ಗರೀಬ್ ಕಲ್ಯಾಣ ವಿಸ್ತರಣೆ: ಪ್ರಧಾನಿಗೆ ನಳಿನ್ ಕುಮಾರ್ ಕಟೀಲ್ ಧನ್ಯವಾದ
Team Udayavani, Nov 24, 2021, 10:30 PM IST
ಬೆಂಗಳೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು 2022ರ ಮಾರ್ಚ್ ಅಂತ್ಯದ ವರೆಗೆ ವಿಸ್ತರಿಸುವ ಕೇಂದ್ರ ಸರಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಈ ನಿರ್ಧಾರಕ್ಕಾಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನತೆಯ ಪರವಾಗಿ ಧನ್ಯವಾದ ಸಮರ್ಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬರುವ ಬಡವರು ಹಸಿವಿನಿಂದ ತೊಂದರೆಗೆ ಸಿಲುಕಬಾರದು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಪ್ರಧಾನಿ ಅನುಷ್ಠಾನಕ್ಕೆ ತಂದಿದ್ದರು. ಪ್ರಧಾನಿಯವರು ಈ ಯೋಜನೆಯನ್ನು ವಿಸ್ತರಿಸಿದ್ದರಿಂದ ದೇಶದ ಸುಮಾರು 80 ಕೋಟಿಗೂ ಹೆಚ್ಚು ಫಲಾನುಭವಿಗಳು ಇನ್ನೂ ನಾಲ್ಕು ತಿಂಗಳು ಅಂದರೆ 2022ರ ಮಾರ್ಚ್ ಅಂತ್ಯದ ವರೆಗೆ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಇದು ಅತ್ಯಂತ ಜನಪರ ನಿರ್ಧಾರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಬೆಳ್ಳುಳ್ಳಿಯನ್ನು ಶುಂಠಿಯೆಂದ ಪಾಕ್ ಸಚಿವ!
ಈ ಹಿಂದೆ ದೀಪಾವಳಿವರೆಗೆ ಈ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಬಡಜನರಿಗೆ ನೆರವಾಗುವ ವಿಶ್ವದ ಅತ್ಯಂತ ದೊಡ್ಡ ಯೋಜನೆಯನ್ನು ಇದೀಗ ಮತ್ತಷ್ಟು ವಿಸ್ತರಿಸಿರುವುದು ಪ್ರಧಾನಿಯವರಿಗೆ ಬಡಜನರ ಕುರಿತು ಇರುವ ಕಳಕಳಿಯನ್ನು ಅನಾವರಣಗೊಳಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?