ರಾಜ್ಯಕ್ಕೆ ವಿಶೇಷ ನೆರವು ಕೊಡಿ; ಮಳೆ ಹಾನಿ ಪರಿಶೀಲನೆಗೆ ಆಗಮಿಸಿದ ಕೇಂದ್ರ ತಂಡ

ಕಡಲ ಕೊರೆತದಿಂದ ಹಾನಿ ಹೆಚ್ಚಳದ ಬಗ್ಗೆ ಪ್ರಸ್ತಾವ ಹೆಚ್ಚು ಅನುದಾನಕ್ಕೆ ಸಿಎಂ ಆಗ್ರಹ

Team Udayavani, Sep 8, 2022, 7:18 AM IST

ರಾಜ್ಯಕ್ಕೆ ವಿಶೇಷ ನೆರವು ಕೊಡಿ; ಮಳೆ ಹಾನಿ ಪರಿಶೀಲನೆಗೆ ಆಗಮಿಸಿದ ಕೇಂದ್ರ ತಂಡ

ಬೆಂಗಳೂರು: ಮಳೆ ಹಾನಿ ಪರಿಶೀಲ ನೆಗೆ ಕೇಂದ್ರದ ತಂಡ ಆಗಮಿಸಿದೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ರಾಜ್ಯ ಸರಕಾರ ಆಗ್ರಹಿಸಿದೆ.

ಕೇಂದ್ರದ ತಂಡದ ಜತೆ ಸಮಾಲೋಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಪರಿಸ್ಥಿತಿ, ಬೆಳೆ ಹಾನಿಯ ಅಂದಾಜು, ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಕೇಂದ್ರದಿಂದ ಹೆಚ್ಚಿನ ನೆರವಿನ ನಿರೀಕ್ಷೆಯಲ್ಲಿದ್ದೇವೆ ಎಂದರು.

ಜುಲೈ ಹಾಗೂ ಆಗಸ್ಟ್‌ನಲ್ಲಿ ನಿರಂತರ ಮಳೆಯಿಂದ ಉಂಟಾದ ನಷ್ಟದ ಬಗ್ಗೆ ತಂಡಕ್ಕೆ ಮನವರಿಕೆ ಮಾಡಿದ ಅವರು, ರಾಜ್ಯ ಸರಕಾರವು ಅತ್ಯಂತ ನಿಖರ, ಪಾರದರ್ಶಕ ವಾಗಿ ಹಾನಿಯ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರಕಾರ ಹೆಚ್ಚು ನೆರವು ಒದಗಿಸಬೇಕು ಎಂದು ಸಿಎಂ ಕೋರಿದರು.

ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ, ರಾಮನಗರದ ರೇಷ್ಮೆ ರೀಲಿಂಗ್‌ ಘಟಕ ಹಾಗೂ ಟ್ವಿಸ್ಟಿಂಗ್‌ ಘಟಕಗಳಿಗೆ ಆದ ಹಾನಿ ವಿವರಿಸಲಾಯಿತು.

ಸಂಕಷ್ಟದಲ್ಲಿರುವ ಈ ಕುಟುಂಬಗಳಿಗೆ ಮಾನವೀಯ ದೃಷ್ಟಿಯಿಂದ ಹೆಚ್ಚು ನೆರವು ನೀಡಬೇಕು ಎಂದು ಸಿಎಂ ಹೇಳಿದರು.

ಕಡಲಕೊರೆತ ಹಾನಿ: ಹೆಚ್ಚಿನ ನೆರವು ಅಗತ್ಯ
ರಾಜ್ಯ 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಗಳನ್ನು ಕೈಗೊಳ್ಳಲಾಗಿದೆ. ಆದರೆ ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು ಸಾಕಷ್ಟು ಹಾನಿ ಉಂಟಾಗಿದೆ. ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಬೊಮ್ಮಾಯಿ ಪ್ರತಿಪಾದಿಸಿದರು.

ಮಳೆ ಹಾನಿ ಪರಿಶೀಲನೆ: ದ.ಕ. ಜಿಲ್ಲೆಗೆ ತಂಡ ಆಗಮನ
ಮಂಗಳೂರು: ಮಳೆ ಹಾನಿ ಪರಿಶೀಲಿ ಸಲು ಕೇಂದ್ರ ತಂಡ ಬುಧವಾರ ಜಿಲ್ಲೆಗೆ ಆಗಮಿಸಿದೆ. ಐಎಎಸ್‌ ಶ್ರೇಣಿಯ ಮೂವರು ಕೇಂದ್ರ ಸರಕಾರದ ಅಧಿಕಾರಿಗಳು ಹಾಗೂ ರಾಜ್ಯದಿಂದ ಓರ್ವ ಅಧಿಕಾರಿಯನ್ನು ಕೇಂದ್ರ ತಂಡ ಒಳಗೊಂಡಿದೆ.

ಕೇಂದ್ರ ತಂಡ ಕೊಡಗಿನಿಂದ ಬುಧವಾರ ಸಂಜೆಯ ವೇಳೆಗೆ ಜಿಲ್ಲೆಗೆ ಆಗಮಿಸಿತು. ಸುಳ್ಯತಾಲೂಕಿನ ಹರಿಹರ ಪಲ್ಲತಡ್ಕ, ಕೊಲ್ಲಮೊಗರು,ಕಲ್ಮಕಾರು ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಆಗಿರುವ ಹಾನಿಯ ಮಾಹಿತಿಯನ್ನು ಜಿಲ್ಲಾಡಳಿತದಿಂದ ಪಡೆದುಕೊಂಡಿತು. ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಚಿತ್ರಣದ ಮೂಲಕ ಸಂಭವಿಸಿರುವ ನಷ್ಟಗಳ ಬಗ್ಗೆ ತಂಡಕ್ಕೆ ವಿವರಿಸಿದರು. ಕೇಂದ್ರ ತಂಡ ಗುರುವಾರವೂ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸಲಿದೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.