ಲಾಕರ್ ನಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ನಾಪತ್ತೆ: ಬ್ಯಾಂಕ್ ಉದ್ಯೋಗಿಗಳ ವಿರುದ್ದ ದೂರು
Team Udayavani, Aug 2, 2020, 2:07 PM IST
Representative image used
ಬೆಂಗಳೂರು: ತನ್ನ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳು ಸುರಕ್ಷಿತವಾಗಿ ಇರಬೇಕು ಎಂದು ಬ್ಯಾಂಕ್ ನ ಲಾಕರ್ ನಲ್ಲಿದ್ದ ವ್ಯಕ್ತಿ, ತನ್ನ ಒಡವೆಗಳನ್ನು ಹಿಂಪಡೆಯಲು ಬಂದಾಗ ಯಾವುದೇ ಆಭರಣಗಳು ಕಾಣದೆ ಕಂಗಾಲಾದ ಘಟನೆ ರಾಜ್ಯ ರಾಜಧಾನಿಯ ಜಯನಗರದಲ್ಲಿ ನಡೆದಿದೆ.
ಜೆಪಿನಗರದ ಉದ್ಯಮಿ ಶಿವಪ್ರಸಾದ್ ಎಂಬವರು ಬ್ಯಾಂಕ್ ಆಫ್ ಬರೋಡಾ ದ ಜಯನಗರ ಶಾಖೆಯಲ್ಲಿ ಮೂರು ಲಾಕರ್ ಗಳನ್ನು ಹೊಂದಿದ್ದಾರೆ. ಕಳೆದ ಫೆಬ್ರವರಿ ಆರರಂದು 24ನೇ ಕ್ರಮಾಂಕದ ಲಾಕರಿನಲ್ಲಿ ತನ್ನದ ಚಿನ್ನದ ಒಡವೆಗಳನ್ನು ಇರಿಸಿದ್ದರು. ನಂತರ ಫೆ.27ರಂದು ವಿವಾಹ ವಾರ್ಷಿಕೋತ್ಸವದ ಸಲುವಾಗಿ ಕೆಲವು ಆಭರಣಗಳನ್ನು ತಂದಿದ್ದರು. ಆದರೆ ನಂತರ ಲಾಕ್ ಡೌನ್ ಕಾರಣದಿಂದ ಕೆಲವು ಕಾಲ ಬ್ಯಾಂಕ್ ಗೆ ಹೋಗದೇ ಸಾಧ್ಯವಾಗದೇ ಜು.27ರಂದು ಬ್ಯಾಂಕ್ ಗೆ ಹೋದಾಗ ಒಡವೆಗಳು ಕಳವಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಒಟ್ಟು ಒಂದು ಕೆಜಿ 73 ಗ್ರಾಂ ತೂಕದ ಒಟ್ಟು 85 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಬ್ಯಾಂಕ್ ಲಾಕರಿನಿಂದ ಕಳವಾಗಿದೆ. ಬ್ಯಾಂಕ್ ಸಿಬ್ಬಂದಿ ಅಥವಾ ಇನ್ಯಾರೋ ಕಳವು ಮಾಡಿದ್ದಾರೆ ಎಂದು ಶಿವಪ್ರಸಾದ್ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಇಪ್ಪತ್ತೈದು ವರ್ಷಗಳ ಬದುಕಿನಲ್ಲಿ ಅವಳಿಗೆ ಎಪ್ಪತ್ತೈದು ಬಗೆಯ ಕಷ್ಟಗಳು ಬಂದವು
ಜಯನಗರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ನ ಎಲ್ಲಾ ಸಿಬ್ಬಂದಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ