ಗ್ರಾಮ ಪಂಚಾಯತ್ಗಳಿಗೆ ಗಾಂಧಿ ಪ್ರಶಸ್ತಿ ಕೊಡಿ
ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ "ಉದಯವಾಣಿ' ವರದಿ
Team Udayavani, Sep 14, 2022, 7:15 AM IST
ಬೆಂಗಳೂರು: ಅತ್ಯುತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತ್ಗೆ ಗಾಂಧಿ ಜಯಂತಿ ಯಂದು ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಕುರಿತು “ಉದಯವಾಣಿ’ ಪ್ರಕಟಿಸಿದ ವಿಶೇಷ ವರದಿ ಮಂಗಳವಾರ ಮೇಲ್ಮನೆಯಲ್ಲಿ ಪ್ರತಿಧ್ವನಿಸಿತು.
ಸೆ. 12ರಂದು “ಈ ವರ್ಷವೂ ಗ್ರಾ.ಪಂ.ಗಳಿಗೆ ಗಾಂಧಿ ಪುರಸ್ಕಾರ ಕನಸು?’ ಎಂಬ ಶೀರ್ಷಿಕೆಯಡಿ “ಉದಯ ವಾಣಿ’ಯು ಮುಖಪುಟ ದಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ, ಗ್ರಾಮ ಪಂಚಾಯತ್ಗಳ ಆರ್ಥಿಕ ಮತ್ತು ಆಡಳಿತಾತ್ಮಕ ಸಾಧನೆ ಆಧರಿಸಿ ಅವುಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಪ್ರತೀ ತಾಲೂಕಿನ ಒಂದು ಗ್ರಾ.ಪಂ. ಗೆ ಮಹಾತ್ಮ ಗಾಂಧೀಜಿ ಜಯಂತಿಯಾದ ಅಕ್ಟೋಬರ್ 2ರಂದು ಗಾಂಧಿ ಪುರ ಸ್ಕಾರ ನೀಡಲಾಗುತ್ತಿದೆ. ಆದರೆ 2019-20 ಮತ್ತು 2020-21ನೇ ಸಾಲಿ ನಲ್ಲಿ ಪಂಚಾಯತ್ಗಳನ್ನು ಆಯ್ಕೆ ಮಾಡಿ ದ್ದರೂ ಕೊರೊನಾ ಕಾರಣದಿಂದ ಪ್ರಶಸ್ತಿ ಪುರಸ್ಕಾರ ನೀಡಿಲ್ಲ.
ಈ ಬಗ್ಗೆ “ಉದಯವಾಣಿ’ ಬೆಳಕುಚೆಲ್ಲಿದೆ. ಸ್ಥಗಿತಗೊಂಡ ಗಾಂಧಿ ಪುರಸ್ಕಾರ ಯೋಜನೆಯನ್ನು ಪುನಾರಂಭಿಸಬೇಕು ಎಂದು ಆಗ್ರಹಿಸಿದರು.
ಈ ವರ್ಷದ ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾರಂಭಗೊಂಡಿಲ್ಲ. ಆರ್ಥಿಕ ಮತ್ತು ಆಡಳಿತ ಮಾನದಂಡಗಳ ಆಧಾರದ ಮೇಲೆ ಗ್ರಾ.ಪಂ. ಗಳ ಸಾಧನೆಯನ್ನು ಅಳತೆಗೋಲನ್ನಾಗಿ ಇಟ್ಟುಕೊಂಡು ಗಾಂಧಿ ಪುರಸ್ಕಾರ ಯೋಜನೆ ಜಾರಿಗೆ ತರಲಾಗಿದೆ. ಪ್ರತಿ ವರ್ಷ ನೀಡುವ ಯೋಜನೆಯನ್ನು 2019-20 ರಿಂದ ನಿಲ್ಲಿಸಲಾಗಿದೆ. ರಾಜ್ಯವು ಅಧಿಕಾರ ವಿಕೇಂದ್ರೀಕರಣದಲ್ಲಿ ಮುಂಚೂಣಿ ಯಲ್ಲಿದ್ದು, 24 ಇಲಾಖೆಗಳ 29 ಅಭಿವೃದ್ಧಿ ವಿಷಯಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿವೆ. ಇದರ ಜತೆಗೆ ಮೂಲ ಸೇವೆಗಳ ನಿರ್ವಹಣೆ, ಪೌರಸೇವೆಗಳ ಹೊಣೆ ಅವುಗಳ ಮೇಲಿದೆ. ಪುರಸ್ಕಾರವು ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಲು ಪ್ರೇರಣೆ ಆಗಲಿದೆ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ