ಗೋಲಿಬಾರ್: ಸಾಕ್ಷಿ, ಹೇಳಿಕೆಗೆ ಕೊನೇ ಅವಕಾಶ
Team Udayavani, Feb 4, 2020, 3:00 AM IST
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ.19ರಂದು ನಡೆದ ಪ್ರತಿಭಟನೆಯ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಫೆ.6ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ತನಕ ಸಾಕ್ಷ ಅಥವಾ ಹೇಳಿಕೆ ನೀಡಲು ಅಂತಿಮ ಅವಕಾಶ ನೀಡಲಾಗಿದೆ. ಘಟನೆಯಲ್ಲಿ ಗುಂಡೇಟಿನಿಂದ ನೌಶಿನ್ ಮತ್ತು ಜಲೀಲ್ ಕುದ್ರೋಳಿ ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿಯವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಯಾವುದೇ ಸಾಕ್ಷ್ಯ ಅಥವಾ ಹೇಳಿಕೆ ನೀಡಬಹುದು. ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಮಂಗಳೂರು-ಇಲ್ಲಿಗೆ ಹಾಜರಾಗಿ ಹೇಳಿಕೆ ನೀಡಲು ಅವಕಾಶವಿದೆ. ನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ