ಎಸ್.ಡಿ.ಎಂ.ಸಿ.ಗಳು ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸುವಂತಿಲ್ಲ: ಕಟ್ಟುನಿಟ್ಟಿನ ಸೂಚನೆ


Team Udayavani, Aug 17, 2020, 9:22 PM IST

ಎಸ್.ಡಿ.ಎಂ.ಸಿ.ಗಳು ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸುವಂತಿಲ್ಲ: ಕಟ್ಟುನಿಟ್ಟಿನ ಸೂಚನೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ.

ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆನ್ ಲೈನ್ ಶಿಕ್ಷಣವನ್ನು ನಡೆಸಲು ರಾಜ್ಯ ಸರಕಾರ ಷರತ್ತುಬದ್ಧ ಅನುಮತಿಯನ್ನೂ ನೀಡಿದೆ.

ಮಾತ್ರವಲ್ಲದೇ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಪೋಷಕರಿಂದ ಶುಲ್ಕವನ್ನು ಬಲವಂತವಾಗಿ ಪಡೆದುಕೊಳ್ಳುವಂತಿಲ್ಲ ಎಂದೂ ಸರಕಾರ ಈಗಾಗಲೇ ಸೂಚಿಸಿದೆ.

ಇವೆಲ್ಲದರ ನಡುವೆ, ರಾಜ್ಯದಲ್ಲಿರುವ ಹಲವು ಶಾಲೆಗಳಲ್ಲಿ ಎಸ್.ಡಿ.ಎಂ.ಸಿ. ಸಮಿತಿಯು ವಿದ್ಯಾರ್ಥಿಗಳಿಂದ ದೇಣಿಗೆಯನ್ನು ಸಂಗ್ರಹಿಸುವುದಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರಕಾರ ಇಂದು ಸುತ್ತೋಲೆಯನ್ನು ಹೊರಡಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ, ರಾಜ್ಯದ ಹಲವು ಶಾಲೆಗಳಲ್ಲಿ ಎಸ್.ಡಿ.ಎಂ.ಸಿ ಸಮಿತಿ ಸದಸ್ಯರು ಶಾಲಾ ವಿದ್ಯಾರ್ಥಿಗಳಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವುದು ಕಂಡುಬಂದಿತ್ತು.

ಆದರೆ ಇಂತಹ ಚಟುವಟಿಕೆಗಳು ಎಸ್.ಡಿ.ಎಂ.ಸಿ. ಸಮಿತಿ ಅಧಿಕಾರಗಳ ವ್ಯಾಪ್ತಿಯಲ್ಲಿ ಬರದೇ ಇರುವುದರಿಂದ ಈ ರೀತಿ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹಿಸುವುದು ಸರಿಯಲ್ಲ ಎಂಬುದನ್ನು ಮನಗಂಡಿರುವ ರಾಜ್ಯಸರಕಾರವು ಇಂತಹ ಪ್ರಕರತಣಗಳನ್ನು ಕೂಡಲೇ ನಿಲ್ಲಿಸುವಂತೆ ಎಲ್ಲಾ ಶಾಲೆಗಳಿಗೆ ಸೂಚನೆ ನೀಡುವಂತೆ ಚರ್ಚೆಯಾಗಿತ್ತು.

ಈ ಪ್ರಕಾರವಾಗಿ ಉಲ್ಲೇಖಿತ ಸರಕಾರದ ಅಧಿಸೂಚನೆಯ ಉಪವಿಧಿ ಸಂಖ್ಯೆ 10 ‘ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧಿಕಾರಗಳು ಹಾಗೂ ಪ್ರಕಾರ್ಯಗಳು’ ಇದರ ಕ್ರಮ ಸಂಖ್ಯೆ ಆರ್ ಪ್ರಕಾರ ‘ಈ ಉಪವಿಧಿಗಳ 10ನೇ ಕ್ಲಾಸ್ ನಲ್ಲಿ ನಮೂದಿಸಲಾಗಿರುವಂತೆ ಎಸ್.ಡಿ.ಎಂ.ಸಿ. ಸಮಿತಿಗಳು ತನ್ನ ಚಟುವಟಿಕೆಗಳ ಮುಂದುವರಿಕೆಗಾಗಿ ಹಣ ಮತ್ತು ನಿಧಿಗಳನ್ನು ಪಡೆಯಲು ಮನವಿ ಮತ್ತು ಅರ್ಜಿಗಳನ್ನು ನೀಡುವುದು ಹಾಗೂ ನಗದು ರೂಪದಲ್ಲಿ ಯಾವುದೇ ದಾನಗಳು ಅಥವಾ ದೇಣಿಗೆಗಳು, ಭದ್ರತೆಗಳು ಅಥವಾ ಚರ ಮತ್ತು ಸ್ಥಿರ ಆಸ್ತಿಗಳ ರೂಪದಲ್ಲಿ ಯಾವುದೇ ಸ್ವತ್ತನ್ನು ಸ್ವೀಕರಿಸುವುದು, ಸಂಗ್ರಹಿಸುವುದು ಹಾಗೂ ಅಂಗೀಕರಿಸುವುದು ಮತ್ತು ಅವುಗಳನ್ನು ತನ್ನ ಕಾರ್ಯ ಚಟುವಟಿಕೆಗಳಿಗೆ ಖರ್ಚು ಮಾಡುವುದಕ್ಕಿರುವ ಅವಕಾಶವನ್ನು ಶಾಲಾ ಮಕ್ಕಳ ಪೋಷಕರಿಂದ ಸಂಗ್ರಹಿಸುವುದು ಎನ್ನುವ ಅರ್ಥದ್ದಲ್ಲ’ ಎಂದು ತಿಳಿಸಲಾಗಿದೆ.

ಈ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದೇಣಿಗೆಯನ್ನು ಸಂಗ್ರಹಿಸುವುದು ಅಥವಾ ಯಾವುದೇ ಚಟುವಟಿಕೆಗಳಿಗೆ ಮಕ್ಕಳಿಂದ ಅನುದಾನ ಕೋರುವುದಕ್ಕೆ ಎಸ್.ಡಿ.ಎಂ.ಸಿ. ನಿಯಮಗಳಲ್ಲಿ ಅವಕಾಶ ಇರುವುದಿಲ್ಲ.

ಮತ್ತು ಈ ರೀತಿಯಾಗಿ ಮಕ್ಕಳಿಂದ ದೇಣಿಗೆ ಸಂಗ್ರಹಿಸುವ ಕ್ರಮ ಮಕ್ಕಳ ಭಾವನಾತ್ಮಕ ಮನಸ್ಸಿನ ಮೇಲೆ ನೋವನ್ನುಂಟುಮಾಡುವ ಸಾಧ್ಯತೆಗಳಿರುತ್ತವೆ ಹಾಗೂ ತಪ್ಪು ಸಂದೇಶ ಹರಡುವಿಕೆಗೂ ಕಾರಣವಾಗುತ್ತದೆ. ಈ ಎಲ್ಲಾ ಕಾರಣಗಳಿಂದ ರಾಜ್ಯದಲ್ಲಿನ ಯಾವುದೇ ಶಾಲೆಗಳಲ್ಲಿ ಇಂತಹ ಪ್ರಕರಣಗಳಿಗೆ ಅವಕಾಶ ನೀಡಬಾರದು ಎಂದು ರಾಜ್ಯ ಸರಕಾರ ತನ್ನ ಸೂಚನೆಯಲ್ಲಿ ಕಟ್ಟುನಿಟ್ಟಾಗಿ ಸೂಚಿಸಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.