ಜ.31ರಿಂದ ಜಾಗತಿಕ ಉದ್ಯಮಶೀಲತೆ ಶೃಂಗಸಭೆ
Team Udayavani, Dec 22, 2019, 3:00 AM IST
ಬೆಂಗಳೂರು: ಐಐಟಿ ಖಾರಗ್ಪುರ ವತಿಯಿಂದ “ಜಾಗತಿಕ ಉದ್ಯಮಶೀಲತೆ ಶೃಂಗಸಭೆ -2020’ನ್ನು ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಶೃಂಗಸಭೆಯು ಉದ್ಯಮಶೀಲತಾ ವೇದಿಕೆಯಾಗಲಿದ್ದು, ಹೊಸ ಹಾಗೂ ಯುವ ಉದ್ಯಮಿಗಳು, ಶ್ರೇಷ್ಠ ಉದ್ಯಮಿಗಳು, ಬಂಡವಾಳಶಾಹಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಹಿಂದಿನ ಆವೃತ್ತಿಗಳಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಸೇರಿದಂತೆ ಅನೇಕ ಉದ್ಯಮ ದಿಗ್ಗಜರು ಭಾಗವಹಿಸಿದ್ದರು. ಅದೇ ರೀತಿ ಈ ಬಾರಿ ಸ್ಯಾಮ್ಸಂಗ್, ಮೈಕ್ರೋಸಾಫ್ಟ್, ಡೆಲ್, ಐಬಿಎಂ, ಇಂಟೆಲ್, ಫ್ಲಿಪ್ಕಾರ್ಟ್, ಅಮೆಜಾನ್ ವೆಬ್ ಸರ್ವೀಸಸ್, ಡೆಲಾಯ್ಡ್ನಂತಹ ದೈತ್ಯ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಕಾರ್ಯಾಗಾರಗಳು, ಚರ್ಚೆಗಳ ಮೂಲಕ ಉದ್ಯಮಶೀಲ ಪ್ರಯತ್ನಗಳು ಮತ್ತು ಅನುಭವಗಳ ವಿನಿಮಯವಾಗಲಿದೆ.
ಜತೆಗೆ ಹೊಸ ಸಾರ್ಟ್ ಆಪ್ ಕಂಪನಿಗಳಿಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ವೇದಿಕೆ ಒದಗಿಸಲಾಗಿದೆ. ಈ ಶೃಂಗಸಭೆ ಪ್ರವೇಶ ನೋಂದಣಿ ಆರಂಭವಾಗಿದ್ದು, ಡಿ.25 ಕೊನೆಯ ದಿನವಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ https://reg-ges.ecell-iitkgp.org ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ