ಅಂಬಾವಿಲಾಸ ಅರಮನೆಯಲ್ಲಿ ರತ್ನಸ್ವರ್ಣ ಸಿಂಹಾಸನ ಜೋಡಣೆ
Team Udayavani, Sep 25, 2019, 3:05 AM IST
ಮೈಸೂರು: ರಾಜ ಮನೆತನದವರು ನಡೆಸುವ ನವರಾತ್ರಿ ಉತ್ಸವದ ಪ್ರಮುಖ ಭಾಗವಾಗಿರುವ ಖಾಸಗಿ ದರ್ಬಾರ್ಗಾಗಿ ಮಂಗಳವಾರ ಅರಮನೆಯ ದರ್ಬಾರ್ ಹಾಲ್ನಲ್ಲಿ ರತ್ನಖಚಿತ ಸ್ವರ್ಣ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ನವರಾತ್ರಿ ಹಿನ್ನೆಲೆಯಲ್ಲಿ ಸೆ.29ರಿಂದ ಅ.8ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್ ನಡೆಯಲಿದೆ.
ಸಿಂಹಾಸನ ಮತ್ತು ಭದ್ರಾಸನ ಜೋಡಣೆ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆಯಿಂದಲೇ ಅರಮನೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಶಾಂತಿ ಪೂಜೆ ನಂತರ ಬೆಳಗ್ಗೆ 10.45ಕ್ಕೆ ಅರಮನೆಯ ನೆಲಮಾಳಿಗೆಯಲ್ಲಿರುವ ಭದ್ರತಾ ಕೊಠಡಿಯನ್ನು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಯಿತು.
ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್ ಹಾಲ್ಗೆ ತರಲಾ ಯಿತು. ಸುಮಾರು 13 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ಸಿಂಹಾಸನ ಜೋಡಣೆ ಬಳಿಕ ಅರ ಮನೆಯ ಕನ್ನಡಿ ತೊಟ್ಟಿಯಲ್ಲಿ ಬೆಳ್ಳಿಯ ಭದ್ರಾಸನ ಜೋಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ