ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಗ್ರಾಪಂಗೆ ಶಕ್ತಿ ತುಂಬಲು ಸರ್ಕಾರ ಬದ್ಧ

Team Udayavani, Mar 25, 2023, 6:45 AM IST

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಬೆಂಗಳೂರು: ಜನರಿಗೆ ಅತೀ ಹತ್ತಿರವಿರುವ ಇಲಾಖೆಯೆಂದರೆ ಗ್ರಾಮ ಪಂಚಾಯಿತಿ, ಆದ್ದರಿಂದ ಗ್ರಾಮ ಪಂಚಾಯಿತಿಗೆ ಶಕ್ತಿ ತುಂಬುವ ಪ್ರಯತ್ನ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯೋಜಿಸಿದ್ದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಮಹಾತ್ಮಾ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಹಾಗೂ ಪಂಚತಂತ್ರ 2.0, ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ, ತೆರಿಗೆ ಸಂಗ್ರಹದ ಪಿಓಎಸ್‌ ಉಪಕರಣಗಳ ಲೋಕಾರ್ಪಣೆ ಮತ್ತು ಜಲಶಕ್ತಿ ಆಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ನೀಡುವ ಅನುದಾನವನ್ನು ಅತ್ಯಂತ ಸಮರ್ಪಕವಾಗಿ ಬಳಸಿಕೊಂಡು ಹೆಚ್ಚುವರಿ ಅನುದಾನಕ್ಕೆ ರಾಜ್ಯದ ಅನೇಕ ಪಂಚಾಯಿತಿಗಳು ಪಾತ್ರವಾಗಿವೆ ಎಂದು ಅವರು ಶ್ಲಾಘಿಸಿದರು.

ನರೇಗಾ ಯೋಜನೆಯನ್ನು ಪಂಚಾಯಿತಿಗಳಲ್ಲಿ ಆಸ್ತಿ ಸೃಷ್ಟಿಸಲು ಬಳಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಮಾಡುವಂತೆ ಈಗಾಗಲೇ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಗ್ರಾಮ ಸಭೆಗೆ ವಿಧಾನ ಸಭೆಯಷ್ಟು ಮಾನ್ಯತೆಯಿದೆ. ಹೈಕೋರ್ಟ್‌, ವಿಧಾನ ಸೌಧದಂತೆ ಪಂಚಾಯಿತಿಗಳಲ್ಲಿಯೂ ರಾಷ್ಟ್ರ ಧ್ವಜ ಹಾರಾಡುತ್ತದೆ. ತನ್ಮೂಲಕ ಗ್ರಾಮ ಪಂಚಾಯಿತಿ ಎಂಬುದು ಸರ್ಕಾರವಾಗಿ ಕೆಲಸ ಮಾಡುತ್ತದೆ, ಗ್ರಾಮ ಪಂಚಾಯಿತಿ ಸದಸ್ಯರು, ಉಪಾಧ್ಯಕ್ಷರು ಮತ್ತು ಅಧ್ಯಕ್ಷರ ಮಾಸಿಕ ಗೌರವ ವೇತನವನ್ನು ನಮ್ಮ ಸರ್ಕಾರ ಎರಡು ಪಟ್ಟು ಹೆಚ್ಚಿಸಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಅರುಣ್‌ ಮಾತನಾಡಿ, ಒಂದು ಬಾರಿ ಪಂಚಾಯತ್‌ ಚುನಾವಣೆ ಗೆದ್ದವರು ಎರಡನೇ ಬಾರಿ ಗೆಲ್ಲುವುದು ಕಡಿಮೆ. ಅತಿ ಹೆಚ್ಚು ಆಡಳಿತ ವಿರೋಧಿ ಅಲೆಯನ್ನು ಪಂಚಾಯಿತಿ ಸದಸ್ಯರು ಎದುರಿಸುತ್ತಿರುತ್ತಾರೆ ಎಂದು ಹೇಳಿದರು.

ಕಂದಾಯ ಸಚಿವ ಆರ್‌. ಅಶೋಕ್‌, ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಮೋದ್‌ ಹೆಗಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್‌. ಕೆ. ಅತೀಕ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ (ಪಂ. ರಾಜ್‌) ಉಮಾ ಮಹದೇವನ್‌, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತೆ ಶಿಲ್ಪಾ ನಾಗ್‌ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನರೇಗಾ ಪ್ರಶಸ್ತಿ ಗೆದ್ದ ಪಂಚಾಯತ್‌ಗಳು:
ಅತ್ಯುತ್ತಮ ಜಿಲ್ಲಾ ಪಂಚಾಯತ್‌ ಪುರಸ್ಕಾರದ ಮೊದಲ ಬಹುಮಾನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ (15 ಲಕ್ಷ ರೂ.), ದ್ವಿತೀಯ ಬಹುಮಾನ ಶಿವಮೊಗ್ಗ ಜಿ.ಪಂ. (12.50 ಲಕ್ಷ ರೂ), ತೃತೀಯ ಬಹುಮಾನ ಬಳ್ಳಾರಿ, ಬಾಗಲಕೋಟೆ ಜಿ.ಪಂ. (ತಲಾ 10 ಲಕ್ಷ ರೂ.) ಗೆದ್ದುಕೊಂಡಿವೆ.

ತಾಲೂಕು ಪಂಚಾಯಿತಿ ವಿಭಾಗದಲ್ಲಿ ಮೊದಲ ಬಹುಮಾನವನ್ನು ಗುಳೇದಗುಡ್ಡ (10 ಲಕ್ಷ ರೂ.), ಎರಡನೇ ಬಹುಮಾನ ದೊಡ್ಡಬಳ್ಳಾಪುರ (7.50 ಲಕ್ಷ ರೂ.), ಮೂರನೇ ಬಹುಮಾನ ಭದ್ರಾವತಿ ಗೆದ್ದುಕೊಂಡಿದೆ.

ಗ್ರಾಮ ಪಂಚಾಯಿತಿ ವಿಭಾಗದಲ್ಲಿ ಮುಧೋಳದ ಹಲಗಲಿ, ಹಾಸನದ ಮಾಡಬಾಳ, ಕುಂದಾಪುರದ ಹಕ್ಲಾಡಿ, ಕೊಡಗಿನ ದೇವರಪುರ, ದೊಡ್ಡಬಳ್ಳಾಪುರದ ತೂಬಗೆರೆ ಪಂಚಾಯಿತಿಗಳು ಅತ್ಯುತ್ತಮ ವಿಭಾಗದಲ್ಲಿ ಆಯ್ಕೆಯಾಗಿದ್ದು ತಲಾ 5 ಲಕ್ಷ ರೂ. ಬಹುಮಾನಕ್ಕೆ ಪಾತ್ರವಾಗಿವೆ. ಇನ್ನು ನರೇಗಾದ ವಿವಿಧ ವಿಭಾಗದಲ್ಲಿ 79 ಪಂಚಾಯಿತಿಗಳು ಪ್ರಶಸ್ತಿ ಗೆದ್ದುಕೊಂಡಿವೆ. ಕಳೆದ ಮೂರು ವರ್ಷಗಳ ಗಾಂಧಿ ಗ್ರಾಮ ಪುರಸ್ಕಾರಕ್ಕೆ 500ಕ್ಕೂ ಹೆಚ್ಚು ಪಂಚಾಯಿತಿಗಳು ಪಾತ್ರವಾಗಿವೆ.

ಗಾಂಧಿ ಗ್ರಾಮ ಪುರಸ್ಕಾರ ಯಾರಿಗೆ?
ಪ್ರತಿ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವ ಒಂದು ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುತ್ತದೆ. ಜೀವನದ ಗುಣಮಟ್ಟ ಸುಧಾರಣೆಗೆ ಕೈಗೊಂಡಿರುವ ಕ್ರಮ, ಹಣಕಾಸಿನ ನಿರ್ವಹಣೆ, ಮೂಲಭೂತ ಸೌಕರ್ಯ, ಉತ್ತಮ ಆಡಳಿತ, ಪಂಚಾಯತ್‌ ನೀಡುವ ಸೇವೆ, ವಿನೂತನ ಪ್ರಯೋಗಗಳು ಮತ್ತು ಕೋವಿಡ್‌ ನಿರ್ವಹಣೆಯನ್ನು ಆಧರಿಸಿ ಪ್ರಶಸ್ತಿ ನೀಡಲಾಗಿದೆ.

ನರೇಗಾ ಪ್ರಶಸ್ತಿ ಯಾರಿಗೆ?
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಜನರಿಗೆ 100 ದಿನ ಉದ್ಯೋಗ ನೀಡುವುದರ ಜತೆಗೆ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿಪಡಿಸುವ, ಜನರ ಜೀವನೋಪಾಯ ಬಲಪಡಿಸುವ ಆಸ್ತಿಗಳನ್ನು ಸೃಷ್ಟಿಸಿದ ಪಂಚಾಯತ್‌ಗಳಿಗೆ ನೀಡಲಾಗಿದೆ.

ಆನ್‌ಲೈನ್‌ನಲ್ಲೇ ಪಂಚಾಯಿತಿ ತೆರಿಗೆ ಪಾವತಿಸಿ:
ಮುಖ್ಯಮಂತ್ರಿಗಳು ಬಾಪೂಜಿ ಸೇವಾ ಕೇಂದ್ರ ಪೋರ್ಟಲ್‌ ಮತ್ತು ಬಾಪೂಜಿ ಸೇವಾ ಕೇಂದ್ರ ಮೊಬೈಲ್‌ ಆ್ಯಪ್‌ಗೆ ಚಾಲನೆ ನೀಡಿದ್ದು ಸಾರ್ವಜನಿಕರು ಗ್ರಾಪಂಗಳಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿಸಬಹುದಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಆಸ್ತಿ ತೆರಿಗೆಯನ್ನು ಪೋನ್‌ ಪೇ, ಗೂಗಲ್‌ ಪೇ, ಪೇಟಿಎಂ ಮುಂತಾದ ಆ್ಯಪ್‌ಗ್ಳ ಮೂಲಕ ಪಾವತಿಸುವ ಅವಕಾಶ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಮಹಾತ್ಮಾ ಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಮಾಡಿದರು.

ಪಂಚಾಯಿತಿಗಳಲ್ಲಿ ಈಗಾಗಲೇ ಬಳಸಲಾಗುತ್ತಿರುವ ಪಂಚತಂತ್ರ ತಂತ್ರಾಂಶವನ್ನು ಉನ್ನತೀಕರಿಸಿ ಪಂಚತಂತ್ರ 2.0 ಬಿಡುಗಡೆ ಮಾಡಲಾಗಿದ್ದು ಪಂಚಾಯಿತಿಗಳ ದಿನನಿತ್ಯದ ಕಾರ್ಯಚಟುವಟಿಕೆ, ಸೇವೆಗಳ ವಿಲೇವಾರಿ, ಯೋಜನೆಗಳ ಅನುಷ್ಠಾನ ಮತ್ತು ತೀರ್ಮಾನವನ್ನು ಕೈಗೊಳ್ಳಲು ಬಳಸಲಾಗುತ್ತದೆ. ಇದರ ಅನುಷ್ಠಾನದಿಂದ ಪಾರದರ್ಶಕತೆ ಹೆಚ್ಚಾಗುತ್ತದೆ. ಜನ ವಸತಿ ಸಭೆ, ವಾರ್ಡ್‌ ಸಭೆ, ಗ್ರಾಮ ಸಭೆ, ಸ್ಥಾಯಿ ಸಮಿತಿ ಸಭೆ, ಸಾಮಾನ್ಯ ಸಭೆ, ಸಭೆಗಳ ಆಯೋಜಿಸುವಿಕೆ, ಹಾಜರಾತಿ, ಸಭಾ ನಡಾವಳಿಗಳಿಗೆ ಇದನ್ನು ಬಳಸಬಹುದಾಗಿದ್ದು ಇಂತಹ ಸವಲತ್ತು ಒದಗಿಸುವ ದೇಶದಲ್ಲೇ ಮೊದಲ ಪ್ರಯತ್ನ ಇದಾಗಿದೆ.

ಈ ಮೊದಲು ಪಂಚಾಯಿತಿಗೆ ನೀಡುತ್ತಿದ್ದ ಅನುದಾನ ಅಲ್ಲಿನ ವಿದ್ಯುತ್‌ ಮತ್ತು ನೀರಿನ ಬಿಲ್‌ ಪಾವತಿಗೆ ಮಾತ್ರ ಸಾಕಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಪಂಚಾಯಿತಿಗಳಗೆ ನೀಡುತ್ತಿದ್ದ ಅನುದಾನವನ್ನು ಎರಡು ಪಟ್ಟು ಹೆಚ್ಚಿಸಿದೆ. ಆಡಳಿತ ವಿಕೇಂದ್ರಿಕರಣದ ಜತೆಗೆ ಆರ್ಥಿಕ ವಿಕೇಂದ್ರಿಕರಣವು ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ಟಾಪ್ ನ್ಯೂಸ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಹೈಕೋರ್ಟ್‌ ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

High Court ಮೆಟ್ಟಿಲೇರಿದ ಡಿ. ರೂಪಾ; ವಿಚಾರಣೆಯಿಂದ ಹಿಂದೆ ಸರಿದ ನ್ಯಾ| ನಾಗಪ್ರಸನ್ನ

cowcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯcow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

cow slaughter; ಗೋಹತ್ಯೆ ನಿಷೇಧ ಕಾಯ್ದೆ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ