ಅನುದಾನಿತ ಕನ್ನಡ ಶಾಲೆಗಳಿಗೆ ಸರ್ಕಾರಿ ಬೀಗ!:


Team Udayavani, Nov 4, 2017, 7:34 AM IST

04-3.jpg

ಬೆಂಗಳೂರು: ಒಂದೇ ಒಂದು ಮಗುವಿದ್ದರೂ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ’ ಎಂದಿದ್ದ ರಾಜ್ಯ ಸರ್ಕಾರ, ಈಗ ಕಡಿಮೆ ಮಕ್ಕಳಿರುವ ಅನುದಾನಿತ ಕನ್ನಡ ಶಾಲೆಗಳಿಗೆ ಬೀಗ ಹಾಕುವ ಪ್ರಕ್ರಿಯೆ ಆರಂಭಿಸಿದೆ. ಈಗಾಗಲೇ ರಾಜ್ಯದಲ್ಲಿ 50ಕ್ಕೂ ಹೆಚ್ಚು ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ ಜಡಿಯಲಾಗಿದೆ. ಮತ್ತಷ್ಟು ಶಾಲೆಗಳನ್ನು ಬಂದ್‌ ಮಾಡಲು ಮಾಹಿತಿ ಸಂಗ್ರಹಿಸುತ್ತಿದೆ.

ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಹೆಚ್ಚಾಗಿ ವ್ಯಾಸಂಗ ಮಾಡುವ ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಬೀಗ ಹಾಕುತ್ತಿರುವುದು ಕನ್ನಡ ಪ್ರೇಮಿಗಳಲ್ಲಿ ನಿರಾಸೆ ಮೂಡಿಸಿದೆ. ಬೆಂಗಳೂರು ಮತ್ತು ಮೈಸೂರು ವಿಭಾಗದ 18 ಪ್ರೌಢಶಾಲೆ ಸೇರಿ ರಾಜ್ಯದ 50ಕ್ಕೂ ಅಧಿಕ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳನ್ನು ಈ ತನಕ ಮುಚ್ಚಲಾಗಿದೆ. ಕನ್ನಡ ರಾಜ್ಯೋತ್ಸವದ ಬೆನ್ನಲ್ಲೇ ಸರ್ಕಾರವು ಅನುದಾನಿತ ಶಾಲೆಗಳನ್ನು ಮುಚ್ಚುತ್ತಿರುವುದು ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ. ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ. ಒಂದೇ ಮಗು ಇದ್ದರೂ ಅಂತಹ ಶಾಲೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್‌ಸೇಠ್ ನೀಡುತ್ತಿದ್ದ ಹೇಳಿಕೆಗಳು ಸುಳ್ಳಾಗುತ್ತಿವೆ. ಸರ್ಕಾರದ ಅನುಮತಿ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಡಿಮೆ ಮಕ್ಕಳಿರುವ, ನಿರ್ವಹಣೆ ಚೆನ್ನಾಗಿಲ್ಲದ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುತ್ತಿದ್ದಾರೆ.

ಸರ್ಕಾರದ ಅನುದಾನ ಇಲ್ಲದೇ ಅನುದಾನಿತ ಶಾಲೆಗಳನ್ನು ನಡೆಸಲು ಸಾಧ್ಯವಿಲ್ಲ. ಅನುದಾನಿತ ಶಾಲೆಗಳಲ್ಲಿ ಬಹುತೇಕ ಶಿಕ್ಷಕರು ಸರ್ಕಾರದಿಂದಲೇ ವೇತನ ಪಡೆಯುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದಿದ್ದ ಸರ್ಕಾರಕ್ಕೆ ತನ್ನದೇ ಅನುದಾನದಿಂದ ನಡೆಯುತ್ತಿರುವ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಕನ್ನಡ ರಾಜ್ಯೋತ್ಸವ ಆಚರಿಸಿದ ಎರಡೇ ದಿನದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ 8 ಅನುದಾನಿತ ಪ್ರೌಢಶಾಲೆಗಳನ್ನು ಮುಚ್ಚಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. 

ಬೆಂಗಳೂರು ಉತ್ತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ ಸೇರಿ ಬೆಂಗಳೂರು ಮತ್ತು ಮೈಸೂರು ವಿಭಾಗದ 18 ಪ್ರೌಢಶಾಲೆಗಳನ್ನು ಈಗಾಗಲೇ ಮುಚ್ಚಲಾಗಿದೆ. ಹಾಗೆಯೇ ಈ ಎರಡು ವಿಭಾಗದಲ್ಲಿ 25 ಶಾಲೆಗಳನ್ನು ಮುಚ್ಚಲು ನೋಟಿಸ್‌ ನೀಡಲಾಗಿದೆ. ಧಾರವಾಡ ಮತ್ತು ಕಲಬುರಗಿ ವಿಭಾಗದಲ್ಲೂ 20ಕ್ಕೂ ಅಧಿಕ ಅನುದಾನಿತ ಶಾಲೆಗಳನ್ನು ಮುಚ್ಚಲಾಗಿದ್ದು, 25ಕ್ಕೂ ಅಧಿಕ ಅನುದಾನಿತ ಶಾಲೆಗಳನ್ನು ಮುಚ್ಚಲು ನೋಟಿಸ್‌ ನೀಡಿದ್ದಾರೆ.

ಡಿಡಿಪಿಐಗಳಿಗೆ ನಿರ್ದೇಶನ: ಕಳೆದ ಮೂರು ವರ್ಷದಿಂದ 25ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿರುವ ಅನುದಾನಿತ ಶಾಲೆಗಳ ಪಟ್ಟಿ ನೀಡುವಂತೆ ರಾಜ್ಯದ ಎಲ್ಲಾ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿರ್ದೇಶನ ರವಾನೆಯಾಗಿದೆ.

ವಿದ್ಯಾರ್ಥಿ, ಶಿಕ್ಷಕರಿಗೆ ಪರ್ಯಾಯ ವ್ಯವಸ್ಥೆ: ಮುಚ್ಚಿರುವ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದಲೇ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಸಮೀಪದ ಸರ್ಕಾರಿ ಅಥವಾ ಅನುದಾನಿತ ಶಾಲೆಗೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಶಿಕ್ಷಕರನ್ನು ಆಯಾ ಜಿಲ್ಲಾ ವ್ಯಾಪ್ತಿಯ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಶಿಕ್ಷಕರನ್ನು ಸಮೀಪದ ಶಾಲೆಗೆ ಕಳುಹಿಸುತ್ತಿಲ್ಲ.

ಕಾಯ್ದೆಯಲ್ಲೇ ಇದೆ ಮುಚ್ಚಲು ಅವಕಾಶ
ಸತತ ಮೂರು ವರ್ಷಗಳಿಂದ 25ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಅನುದಾನಿತ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡಿ, ಸರ್ಕಾರದ ಆದೇಶದಂತೆ ಮುಚ್ಚಲು ಕರ್ನಾಟಕ ಶಿಕ್ಷಣ ಕಾಯ್ದೆ 1983ರಲ್ಲಿ ಅವಕಾಶ ಇದೆ. ಸರ್ಕಾರದ ಅನುದಾನ ಪಡೆದು, ಮಕ್ಕಳನ್ನು ಶಾಲೆಗೆ ಕರೆತರಲು ವಿಫ‌ಲವಾಗಿರುವ ಮತ್ತು ನಿರ್ವಹಣೆ ಚೆನ್ನಾಗಿ ಮಾಡದ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

50 ಈಗಾಗಲೇ ಬಂದ್‌ ಮಾಡಿದ ಅನುದಾನಿತ ಶಾಲೆಗಳು
18 ಈಗಾಗಲೇ ಮುಚ್ಚಲ್ಪಟ್ಟ ಅನುದಾನಿತ ಪ್ರೌಢಶಾಲೆಗಳು
150 ಅಧಿಕ ಶಾಲೆಗಳಿಗೆ ಮುಚ್ಚಲು ನೋಟಿಸ್‌

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.