ಬೆಂಗಳೂರಿಗೆ ನೈರ್ಮಲ್ಯ ಭಾಗ್ಯ ಕೊಡಿ


Team Udayavani, Feb 21, 2018, 12:43 PM IST

bangalorige.jpg

ವಿಧಾನ ಪರಿಷತ್ತು: “ಮುಖ್ಯಮಂತ್ರಿ ಸಿದ್ದರಾಮಯ್ಯ “ಭಾಗ್ಯಗಳನ್ನು’ ಕೊಡುವುದರಲ್ಲಿ ಸಿದ್ಧಹಸ್ತರು. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಆದರೆ ಅವರು ಬೆಂಗಳೂರಿಗೆ ನೈರ್ಮಲ್ಯ ಭಾಗ್ಯ ಕೊಟ್ಟಿಲ್ಲ. ಇವತ್ತು ಬೆಂಗಳೂರು ಐಟಿ ಸಿಟಿ ಹೋಗಿ ತಿಪ್ಪೆಗುಂಡಿಗಳ ಪಟ್ಟಣ ಆಗಿದೆ’ ಹೀಗೆಂದು ಸರ್ಕಾರದ ಕಾಲೆಳೆದವರು ಬಿಜೆಪಿಯ ಹಿರಿಯ ಸದಸ್ಯ ರಾಮಚಂದ್ರಗೌಡ. 

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ಪ್ರಸ್ತಾಪದ ಮೇಲೆ ಮಾತನಾಡಿದ ಅವರು, ಈ ಸರ್ಕಾರ ಬೆಂಗಳೂರಿಗೆ ತಿಪ್ಪೆಗುಂಡಿ ಭಾಗ್ಯ ಕೊಟ್ಟಿದೆ. ನೋಡಿದ ಕಡೆಗೆಲ್ಲ ಕಸದ ರಾಶಿ ಕಾಣುತ್ತದೆ. ರಾಜಧಾನಿಯ ಕಸದ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ಸೋತಿದೆ ಎಂದರು. ಬಿಜೆಪಿ ಆಡಳಿತದ ಐದು ವರ್ಷಗಳಲ್ಲಿ ಬೆಂಗಳೂರಿನ ಸ್ಥಿತಿ ಹೇಗಾಗಿತ್ತು ಅದನ್ನೂ ಹೇಳಿ ಎಂದು ಕಾಂಗ್ರೆಸ್‌ ಸದಸ್ಯರು ಕೆಣಕಿದರು.

ಮೂಗುತಿಯೇ ಭಾರ: ಬಜೆಟ್‌ ಗಾತ್ರಕ್ಕಿಂತ ಸಾಲದ ಮೊತ್ತ ಹೆಚ್ಚಾಗಿದೆ. ಇದೊಂದು ರೀತಿ “ಮೂಗಿಗಿಂತ ಮೂಗುತಿ ಭಾರ’ ಎಂಬಂತಾಗಿದೆ. ಸಾಲ ಮಾಡಿ ತುಪ್ಪ ತಿನ್ನುವುದು ಸರಿಯಲ್ಲ ಎಂದು ರಾಮಚಂದ್ರಗೌಡ ಹೇಳಿದರು. ನಿಮ್ಮ ಸರ್ಕಾರದಲ್ಲಿ ಸಾಲ ಮಾಡಿರಲಿಲ್ಲವಾ? ಅಭಿವೃದ್ಧಿ ಯೋಜನೆಗಳು ಕಾರ್ಯಗತಗೊಳ್ಳಬೇಕಾದರೆ ಸಾಲ ಅನಿವಾರ್ಯ.

ಅಷ್ಟಕ್ಕೂ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಯಾವತ್ತೂ ಆರ್ಥಿಕ ಶಿಸ್ತು ಕಾಯ್ದೆಯನ್ನು ಮೀರಿಲ್ಲ. ರಾಜ್ಯ ಸರ್ಕಾರದ ಸಾಲದ ಬಗ್ಗೆ ಮಾತನಾಡುವ ನೀವು, ಕೇಂದ್ರದಲ್ಲಿ ಸಾಲ ಮಾಡಿ ದೇಶ ಬಿಟ್ಟು ಹೋದವರ ಬಗ್ಗೆಯೂ ಮಾತನಾಡಬೇಕು ಎಂದು ಉಗ್ರಪ್ಪ ಮತ್ತಿತರರು ತಿರುಗೇಟು ನೀಡಿದರು.

ಡ್ರಗ್ಸ್‌ ಸಿಗುತ್ತೆ: ಲೇಹರ್‌ ಸಿಂಗ್‌ ಮಾತನಾಡಿ, ಬೆಂಗಳೂರಿನ ಮಲ್ಯ ರಸ್ತೆಯಲ್ಲಿ ಎಂಟು ಕಡೆ ಡ್ರಗ್ಸ್‌ ಸಿಗುತ್ತದೆ. ಸುತ್ತಲಿನ ಪಬ್‌, ಬಾರ್‌ ಮತ್ತು ಕ್ಲಬ್‌ಗಳಲ್ಲಿ ಪ್ರತಿಷ್ಠಿತರು, ಪ್ರಭಾವಿಗಳ ಮಕ್ಕಳು ಮೋಜು ಮಾಡುತ್ತಾರೆ. ಎಲ್ಲಾ ಪಕ್ಷಗಳ ರಾಜಕಾರಣಿಗಳ ಮಕ್ಕಳೂ ಇದಕ್ಕೆ ಹೊರತಾಗಿಲ್ಲ. ಈ ಎಲ್ಲ ವಿಷಯ ಪೊಲೀಸರಿಗೆ ಗೊತ್ತಿದೆ.

ಆದರೆ, ಅವರು ಅಸಹಾಯಕರಾಗಿದ್ದಾರೆ. ಪೊಲೀಸ್‌ ಠಾಣೆಗಳ ಮೂಲಸೌಕರ್ಯಗಳ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಹೇಳಲಾಗಿದೆ. ಆದರೆ, ಪೊಲೀಸರು ಘನತೆ ಮತ್ತು ನೈತಿಕ ಸ್ಥೈರ್ಯದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಬೇಕು. ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಸಲಹೆ ನೀಡಿದರು. 

ಭ್ರಷ್ಟರು ಮತ್ತು ಕ್ರಿಮಿನಲ್‌ಗ‌ಳಿಗೆ ಚುನಾವಣೆಯಲ್ಲಿ ಟಿಕೆಟ್‌ ಕೊಡಬೇಡಿ ಎಂದು ಕಾಂಗ್ರೆಸ್‌ ಪಕ್ಷಕ್ಕೆ ಮನವಿ ಮಾಡುತ್ತೇನೆ. ನಮ್ಮ (ಬಿಜೆಪಿ) ಪಕ್ಷಕ್ಕೂ ಇದೇ ವಿನಂತಿ ಮಾಡಿಕೊಳ್ಳುತ್ತೇನೆ.
-ಲೆಹರ್‌ಸಿಂಗ್‌, ಬಿಜೆಪಿ ಸದಸ್ಯ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.