇಕಾದರೆ ಮೂಲ ದಾಖಲಾತಿಗಳು ಅಗತ್ಯವಾಗಿದೆ. ಇದನ್ನು ಅಲ್ಲಿಂದ ತರಿಸಿಕೊಡುವುದು ಅಥವಾ ಪರ್ಯಾಯ ವ್ಯವಸ್ಥೆಯನ್ನು ಸರಕಾರಗಳು ಮಾಡಬೇಕು. ಇದರ ಜತೆಗೆ ರುಮೇನಿಯಾ, ಪೋಲೆಂಡ್‌, ರಷ್ಯಾ ಸೇರಿ ಹಲವು ದೇಶಗಳು ಉಕ್ರೇನ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದಾಗಿ ತಿಳಿಸಿವೆ. ಅಲ್ಲಿಗೆ ಹೋಗಲು ಸರಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದರೆ, ಅನುಕೂಲವಾಗಲಿದೆ ಎನ್ನುತ್ತಾರೆ ವಿದ್ಯಾರ್ಥಿನಿ ಬೆಂಗಳೂರಿನ ಸ್ವಾತಿ.

ಮತ್ತೆ ಉಕ್ರೇನ್‌ಗೆ ಹೋಗುತ್ತೇವೆ
ಈಗಾಗಲೇ ಒಂದು ವರ್ಷ ವೈದ್ಯಕೀಯ ಶಿಕ್ಷಣ ಮುಗಿದಿದೆ. ಇದೀಗ ಮತ್ತೆ ಬೇರೆ ಕೋರ್ಸ್‌ಗಳತ್ತ ಗಮನ ಹರಿಸುವುದರಿಂದ ಆರ್ಥಿಕವಾಗಿ ಸಮಸ್ಯೆಯಾಗ ಲಿದೆ. ಒಂದು ವರ್ಷ ಕೂಡ ಅನಾವಶ್ಯಕವಾಗಿ ವ್ಯರ್ಥವಾಗ ಲಿದೆ. ಆದ್ದರಿಂದ ಮುಂದಿನ ಸೆಮಿಸ್ಟರ್‌ ತರಗತಿಗಳಿಗೆ ಉಕ್ರೇನ್‌ಗೆ ಮತ್ತೆ ವಾಪಸಾ ಗಲು ನಿರ್ಧರಿಸಿದ್ದೇನೆ ಎನ್ನುತ್ತಾರೆ ಬೆಂಗಳೂರಿನ ರಿಚಾಸೋಮ್‌.

ಉಕ್ರೇನ್‌ಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಸಂಬಂಧಿಸಿ ರಾಷ್ಟ್ರೀಯ ವೈದ್ಯಕೀಯ ಪರಿಷತ್ತಿನಿಂದ (ಎನ್‌ಎಂಸಿ) ಈವರೆಗೆ ಯಾವುದೇ ನಿರ್ದೇಶನ ಬಂದಿಲ್ಲ. ಎನ್‌ಎಂಸಿ ನಿರ್ದೇಶನದಂತೆ ರಾಜ್ಯದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ನಿರ್ಧರಿಸಲು ಸಾಧ್ಯವಿಲ್ಲ.
– ಡಾ| ಬಿ.ಎಲ್‌. ಸುಜಾತಾ ರಾಥೋಡ್‌, ವೈದ್ಯಕೀಯ ಶಿಕ್ಷಣ ನಿರ್ದೇಶಕಿ

– ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.