ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ
Team Udayavani, Oct 20, 2018, 12:25 PM IST
ಗದಗ : ತೊಂಟದಾರ್ಯ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಅವರು ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.
ರಾತ್ರಿ ಮಲಗಿದ್ದ ಶ್ರೀಗಳು ಮಲಗಿದ್ದಲ್ಲೇ ಎದೆ ನೋವು ಕಾಣಿಸಿಕೊಂಡಿದ್ದು ಬಳಿಕ ಅವರನ್ನು ಗದಗಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಮಾಜಿಕ ಕಳಕಳಿಯ ನೂರಾರು ಕಾರ್ಯಗಳ ಮೂಲಕ ಸ್ವಾಮೀಜಿ ಜನಾನುರಾಗಿಯಾಗಿದ್ದರು.
ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸ್ವಾಮೀಜಿ ಲಿಂಗೈಕ್ಯರಾದ ವಿಚಾರ ತಿಳಿದು ಸಾವಿರಾರು ಮಂದಿ ಭಕ್ತರು ಮಠಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ಮಠದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ.