ಗಂಗಾವತಿ : ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ
Team Udayavani, May 11, 2021, 3:41 PM IST
ಗಂಗಾವತಿ: ಕೋವಿಡ್ ರೋಗಕ್ಕೆ ಚಿಕಿತ್ಸೆ ನೀಡುತ್ತಿದ್ದ ಶಂಕೆಯ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ನಕಲಿ ವೈದ್ಯರ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ 06 ಆಸ್ಪತ್ರೆಗಳಿಗೆ ಬೀಗ ಜಡಿದಿದ್ದಾರೆ. ತಾಲೂಕಿನ ಶ್ರೀರಾಮನಗರದಲ್ಲಿ ಮೂರು, ಆಚಾರನರಸಾಪೂರ ಒಂದು, ಮರಳಿಯಲ್ಲಿ ಎರಡು ಆಸ್ಪತ್ರೆಗಳನ್ನು ಪರಿಶೀಲನೆ ನಡೆಸಿ ನಕಲಿ ವೈದ್ಯರಿಗೆ ಎಚ್ಚರಿಕೆ ನೀಡಿ ಆಸ್ಪತ್ರೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ. ಕೋವಿಡ್ ರೋಗಕ್ಕೆ ನಕಲಿ ವೈದ್ಯರು ಚಿಕಿತ್ಸೆ ನೀಡದಂತೆ ಎಚ್ಚರಿಕೆ ನೀಡಿದರು.
ಕೋವಿಡ್ ಸೋಂಕಿತರಿಗೆ ಸರಕಾರಿ ಆಸ್ಪತ್ರೆ ಅಥವಾ ಖಾಸಗಿ ತಜ್ಞ ವೈದ್ಯರ ಬಳಿಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡುವಂತೆ ಉಪಸ್ಥಿತರಿದ್ದ ಗ್ರಾ.ಪಂ.ಪಿಡಿಒ ಗಳಿ ಸೂಚನೆ ನೀಡಲಾಯಿತು. ನಕಲಿ ವೈದ್ಯರ ಆಸ್ಪತ್ರೆಗಳನ್ನು ಸೀಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸ ಠಾಣೆಯಲ್ಲಿ ದೂರು ಸಲ್ಲಿಸಿಲ್ಲ.
ಎಚ್ಚರಿಕೆ: ಕೋವಿಡ್ ರೋಗವನ್ನು ತಜ್ಞ ವೈದ್ಯರು ಚಿಕಿತ್ಸೆ ಮಾಡಬೇಕಿದ್ದು ಕೆಲವೆಡೆ ನಕಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆಂಬ ದೂರು ಮತ್ತು ಸರಕಾರದ ಸೂಚನೆ ಮೇರೆಗೆ ಮರಳಿ ಮತ್ತು ವೆಂಕಟಗಿರಿ ಹೋಬಳಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ, ತಾ.ಪಂ.ಇಒ ಹಾಗೂ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ 06 ನಕಲಿ ವೈದ್ಯರ ಆಸ್ಪತ್ರೆಗಳನ್ನು ಸೀಜ್ ಮಾಡಿ ಎಚ್ಚರಿಕೆ ನೀಡಲಾಗಿದೆ ಎಂದು ತಹಸೀಲ್ದಾರ್ ಯು.ನಾಗರಾಜ ಉದಯವಾಣಿ ತಿಳಿಸಿದ್ದಾರೆ.