ಸರಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ಸಂಜೆ ಕಾಲೇಜು


Team Udayavani, Sep 3, 2021, 7:40 AM IST

ಸರಕಾರಿ ಕಾಲೇಜುಗಳಲ್ಲಿ ಈ ವರ್ಷದಿಂದಲೇ ಸಂಜೆ ಕಾಲೇಜು

ಬೆಂಗಳೂರು: ಉದ್ಯೋಗದ ಜತೆಗೆ ಪದವಿ ಶಿಕ್ಷಣ ಮಾಡಲು ಇಚ್ಛಿಸುವವರ ಅನುಕೂಲಕ್ಕಾಗಿ ರಾಜ್ಯ ಸರಕಾರ ಪ್ರಸಕ್ತ ಸಾಲಿನಿಂದಲೇ 11 ಮಹಾನಗರಗಳಲ್ಲಿ ಸರಕಾರಿ ಸಂಜೆ ಕಾಲೇಜುಗಳನ್ನು ಆರಂಭಿಸಲಿದೆ.

ಸಂಧ್ಯಾ ಶಕ್ತಿ ಯೋಜನೆಯಡಿಯಲ್ಲಿ  ಬೆಂಗಳೂರು, ಮಂಗಳೂರು, ಬೆಳಗಾವಿ, ತುಮಕೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಧಾರವಾಡ, ವಿಜಯಪುರ ಕಲಬುರಗಿ ಹಾಗೂ ಬಳ್ಳಾರಿಯಲ್ಲಿ ಈ ವರ್ಷವೇ ಸಂಜೆ ಕಾಲೇಜು ಆರಂಭ ಮಾಡಲಿದೆ.

ರಾಜ್ಯದಲ್ಲಿ ಈವರೆಗೂ ಅನುದಾ ನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಮಾತ್ರವೇ ಸಂಜೆ ಕಾಲೇಜು ನಡೆಸುತ್ತಿದ್ದವು. ಈಗ  11 ಮಹಾನಗರಗಳಲ್ಲಿ 11 ಸರಕಾರಿ ಕಾಲೇಜುಗಳಲ್ಲಿ ಸಂಜೆ ಕಾಲೇಜು ಆರಂಭಕ್ಕೆ ಇಲಾಖೆ ಒಪ್ಪಿಗೆ ನೀಡಿದೆ. ಜತೆಗೆ ಪ್ರತ್ಯೇಕ ಪ್ರಾಂಶುಪಾಲರು, 7 ಬೋಧಕ ಸಿಬಂದಿ,  ಆಡಳಿತಾತ್ಮಕ ಕಾರ್ಯಕ್ಕಾಗಿ ಇಬ್ಬರು ಸಿಬಂದಿ ಹಾಗೂ ಮೂವರು ಬೋಧಕೇತರ ಸಿಬಂದಿ ಸೇರಿ 13 ಮಂದಿಯನ್ನು  ನಿಯೋಜನೆ ಮಾಡಲಿದೆ. ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಿರಿಯ ಪ್ರಾಧ್ಯಾಪಕರೇ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಇಲಾಖೆಯ ಉನ್ನತ ಮೂಲ ಉದಯವಾಣಿಗೆ ಖಚಿತಪಡಿಸಿದೆ.

ಯಾವ್ಯಾವ ಕೋರ್ಸ್‌ಗಳು :

ಆಯಾ  ಕಾಲೇಜಿನ ಮೂಲ ಸೌಕರ್ಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿಯಿಂದ ಆಯ್ಕೆ ಮಾಡಿಕೊಳ್ಳುವ ಹಾಗೂ ಉದ್ಯೋಗಾವಕಾಶಕ್ಕೆ ಅನುಕೂಲ ವಾಗುವ ಕೋರ್ಸ್‌ಗಳನ್ನೇ ಸಂಜೆ ಕಾಲೇಜಿನಲ್ಲಿ ಆರಂಭಿಸಲಾಗುತ್ತದೆ. ಬಿ.ಕಾಂ. ಬಿಸಿಎ, ಬಿಎಸ್ಸಿ ಮೊದಲಾದ ಕೋರ್ಸ್‌ಗೆ ಆದ್ಯತೆ ಹೆಚ್ಚಿರಲಿದೆ. ಹಾಗೆಯೇ ಸ್ಥಳೀಯವಾಗಿ ವಿದ್ಯಾರ್ಥಿ ಗಳ ಬೇಡಿಕೆಗೆ ಅನುಗುಣವಾಗಿ ಸಂಪನ್ಮೂಲದ ಲಭ್ಯತೆ ಆಧಾರದಲ್ಲಿ ಕೆಲವು ಕೋರ್ಸ್‌ಗಳನ್ನು ತೆರೆಯ ಲಿದ್ದೇವೆ ಎಂದು ವಿವರ ನೀಡಿದರು.

ಎಲ್ಲೆಲ್ಲಿ ಸಂಜೆ ಕಾಲೇಜು :

ಬೆಂಗಳೂರಿನ ಸರಕಾರಿ ಆರ್‌.ಸಿ. ಕಾಲೇಜು, ಬೆಳಗಾವಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಮಕೂರಿನ ಬಿ.ಎಚ್‌.ರಸ್ತೆಯಲ್ಲಿರುವ ಸ. ಪ್ರ. ದರ್ಜೆ ಕಾಲೇಜು, ಮೈಸೂರಿನ ಕುವೆಂಪು ನಗರದ ಸ. ಪದವಿ ಕಾಲೇಜು,  ಶಿವಮೊಗ್ಗ ನಗರದ ಸ. ಪದವಿ ಕಾಲೇಜು, ದಾವರಣಗೆರೆಯಲ್ಲಿ ಎಂಸಿಸಿ ಬ್ಲಾಕ್‌ನಲ್ಲಿರುವ ಸರಕಾರಿ ಕಾಲೇಜು, ಮಂಗಳೂರಿನಲ್ಲಿ ರಥಬೀದಿಯಲ್ಲಿರುವ ಸರಕಾರಿ ಪದವಿ ಕಾಲೇಜು, ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಸರಕಾರಿ ಪದವಿ ಕಾಲೇಜು, ವಿಜಯಪುರದ ನವಬಾಗ್‌ ಖಾಜಾ ಕಾಲನಿಯ ಸರಕಾರಿ ಪದವಿ ಕಾಲೇಜು, ಕಲಬುರಗಿಯ ಸೇಡಂ ರಸ್ತೆಯ ಸರಕಾರಿ ಕಾಲೇಜು ಹಾಗೂ ಬಳ್ಳಾರಿಯ  ಸರಳಾದೇವಿ ಸತೀಶ್ಚಂದ್ರ ಅಗರವಾಲ್‌ ಸ. ಪದವಿ ಕಾಲೇಜಿನಲ್ಲಿ ಸಂಜೆ ಕಾಲೇಜು ತೆರೆಯಲು ಸರಕಾರ ನಿರ್ಧರಿಸಿದೆ.

ಆಯಾ ವಿಶ್ವವಿದ್ಯಾಲಯಗಳು ಅರ್ಹ ಕಾಲೇಜುಗಳಿಗೆ ಮಾನ್ಯತೆ ನೀಡಿವೆ. ಮಾನ್ಯತೆ ಸಿಕ್ಕ ಬಳಿಕ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುತ್ತದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಂಜೆ ಕಾಲೇಜು ಆರಂಭಿಸಲು ಅನುಮತಿ ಸಿಕ್ಕಿದೆ. ಈ ಸಂಬಂಧ ಶೀಘ್ರವೇ ಅಧಿಸೂಚನೆಯನ್ನು ಹೊರಡಿಸಲಾಗುವುದು.ಪ್ರೊ| ಎಸ್‌.ಮಲ್ಲೇಶ್ವರಪ್ಪ,  ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.