ಗ್ಯಾಂಬ್ಲಿಂಗ್: ಪೊಲೀಸ್ ಕಾಯ್ದೆಗೆ ತಿದ್ದುಪಡಿಗೆ ಕ್ರಮ: ಗೃಹ ಸಚಿವ
Team Udayavani, Sep 21, 2021, 9:00 PM IST
ವಿಧಾನಸಭೆ: ಗ್ಯಾಂಬ್ಲಿಂಗ್ ಮುಕ್ತ ಕರ್ನಾಟಕ ಮಾಡುವುದು ರಾಜ್ಯ ಸರ್ಕಾರದ ಗುರಿ. ಹಾಗಾಗಿ ಜೂಜಾಟ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಜರುಗಿಸಲು ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲು ವಿಧೇಯಕ ಮಂಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ರಾಜ್ಯದಲ್ಲಿ ದಿನೇದಿನೇ ಹೆಚ್ಚುತ್ತಿರುವ ಗ್ಯಾಂಬ್ಲಿಂಗ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಕುಣಿಗಲ್ ಶಾಸಕ ಡಾ. ರಂಗನಾಥ್ ಎಚ್.ಡಿ. ಪ್ರಶ್ನೆಗೆ ಉತ್ತರಿಸಿದ ಸಚಿವರು, ಘಟಕವಾರು ಪೊಲೀಸ್ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ಸಂಪರ್ಕದಲ್ಲಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ಯಾಂಬ್ಲಿಂಗ್ ವಿರುದ್ಧ ಇನ್ನಷ್ಟು ಹೆಚ್ಚಿನ ಕ್ರಮಗಳನ್ನು ಜರುಗಿಸಲು ಕರ್ನಾಟಕ ಪೊಲೀಸ್ (ತಿದ್ದುಪಡಿ) ಬಿಲ್-2021ನ್ನು ಮಂಡಿಸಿ ಕಾನೂನು ಪರಿಷ್ಕರಿಸಿದ ಬಳಿಕ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಇದನ್ನೂ ಓದಿ:8 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಶಿರಸಿ ಉರಗ ತಜ್ಞ ಪ್ರಶಾಂತ ಹುಲೇಕಲ್
ಶಾಸಕ ಡಿ.ಸಿ. ತಮ್ಮಣ್ಣ ಅವರೂ ದನಿಗೂಡಿಸಿ, ಈ ದಂಧೆಯನ್ನು ನಿಗ್ರಹಿಸಬೇಕೆಂದು ಮತ್ತು ಇದರಿಂದ ರೌಡಿಯಿಸಂ ಹೆಚ್ಚಾಗುತ್ತಿದೆ ಎಂದು ಹೇಳಿದರು. ರಂಗನಾಥ್ ಮಾತು ಮುಂದುವರಿಸಿ, ಪರಪ್ಪನ ಅಗ್ರಹಾರ ಜೈಲಿನ ಕೆಲ ಕೈದಿಗಳು ಏಜೆಂಟರ ಮೂಲಕ ಗ್ಯಾಂಬ್ಲಿಂಗ್ ಮಾಡಿಸುತ್ತಿದ್ದಾರೆ. ಹಾಗೂ ಕೆಲವು ಜಾಮೀನುಪಡೆದ ಕೈದಿಗಳು ಕೂಡಾ ಈ ದಂಧೆ ನಡೆಸುತ್ತಿದ್ದಾರೆ ಎಂದು ಸದನದ ಗಮನಸೆಳೆದರು.
ಶಾಸಕ ಯು.ಟಿ. ಖಾದರ್ ಮಾತನಾಡಿ, ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪೊಲೀಸರ ಜತೆಗೂಡಿ ಈ ದಂಧೆ ನಿಗ್ರಹಿಸಬಹುದು. ಆ ಬಗ್ಗೆ ಚರ್ಚಿಸುವ ಆಗತ್ಯವಿಲ್ಲ ಎಂದರು. ಆಗ ಮಧ್ಯಪ್ರವೇಶ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಸಂಬಂಧ ಕಾನೂನು ಬಲಗೊಳ್ಳುವ ಅಗತ್ಯವಿದೆ. ಅಂತಹವರನ್ನು ಜಾಮೀನುರಹಿತ ಪ್ರಕರಣಗಳನ್ನಾಗಿ ಮಾಡಿ ಕಠಿಣ ಶಿಕ್ಷೆ ನೀಡುವ ಆಗತ್ಯವಿದೆ. ಕಾನೂನು ತಿದ್ದುಪಡಿ ಮಾಡಿ ಕಾನೂನು ಬಲಪಡಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು