ಗೋವಾ ಕನ್ನಡಿಗರ ನೆರವಿಗೆ ಧಾವಿಸಲು ಒತ್ತಾಯ
Team Udayavani, Mar 14, 2020, 3:02 AM IST
ವಿಧಾನ ಪರಿಷತ್: ಅತಂತ್ರ ಸ್ಥಿತಿಯಲ್ಲಿರುವ ಗೋವಾ ಕನ್ನಡಿಗರ ರಕ್ಷಣೆಗೆ ಸರ್ಕಾರ ಧಾವಿಸಬೇಕು ಎಂದು ಜೆಡಿಎಸ್ನ ಬಸವರಾಜ ಹೊರಟ್ಟಿ ಒತ್ತಾಯಿಸಿದರು. ಮೇಲ್ಮನೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಗೋವಾ ಜನರ ಹಿತ ಕಾಯಲು ನಡೆಯುತ್ತಿರುವ “ಪೋಗೋ ಆಂದೋಲನ’ದ ಮೂಲಕ ದಶಕಗಳಿಂದ ಗೋವಾದಲ್ಲಿ ನೆಲೆಸಿರುವ ಕನ್ನಡಿಗರನ್ನು ಬಲವಂತವಾಗಿ ಹೊರ ಹಾಕಲಾಗುತ್ತಿದೆ.
ಆರು ತಿಂಗಳಿಂದ ಗೋವಾದಲ್ಲಿ ನಡೆಯುತ್ತಿರುವ ಈ ಆಂದೋಲನಕ್ಕೆ ಕನ್ನಡಿಗರು ತತ್ತರಿಸಿದ್ದಾರೆ ಎಂದು ಸರ್ಕಾರದ ಗಮನ ಸೆಳೆದರು. ಗೋವಾದ 13.60 ಲಕ್ಷ ಜನಸಂಖ್ಯೆಯಲ್ಲಿ ಸುಮಾರು ನಾಲ್ಕು ಲಕ್ಷ ಕನ್ನಡಿಗರಿದ್ದಾರೆ. ಇದೀಗ ಜಮ್ಮು-ಕಾಶ್ಮೀರಕ್ಕೆ ಈ ಹಿಂದೆ ನೀಡಿದ್ದ 370ರ ವಿಶೇಷ ಸ್ಥಾನಮಾನದ ಮಾದರಿಯಲ್ಲಿ ಗೋವಾ ರಕ್ಷಣೆಗಾಗಿ ಆರಂಭವಾಗಿರುವ “ಪೋಗೋ ಅಭಿಯಾನ’ದಿಂದ ಕನ್ನಡಿಗರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ಅವರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಧ್ವನಿಗೂಡಿಸಿದ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ, ಗೋವಾದಲ್ಲಿ ಉತ್ತರ ಕರ್ನಾಟಕ ಭಾಗದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗೋವಾ ವಿಮೋಚನೆಯಲ್ಲಿ ಕನ್ನಡಿಗರದು ಪ್ರಮುಖ ಪಾತ್ರವಿದೆ. ಹೀಗಾಗಿ, ರಾಜ್ಯ ಸರ್ಕಾರ ಒಂದು ನಿಯೋಗವನ್ನು ಗೋವಾಗೆ ಕಳುಹಿಸಿ, ವಾಸ್ತವಾಂಶ ತಿಳಿದುಕೊಳ್ಳಬೇಕು.
ಭಯದಲ್ಲಿ ಬದುಕುತ್ತಿರುವ ಕನ್ನಡಿಗರಿಗೆ ಧೈರ್ಯ ತುಂಬಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!