ಉಪ್ಪಿನಂಗಡಿ:ಟ್ಯಾಂಕರ್ ಪಲ್ಟಿ- ಗ್ಯಾಸ್ ಲೀಕ್,ರಾ.ಹೆ.ಸಂಚಾರ ಸ್ಥಗಿತ
Team Udayavani, Dec 2, 2018, 10:46 AM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಉಪ್ಪಿನಂಗಡಿ- ನೆಲ್ಯಾಡಿ ನಡುವಿನ ಬೆದ್ರೋಡಿ ಬಳಿಯಿರುವ ತೂಗುಸೇತುವೆಯ ತಿರುವಿನಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗ್ಯಾಸ್ ಸೋರಿಕೆಯಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಮತ್ತು ಪೊಲೀಸರು ಆಗಮಿಸಿದ್ದು,
ಮುಂಜಾಗ್ರತಾ ಕ್ರಮವಾಗಿ ಬೆದ್ರೋಡಿ ಆಸುಪಾಸಿನ ,ತೂಗುಸೇತುವೆಯ ಆಸುಪಾಸಿನ, ಮೊಗೆರಡ್ಕ ನದಿ ಕಿನಾರೆಯವರೆಗಿನ ಮನೆಯವರು ಯಾವುದೇ ಬೆಂಕಿ ಉತ್ಪತ್ತಿಯಾಗುವ ವಸ್ತುವನ್ನು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆ ಒಡ್ಡಲಾಗಿದ್ದು, ಬೆಂಗಳೂರಿನಿಂದ ಬರುವ ವಾಹನ ಸವಾರರಿಗೆ ಸುಬ್ರಹ್ಮಣ್ಯ -ಕಡಬ ಮೂಲಕ ತೆರಳಬೇಕಾಗಿದೆ. ಉಪ್ಪಿನಂಗಡಿಯಿಂದ ತೆರಳುವವರು ಅಲಂಗಾರು ಮೂಲಕ ತೆರಳಬೇಕಾಗಿದೆ.
ಗ್ಯಾಸ್ ಸೋರಿಕೆ ತಡೆಯಲು ಮಂಗಳೂರಿನಿಂದ ತಜ್ಞರು ತೆರಳಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು