ಸಿದ್ಧವಾಗುತ್ತಿದೆ ಹೊಸ ಶೈಕ್ಷಣಿಕ ದಿನಗಳ ಮಾರ್ಗಸೂಚಿ


Team Udayavani, Jun 24, 2020, 3:08 PM IST

ಸಿದ್ಧವಾಗುತ್ತಿದೆ ಹೊಸ ಶೈಕ್ಷಣಿಕ ದಿನಗಳ ಮಾರ್ಗಸೂಚಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಶಾಲೆ ಆರಂಭ ವಿಳಂಬವಾಗುತ್ತಿರುವುದರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿ ಸರಿದೂಗಿಸಲು ದಸರಾ ರಜೆ ಮತ್ತು ಶನಿವಾರದ ರಜೆಗೆ ಕತ್ತರಿ ಪ್ರಯೋಗ ನಡೆಯಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಗಸ್ಟ್‌ ಅಂತ್ಯದವರೆಗೂ ಶಾಲಾರಂಭದ ನಿರ್ಧಾರವನ್ನು ಸರ್ಕಾರ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ, ಸರ್ಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ನಡೆಸಿರುವ ಪಾಲಕ, ಪೋಷಕರ ಮತ್ತು ಶಾಲಾಭಿವೃದ್ಧಿ ಹಾಗೂ
ಮೇಲುಸ್ತುವಾರಿ ಸಮಿತಿ ಸಭೆಯಲ್ಲೂ ಶಾಲಾರಂಭ ಸದ್ಯಕ್ಕೆ ಬೇಡ ಎಂಬ ಆಗ್ರಹವನ್ನೇ ಪಾಲಕ, ಪೋಷಕರು ಇಲಾಖೆ ಮುಂದಿಟ್ಟಿದ್ದಾರೆ. ಇಲಾಖೆಯೂ ಈ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಪೂರ್ವದಲ್ಲೇ ಮಾರ್ಗಸೂಚಿ ಸಿದ್ಧಪಡಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ.

2019 -20ನೇ ಸಾಲಿನಲ್ಲಿ ಶೈಕ್ಷಣಿಕ ತರಗತಿ ಮೇ 29ರಿಂದ ಆರಂಭಗೊಂಡು ಅ.5ರ ತನಕ ನಡೆದಿತ್ತು. ನಂತರ ಅ.6ರಿಂದ 20ರವರೆಗೆ (15ದಿನ) ದಸರಾ ರಜೆ ನೀಡಲಾ ಗಿತ್ತು. ಅ.21  ರಿಂದ ಪುನರ್‌ ಆರಂಭಗೊಂಡ ಶಾಲಾ ತರಗತಿಗಳು ಏ.11  ರವರೆಗೆ ನಡೆಯಬೇಕಿತ್ತು. ಕೋವಿಡ್ ದಿಂದಾಗಿ ಏಪ್ರಿಲ್‌ ಮತ್ತು ಮಾರ್ಚ್‌ ತಿಂಗಳ ತರಗತಿ ಸರಿಯಾಗಿ ನಡೆದಿಲ್ಲ.

ಏ.12ರಿಂದ ಆರಂಭವಾಗಬೇಕಿದ್ದ ಬೇಸಿಗೆ ರಜೆ ಕೋವಿಡ್ ಹೊಡೆತಕ್ಕೆ ಮಾರ್ಚ್‌ ಕೊನೇ ವಾರದಿಂದಲೇ ಘೋಷಣೆ  ಯಾಗಿತ್ತು. 2019-20ನೇ ಸಾಲಿನಲ್ಲಿ ಶೈಕ್ಷಣಿಕ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆದಿದೆ. ಪರೀಕ್ಷೆ ಮಾತ್ರ ನಡೆಸಲು ಸಾಧ್ಯವಾಗಿರಲಿಲ್ಲ. 2020-21ನೇ ಸಾಲಿನಲ್ಲಿ ಶೈಕ್ಷಣಿಕ ತರಗತಿಯೇ ವಿಳಂಬವಾಗುವುದರಿಂದ ಪರ್ಯಾಯ ಮಾರ್ಗಸೂಚಿಯನ್ನು ಇಲಾಖೆ ಸಿದ್ಧಪಡಿಸುತ್ತಿದೆ.

ಪ್ರತಿ ವರ್ಷ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮೊದಲ ಅವಧಿ, ದಸರಾ ರಜೆ(ಮಧ್ಯಂತರ ರಜೆ), 2ನೇ ಅವಧಿ ಹಾಗೂ ಬೇಸಿಗೆ ರಜೆ, ವಿವೇಚನಾ ರಜೆ ಸಹಿತವಾಗಿ ಪಟ್ಟಿ ಸಿದ್ಧವಾಗುತ್ತಿತ್ತು. ಆದರೆ, 2020-21ನೇ ಸಾಲಿನ ಮಾರ್ಗಸೂಚಿಯಲ್ಲಿ ಸ್ವಲ್ಪ ಮಾರ್ಪಾಡು ಮಾಡುವ ಸಂಬಂಧ ರಾಜ್ಯ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ ಕಾರ್ಯೋನ್ಮುಖವಾಗಿದೆ. ಇದಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಿದೆ ಹಾಗೂ ಹೊಸ ಮಾರ್ಗಸೂಚಿ ಸಿದ್ಧಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ವರ್ಷ 12 ತಿಂಗಳಲ್ಲಿ 318 ಶೈಕ್ಷಣಿಕ ದಿನ ಲಭ್ಯವಾಗುತ್ತಿದ್ದು, ಅದರಲ್ಲಿ 65 ರಜೆ ದಿನಗಳಿದ್ದವು. ಜತೆಗೆ 4 ವಿವೇಚನಾ ರಜಾ ದಿನ ( ಸ್ಥಳೀಯ ಆಚರಣೆ ಅಥವಾ ಜಯಂತಿಗೆ ಸಂಬಂಧಿಸಿದ್ದು) ಸಿಗುತ್ತಿದ್ದವು. ರಜಾ ದಿನಗಳನ್ನು ಕಳೆದು 250 ದಿನ ಶೈಕ್ಷಣಿಕ ತರಗತಿ ನಡೆಯುತ್ತಿದ್ದವು. ಈ ವರ್ಷ ಈಗಾಗಲೇ ಜೂನ್‌ ಕಳೆದು ಹೋಗಿದೆ, ಜುಲೈ-ಆಗಸ್ಟ್‌ನಲ್ಲಿ ಶಾಲೆ ಆರಂಭಿಸಬಹುದಾದ ಪರಿಸ್ಥಿತಿಯಿಲ್ಲ. ಹೀಗಾಗಿ ಸೆಪ್ಟೆಂಬರ್‌ ನಂತರ(ಪ್ರಾಥಮಿಕ, ಪೂರ್ವ ಪ್ರಾಥಮಿಕ ಹೊರತು ಪಡಿಸಿ) ಶಾಲೆ ಆರಂಭವಾದರೂ, ಅಕ್ಟೋಬರ್‌ನಲ್ಲಿ ದಸರಾ ರಜೆ ಇರುವುದಿಲ್ಲ ಅಥವಾ 4-5 ದಿನಕ್ಕೆ ಸೀಮಿತಗೊಳಿಸುವ ಸಾಧ್ಯತೆಯಿದೆ. ಅಲ್ಲದೆ, ಶನಿವಾರದಂದು ಪೂರ್ತಿ ತರಗತಿ ನಡೆಸಿ, ಭಾನುವಾರ ಅರ್ಧದಿನ ರಜೆ ನೀಡುವ ಅಥವಾ ಎರಡು ಭಾನುವಾರಕ್ಕೊಮ್ಮೆ ರಜಾ ನೀಡುವ ಅಥವಾ ಸರ್ಕಾರಿ ರಜೆಗಳ ಪ್ರಮಾಣ ಕಡಿಮೆಗೊಳಿಸುವ ಬಗ್ಗೆಯೂ ಸಮಿತಿ ಚಿಂತನೆ ನಡೆಸುತ್ತಿದ್ದು, ಅತಿ ಶೀಘ್ರದಲ್ಲಿ ವರದಿಯನ್ನು ಇಲಾಖೆಗೆ ಒಪ್ಪಿಸಲಿದೆ. ಸರ್ಕಾರದ ಅನುಮತಿ ನಂತರ ಅನುಷ್ಠಾನಕ್ಕೆ ಬರಲಿದೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

2020-21ನೇ ಸಾಲಿನ ಶೈಕ್ಷಣಿಕ ದಿನ ಮತ್ತು ರಜಾ ದಿನಗಳ ಬಗ್ಗೆ ರಾಜ್ಯ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ವರದಿ ಸಿದ್ಧವಾಗುತ್ತಿದೆ. ಯಾವ ರಜೆ ಕಡಿತಗೊಳಿಸಬೇಕು, ತರಗತಿಗಳನ್ನು ಹೇಗೆ ನಡೆಸಬೇಕು ಎಂಬುದನ್ನು ಸಮಿತಿಯೇ ನಿರ್ಧರಿಸಲಿದೆ.
– ಉಮಾಶಂಕರ್‌, ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.