24ಗಂಟೆಯೊಳಗೆ ಹಂತಕರನ್ನು ಬಂಧಿಸಿ; ಸಿಎಂ, CBIಗೆ ಒಪ್ಪಿಸಿ; ಇಂದ್ರಜಿತ್
Team Udayavani, Sep 6, 2017, 10:49 AM IST
ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್(55 ವರ್ಷ) ಹಂತಕರನ್ನು 24 ಗಂಟೆಯೊಳಗೆ ಬಂಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ನೀವ್ ಏನ್ ಮಾಡ್ತಿರೋ ನನಗೆ ಗೊತ್ತಿಲ್ಲ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು 24ಗಂಟೆಯೊಳಗೆ ಪತ್ತೆ ಹಚ್ಚಿ ಎಂದು ಸಿಎಂ ಡಿಜಿಪಿ ರೂಪ್ ಕುಮಾರ್ ದತ್ತಾಗೆ ಖಡಕ್ ಆದೇಶ ನೀಡಿದ್ದಾರೆ ಎಂದು ವರದಿ ಹೇಳಿದೆ.
ಮಂಗಳವಾರ ರಾತ್ರಿ ಗೌರಿ ಲಂಕೇಶ್ ರಾಜರಾಜೇಶ್ವರಿ ನಗರದಲ್ಲಿರುವ ಮನೆಗೆ ಆಗಮಿಸಿ ಕಾರಿನಿಂದ ಇಳಿದು ಹೋಗುತ್ತಿರವ ವೇಳೆಯಲ್ಲೇ ಬೈಕ್ ನಲ್ಲಿ ಆಗಮಿಸಿದ್ದ ದುಷ್ಕರ್ಮಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿತ್ತು.
ಗೌರಿ ಲಂಕೇಶ್ ಹಂತಕರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಮೂರು ತನಿಖಾ ತಂಡವನ್ನು ರಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ. ಘಟನೆ ಬಗ್ಗೆ ಸಿದ್ದರಾಮಯ್ಯನವರು ಕ್ಷಣ, ಕ್ಷಣದ ಮಾಹಿತಿ ಪಡೆಯುತ್ತಿರುವುದಾಗಿ ವರದಿ ವಿವರಿಸಿದೆ.
ಸಿಬಿಐ ತನಿಖೆಗೊಪ್ಪಿಸಿ: ಇಂದ್ರಜಿತ್ ಲಂಕೇಶ್
ಗೌರಿ ಲಂಕೇಶ್ ಹತ್ಯೆಯ ತನಿಖೆಯನ್ನು ರಾಜ್ಯ ಸರ್ಕಾರ ನಡೆಸುವುದು ಬೇಡ, ಗೃಹ ಇಲಾಖೆ ಮೇಲೆ ನನಗೆ ನಂಬಿಕೆ ಇಲ್ಲ. ಅದನ್ನು ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಸಹೋದರ ಇಂದ್ರಜಿತ್ ಲಂಕೇಶ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ