ಲೈಂಗಿಕ ಕಿರುಕುಳ ಬಹಿರಂಗ;ಅಪ್ರಾಪ್ತ ವಯಸ್ಕಳಿಗೆ ಬೆಂಕಿ ಹಚ್ಚಿ ಕೊಲೆ!
Team Udayavani, Dec 3, 2018, 3:15 PM IST
ವಿಜಯಪುರ: ಬೆಚ್ಚಿ ಬೀಳುವ ಅಂತ್ಯಂತ ಕ್ರೂರ ಘಟನೆಯೊಂದರಲ್ಲಿ ಲೈಂಗಿಕ ಕಿರುಕುಳ ನೀಡಿದ್ದನ್ನು ಬಹಿರಂಗ ಪಡಿಸಿದ್ದಕ್ಕಾಗಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳನ್ನು ಬೆಂಕಿ ಹಚ್ಚಿ ಕೊಂದ ಘಟನೆ ನಡೆದಿದೆ.
ರತ್ನಾಪುರ ಗ್ರಾಮ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ರಾಕ್ಷಸೀ ಕೃತ್ಯ ನಡೆದಿದ್ದು, ವಿವಾಹಿತ ಮತ್ತು ಇನ್ನೋರ್ವ ಯುವಕ 14 ರ ಹರೆಯದ ಬಾಲಕಿಗೆ ನಿರಂತರವಾಗಿ ಕಿರುಕುಳ ನೀಡಿದ್ದರು, ಮಾತ್ರವಲ್ಲದೆ ಬಹಿರಂಗ ಪಡಿಸದಂತೆ ಬೆದರಿಕೆಯನ್ನೂ ಹಾಕಿದ್ದರು.
ಬಾಲಕಿ ಪೋಷಕರ ಬಳಿಕ ತನಗೆ ನಿರಂತರ 2 ತಿಂಗಳಿನಿಂದ ನೀಡುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದು, ಆ ಬಳಿಕ ಆಕ್ರೋಶಗೊಂಡ ಇಬ್ಬರು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಶಂಕರ ಹಿಪ್ಪರಕರ (24) ಮತ್ತು ಮೋಹನ್ ಎಡವೆ (19)ಎನ್ನುವರು ಕೃತ್ಯ ಎಸಗಿರುವ ಆರೋಪಿಗಳಾಗಿದ್ದು ಇಬ್ಬರನ್ನೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಕರ ವಿವಾಹಿತನಾಗಿದ್ದಾನೆ.
ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ. ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ನಮ್ಮ ಮಗಳಿಗಾದ ರೀತಿಯಲ್ಲೇ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ