![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ಗುಂಡ್ಲುಪೇಟೆಗೆ ಗೀತಾ ಕಾಂಗ್ರೆಸ್ ಅಭ್ಯರ್ಥಿ
Team Udayavani, Feb 13, 2017, 3:45 AM IST
![geeta.jpg](https://www.udayavani.com/wp-content/uploads/2017/02/12/geeta-620x386.jpg)
ಬೆಂಗಳೂರು/ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ದಿ.ಮಹದೇವ ಪ್ರಸಾದ್ ಪತ್ನಿ, ಗೀತಾ ಮಹದೇವಪ್ರಸಾದ್ ಅವರೇ ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದ
ರಾಮಯ್ಯ ಘೋಷಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ಭಾನುವಾರ ನಡೆದ
ದಿ.ಎಚ್.ಎಸ್.ಮಹದೇವ ಪ್ರಸಾದ್ ಅವರ ಮಹಾಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಮ್ಮ ಭಾಷಣದುದ್ದಕ್ಕೂ ಮಹದೇವಪ್ರಸಾದ್ ಅವರ ಗುಣಗಾನ ಮಾಡಿದ ಸಿದ್ದರಾಮಯ್ಯ, ಮಹದೇವಪ್ರಸಾದ್ ಅವರ ನಿಧನದಿಂದ ತೆರವಾದ ಗುಂಡ್ಲುಪೇಟೆ ಕ್ಷೇತ್ರಕ್ಕೆ ಅವರ ಪತ್ನಿ ಗೀತಾ ಅವರೇ ಪಕ್ಷದ ಅಭ್ಯರ್ಥಿ ಎಂದರು.
ಪತಿಯ ಕನಸ ಈಡೇರಿಸುವೆ: ಡಾ.ಗೀತಾ ಮಹದೇವ ಪ್ರಸಾದ್ ಮಾತನಾಡಿ, “ನನ್ನ ಪತಿಯ ಆಸೆಯಂತೆ ಅಭಿವೃದ್ಧಿ ಕನಸನ್ನು ಸಾಕಾರಗೊಳಿಸುತ್ತೇನೆ. ತಾವು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು. ಆ ಮೂಲಕ ತಾವು ಚುನಾವಣಾ ರಾಜಕಾರಣಕ್ಕೆ ಧುಮುಕುವ ಬಗ್ಗೆ ಸುಳಿವು ನೀಡಿದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.