ಗಂಗಾವತಿ: ಹಲ್ಲೆ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
Team Udayavani, Jul 22, 2022, 12:00 PM IST
ಗಂಗಾವತಿ: ಹಂದಿ ಫಾರಂ ಮಾಲಿಕನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ತಾಲ್ಲೂಕಿನ ಮುಸ್ಟೂರು ಬಳಿ ಮೇಲೆ ಶುಕ್ರವಾರ ನಡೆದಿದೆ.
ಆರೋಪಿಗಳಾದ ಅಶೋಕ ಬೆಳ್ಳಟ್ಟಿ ಮತ್ತು ಶಂಕರ್ ಸಿಂಧನೂರು ಗಾಯಗೊಂಡಿದ್ದಾರೆ.
ಘಟನೆ ವಿವರ: ಬೆಂಗಳೂರು ಕೊಡಗಲಿ ಹತ್ತಿರ ಜುಲೈ 16 ರಂದು ಹಂದಿ ಫಾರ್ಮ್ ನಲ್ಲಿ 90 ಹಂದಿ ಕದಿಯಲು ಯತ್ನಿಸಿದ್ದು, ಆಕ್ಷೇಪ ಮಾಡಿದ ಫಾರಂ ಮಾಲಿಕ ರಾಮಕೃಷ್ಣ ಎಂಬವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಕುರಿತು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು, ಬೆಲೂರು ಗಂಗಾವತಿ ತಾಲ್ಲೂಕಿನ ಬಳಿ ಬುಲೇರೋ ವಾಹನದಲ್ಲಿ ತೆರಳುತ್ತಿದ್ದ ಆರೋಪಿಗಳನ್ನು ತಡೆದು ಬಂಧಿಸಿದ್ದಾರೆ. ಆಗ ಆರೋಪಿಗಳು ಪೊಲೀಸ್ ಪೇದೆ ಬಸವರಾಜ ನಾಯಕ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾರೆ. ಚಿಕ್ಕ ಜಾಲಹಳ್ಳಿ ಪೊಲೀಸ್ ಠಾಣೆಯ ಪ್ರವೀಣ್ ಪರಾರಿಯಾಗಲು ಯತ್ನಿಸಿದವರ ಮೇಲೆ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸೋನಿಯಾ ಗಾಂಧಿ ಮೇಲೆ ಸುಳ್ಳು ಆರೋಪ ಮಾಡಿ ಕಿರುಕುಳ ನೀಡುತ್ತಿದೆ: ರಮಾನಾಥ ರೈ
ಆರೋಪಿಗಳಾದ ಅಶೋಕ ಬೆಳ್ಳಟ್ಟಿ ಮತ್ತು ಶಂಕರ್ ಸಿಂಧನೂರು ಗಾಯಗೊಂಡಿದ್ದು ಇವರನ್ನು ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅರೋಪಿಗಳ ಪೈಕಿ ಇನ್ನು ಮೂವರನ್ನು ಪೊಲೀಸರು ಬಂಧಿಸಿದ್ದು, ಎಎಸ್ಪಿ ಅರುಣಾಂಗ್ಶು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಾದ ರುದ್ರೇಶ ಉಜ್ಜನಕೊಪ್ಪ, ಮಂಜುನಾಥ್, ಚಿಕ್ಕ ಜಾಲಹಳ್ಳಿ ಪ್ರವೀಣ್ ಸೇರಿ ಇತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ