Gadag; ಮತ್ತೊಂದು ಅವಘಡ:ಯಶ್ ಹಿಂಬಾಲಿಸುತ್ತಿದ್ದ ಯುವಕನ ಸ್ಥಿತಿ ಗಂಭೀರ
ಬುದ್ದಿ ಮಾತು ಹೇಳಿದರೂ ಅಂಧಾಭಿಮಾನ...
Team Udayavani, Jan 8, 2024, 11:17 PM IST
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ವಿದ್ಯುತ್ ಅವಘಡ ಬೆನ್ನಲ್ಲೇ ಮತ್ತೋರ್ವ ಅಭಿಮಾನಿಯೊಬ್ಬ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ತಾಲೂಕಿನ ಬಿಂಕದಕಟ್ಟಿ ನಿವಾಸಿ ನಿಖಿಲಗೌಡ ಭೀಮನಗೌಡ್ರ ಗೌಡರ(22) ಗಂಭಿರವಾಗಿ ಗಾಯಗೊಂಡಿದ್ದು, ಜಿಮ್ಸ್ ನಲ್ಲಿ ದಾಖಲಿಸಲಾಗಿದೆ. ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:Birthday ಅಂದರೆ ಭಯ ಬರುತ್ತದೆ…ಅಸಹ್ಯ ಆಗಿ ಬಿಟ್ಟಿದೆ: ಯಶ್ ನೋವಿನ ನುಡಿ
ಸೂರಣಗಿಯಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಭೇಟಿ ಮಾಡಲು ನಟ ಯಶ್ ನಗರದ ಜಿಮ್ಸ್ ಆಸ್ಪತ್ರೆಗೆ ಆಗಮಿಸಿದ್ದರು. ನಂತರ ಹುಬ್ಬಳ್ಳಿಗೆ ತೆರಳುತ್ತಿರುವ ಸಂದರ್ಭದಲ್ಲಿ ನಟ ಯಶ್ ಅವರನ್ನು ನೋಡುವ ಆತುರದಲ್ಲಿ ಬೈಕನಲ್ಲಿದ್ದ ನಿಖಿಲಗೌಡ ಡಿಎಆರ್ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ.ರಸ್ತೆಯಲ್ಲಿ ತೀವ್ರ ರಕ್ತ ಸೋರಿಕೆಯಾಗಿತ್ತು.
ಸೂರಣಗಿ ಭೇಟಿ ವೇಳೆ ನಟ ಯಶ್ ಅವರು, ನನ್ನನ್ನು ನೋಡಲು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರಬೇಡಿ ಎಂದು ಅಭಿಮಾನಿಗಳಿಗೆ ಬುದ್ದಿವಾದ ಹೇಳಿದ್ದರೂ, ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ