ಶಿವಮೊಗ್ಗ ಜೆಡಿಎಸ್ಗೆ ಬಿಟ್ಟು ಕೊಟ್ಟಿಲ್ಲವೇ?
Team Udayavani, Feb 6, 2019, 1:08 AM IST
ಬೆಳಗಾವಿ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಹೆಚ್ಚು ಸದೃಢವಾಗಿದ್ದರೂ ಜೆಡಿಎಸ್ಗೆ ಅದನ್ನು ಬಿಟ್ಟು ಕೊಡಲಾಗಿದ್ದು, ಅದೇ ರೀತಿ ಮಂಡ್ಯದಲ್ಲೂ ಗೆಲ್ಲುವ ಅಭ್ಯರ್ಥಿಯೇ ಆಯ್ಕೆಯಾಗುತ್ತಾರೆ. ಇಲ್ಲಿ ಪ್ರತಿಷ್ಠೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೆಡಿಎಸ್ಗೆ ಪರೋಕ್ಷ ವಾಗಿ ಟಾಂಗ್ ನೀಡಿದರು.
ತಾಲೂಕಿನ ಹುದಲಿ ಗ್ರಾಮದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿ, ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ನ ಮಧು ಬಂಗಾರಪ್ಪ ಅವರಿಗೆ ಬಿಟ್ಟು ಕೊಡಲಾಗಿದೆ. ಅದರಂತೆ ಮಂಡ್ಯ ಕ್ಷೇತ್ರದಲ್ಲಿ ಯಾರಿಗೆ ಗೆಲುವಿನ ಅವಕಾಶ ಹೆಚ್ಚಿದೆಯೋ ಆ ಪ್ರಕಾರ ತೀರ್ಮಾನ ತೆಗೆದುಕೊಳ್ಳಲಾಗುವುದು. ಯಾರು ಎಲ್ಲಿ ಗೆಲ್ಲುತ್ತಾರೆಂಬ ಲೆಕ್ಕಾಚಾರದ ಮೇಲೆಯೇ ಕಾಂಗ್ರೆಸ್-ಜೆಡಿಎಸ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿವೆ. ಮಂಡ್ಯ ಜಿಲ್ಲೆಗೆ ಸುಮಲತಾ ಕೊಡುಗೆ ಏನು ಎಂಬುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಲ್ಲ. ಸದ್ಯಕ್ಕೆ ಈ ಚರ್ಚೆ ಅಪ್ರಸ್ತುತ ಎಂದರು.ಮತ್ತೆ ಶಾಸಕಾಂಗ ಸಭೆ ಕರೆದು ವಿಪ್ ಜಾರಿ ಮಾಡಲಾಗುವುದು. ಅನಿವಾರ್ಯವಾದರೆ ಅತೃಪ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದುಎಚ್ಚರಿಕೆ ನೀಡಿದರು.