ತರಾತುರಿಯಲ್ಲಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಬಾರದು: ಸಿದ್ದರಾಮಯ್ಯ


Team Udayavani, Jul 8, 2021, 3:48 PM IST

ತರಾತುರಿಯಲ್ಲಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಬಾರದು: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ಸೇರಿ ಆಡಳಿತ ವ್ಯವಸ್ಥೆಯೇ ಸ್ಥಗಿತಗೊಂಡಿರುವ ಹೊತ್ತಿನಲ್ಲಿ ಸರ್ಕಾರ ತರಾತುರಿಯಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಅನುಷ್ಠಾನಗೊಳಿಸಬಾರದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರಜ್ಞಾವಂತರ, ಪೋಷಕರ, ಸಾರ್ವಜನಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಕೆಲಸ ಮಾಡುತ್ತಿರುವ ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ, ಬೋಧಕ ಮತ್ತು ಲೇಖಕ-ಬರಹಗಾರರ ವಲಯದಲ್ಲಿ ಚರ್ಚೆ ಆಗದೆ ಎನ್‍ಇಪಿ-2020 ನ್ನು ತರಾತುರಿಯಲ್ಲಿ ಜಾರಿ ಮಾಡಲು ಹೊರಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎನ್‍ಇಪಿ-2020 ಅನ್ನು ಇದುವರೆಗೂ ಸಂಸತ್ತಿನಲ್ಲಿ ಮಂಡಿಸಿಲ್ಲ, ಚರ್ಚೆಯೂ ಆಗಿಲ್ಲ. ಅದೇ ರೀತಿ ರಾಜ್ಯದಲ್ಲೂ ಕರಡು ಅಧಿಸೂಚನೆ ಹೊರಡಿಸಿಲ್ಲ. ವಿಧಾನಸಭೆ / ಪರಿಷತ್‍ನಲ್ಲಿ ಚರ್ಚೆಯಾಗಿಲ್ಲ. ಸಂವಿಧಾನದ ಪರಿಚ್ಛೇದ 7ರ ಪ್ರಕಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಅಂದರೆ ಶಿಕ್ಷಣದ ವಿಚಾರದಲ್ಲಿ ರಾಜ್ಯಗಳಿಗೂ ಇರುವ ಸಮಾನ ಹಕ್ಕನ್ನು ಕಿತ್ತುಕೊಂಡು ಕೇಂದ್ರ ಬಲವಂತದಿಂದ ರಾಜ್ಯಗಳಲ್ಲಿ ಜಾರಿ ಮಾಡಲು ಹೊರಟಿದೆ. ಮೇಲ್ನೋಟಕ್ಕೆ ಇದರಲ್ಲಿ ಹಲವು ಅಪಾಯಕಾರಿಯಾದ ಶಿಫಾರಸ್ಸುಗಳು ಇರುವುದು ಗೋಚರಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ:ಕೆಆರ್ ಎಸ್ ಜಲಾಶಯದಲ್ಲಿ ಬಿರುಕು ವಿಚಾರ ಕೇವಲ ಊಹಾಪೋಹ: ಸಚಿವ ನಿರಾಣಿ

1 ರಿಂದ 8 ವಯಸ್ಸಿನ ಬುನಾದಿ ಹಂತದ ಶಿಕ್ಷಣಕ್ಕೆ ಕೇಂದ್ರೀಕೃತ ಎನ್‍ಸಿಆರ್‍ಟಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಈ ಕ್ರಮವು ಕನ್ನಡದಂತಹ ಸಂಸ್ಕೃತಿಗಳ ವಿರುದ್ಧವಾಗಿದೆ. ಈಗಾಗಲೇ ಬಹುತೇಕ ಚರಿತ್ರೆಯ ಪುಸ್ತಕಗಳಲ್ಲಿ ಕನ್ನಡದ, ಕರ್ನಾಟಕದ ಸಂಸ್ಕೃತಿ, ಆಡಳಿತ, ವಾಣಿಜ್ಯ, ಸಮಾಜಗಳ ಚಿಂತನೆಗಳೇ ಇಲ್ಲವಾಗಿದೆ. ಎನ್.ಸಿ.ಆರ್.ಟಿ ಪಠ್ಯಕ್ರಮದ ಮೂಲಕ ಇನ್ನಷ್ಟು ಸಾಂಸ್ಕೃತಿಕ ದಮನ ಮಾಡಲು ಯೋಜಿಸಲಾಗುತ್ತಿದೆ. ನಮ್ಮ ಮಕ್ಕಳು, ಕನ್ನಡ, ತೆಲುಗು, ತಮಿಳು, ಮಲೆಯಳಂ, ಕೊಡವ, ಕೊಂಕಣಿ, ತುಳು, ಮರಾಠಿ, ಒರಿಯಾ, ಬಂಗಾಳಿ, ಗುಜರಾತಿ ಮುಂತಾದ ಸಂಸ್ಕೃತಿಗಳ ಮೂಲಕ ಕಲಿಯಬೇಕು ಮತ್ತು ಯೋಚಿಸಬೇಕು. ಅದಕ್ಕಾಗಿ ಆಯಾ ರಾಜ್ಯ ಪಠ್ಯಕ್ರಮವನ್ನು ಅಳವಡಿಸಿಕೊಂಡು ಈ ನೆಲದ, ಮಣ್ಣಿನ ಸಂಗತಿಗಳನ್ನು ಪಾಠಗಳಲ್ಲಿ ಮಕ್ಕಳು ಕಲಿಯುವಂತಿರಬೇಕು. ಇದಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ತ್ರ್ರಿ ಭಾಷಾ ಸೂತ್ರವನ್ನು ಕಡ್ಡಾಯಗೊಳಿಸಿರುವುದು ಅದರಲ್ಲಿ ಇಂಗ್ಲಿಷ್ ಮತ್ತು ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿರುವುದು ಭಾಷಾ ಹೇರಿಕೆ ಮಾತ್ರವಲ್ಲದೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂಥದ್ದಾಗಿದೆ.  ಜತೆಗೆ ಸಂಸ್ಕೃತ ಭಾಷಾ ಕಲಿಕೆಗೆ ವಿಶೇಷ ಮಹತ್ವ ಕೊಡಬೇಕೆಂದು ಹೇಳಿರುವುದು, ಸಾಧ್ಯವಾದರೆ ಅದನ್ನು ಕಡ್ಡಾಯಗೊಳಿಸಬಹುದೆ ಎನ್ನುವಂತಹ ಮಾತುಗಳನ್ನೂ ಹೇಳಿರುವುದು ಅಸಾಂಗತ್ಯದ ಸೂಚನೆಯಾಗಿದೆ ಎಂದಿದ್ದಾರೆ.

ಮತೀಯವಾದಿ ಭಾಷೆಯಲ್ಲಿ ಮಾತನಾಡುವ ಎನ್‍ಇಪಿ-2020, ಎನ್‍ಸಿಆರ್‍ಟಿಯನ್ನು ಪುನರ್ ರಚಿಸಬೇಕು, ಪಠ್ಯಗಳನ್ನು ಪುನರಾಯ್ಕೆ ಮಾಡಿಕೊಳ್ಳಬೇಕು ಎಂದು ಪದೇ ಪದೇ ಹೇಳಿದೆ. ಹಾಗೆಯೆ ರಾಜ್ಯ ಸರ್ಕಾರ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ, ‘ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮದ ಸುಧಾರಣೆಗಾಗಿ ಟಾಸ್ಕ್‍ಫೋರ್ಸ್ ಉಪಸಮಿತಿ’ಯನ್ನು ರಚಿಸಿದೆ. ಈ ಸಮಿತಿಯಲ್ಲಿ ಇಂದುಪ್ರಕಾಶ್, ಮಾನಸ ನಾಗಭೂಷಣ್, ಪದ್ಮಾವತಿ ಸದಸ್ಯರಾಗಿದ್ದಾರೆ. ಈ ನಾಲ್ಕು ಜನ ಅಧ್ಯಕ್ಷರು ಮತ್ತು ಸದಸ್ಯರು ಏಕಪಕ್ಷೀಯವಾಗಿ ಕರ್ನಾಟಕದ ಉನ್ನತ ಶಿಕ್ಷಣದ ಭವಿಷ್ಯವನ್ನು ನಿರ್ಧರಿಸುವುದು ಸರಿಯೇ? ಈ ಟಾಸ್ಕ್‍ಫೋರ್ಸ್ ಸಿಬಿಸಿಎಸ್ ಪಠ್ಯಕ್ರಮದ ಸ್ವರೂಪವನ್ನು ರಚಿಸಲು ಯಾರೊಂದಿಗೆ ಸಮಾಲೋಚನೆ ನಡೆಸಿದೆ? ಯಾವ ಮಾದರಿಗಳನ್ನು ಬಳಸಿದೆ ಎನ್ನುವ ವಿವರಗಳಿಲ್ಲ. ಎನ್‍ಇಪಿ-2020 ಕ್ಕೆ ಹಲವರು ತಮ್ಮ ಪ್ರತಿಕ್ರಿಯೆ ಮತ್ತು ತಕರಾರುಗಳನ್ನು ಕಳುಹಿಸಿದ್ದಾರೆ. ಸರ್ಕಾರ ಈ ಪ್ರತಿಕ್ರಿಯೆ ಮತ್ತು ತಕರಾರುಗಳನ್ನು ಸಾರ್ವಜನಿಕರ ಅವಗಾಹನೆಗೆ ಬಹಿರಂಗಗೊಳಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ರಾಜ್ಯ,ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ 37.93ಕೋಟಿ ಲಸಿಕೆ ಪ್ರಮಾಣಗಳ ಪೂರೈಕೆ : ಕೇಂದ್ರ  

ಈಗಾಗಲೇ ಪದವಿ ತರಗತಿಗಳಿಗೆ ಕನ್ನಡದಂತಹ ಭಾಷಾ ವಿಷಯಗಳನ್ನು ಒಂದು ವರ್ಷಕ್ಕೆ ಮಾತ್ರ ಸೀಮಿತಗೊಳಿಸಬಹುದಾಗಿದೆ ಎಂದು ಈ ತಿಮ್ಮೇಗೌಡರ ನೇತೃತ್ವದ ಸಮಿತಿ ಶಿಫಾರಸ್ಸು ಮಾಡಿತ್ತು. ವಿವಿಧ ವಲಯಗಳ ಗಣ್ಯರು ಪ್ರತಿಪಕ್ಷಗಳ ಮುಖಂಡರು ವಿರೋಧ ಮಾಡಿದ ಮೇಲೆ ಉನ್ನತ ಶೀಕ್ಷಣ ಸಚಿವರು ಎರಡು ವರ್ಷಗಳಿಗೆ ಮುಂದುವರೆಸಲಾಗುತ್ತದೆ ಎಂದು ಹೇಳಿದ್ದಾರೆ. ಪದವಿ ತರಗತಿಗಳನ್ನು 4 ವರ್ಷಗಳಿಗೆ ವಿಸ್ತರಿಸಿದರೆ 3 ವರ್ಷಗಳ ಕಾಲ ಕನ್ನಡ ವಿಷಯವನ್ನು ಮುಖ್ಯ ಪಠ್ಯಕ್ರಮವೆಂದು ಕಲಿಸಬೇಕು. ಹೀಗಾಗಿ ಎನ್‍ಇಪಿ-2020 ಜಾರಿ ಮಾಡುತ್ತಿರುವ ರೀತಿ ಪಾರದರ್ಶಕವಾಗಿಲ್ಲ. ಸಂವಿಧಾನದ ಆಶಯಗಳನ್ನು ಇಂಚಿಂಚಾಗಿ ಕೊಂದು ಹಾಕುತ್ತಿರುವ ಮತ್ತು ರಾಜ್ಯಗಳ ಹಕ್ಕುಗಳನ್ನು ಒಂದೊಂದಾಗಿ ಕಸಿದುಕೊಳ್ಳುತ್ತಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಬಲವಂತಕ್ಕೆ ರಾಜ್ಯ ಸರ್ಕಾರ ಸಂಚಿನ ರೂಪದಲ್ಲಿ ತರಾತುರಿಯಲ್ಲಿ ‘ಎನ್‍ಇಪಿ-2020’ ನ್ನು ಜಾರಿ ಮಾಡಬಾರದು ಎಂದು ಆಗ್ರಹಿಸಿದ್ದಾರೆ

ಹಾಗೆಯೇ ವಿಧಾನಸಭೆ-ವಿಧಾನ ಪರಿಷತ್‍ನ ಅಧಿವೇಶನಗಳಲ್ಲಿ, ವಿಶ್ವ ವಿದ್ಯಾಲಯಗಳಲ್ಲಿ, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಮತ್ತು ಪ್ರಜ್ಞಾವಂತರು, ಪೋಷಕರ ವಲಯಗಳ ನಡುವೆ ಸಮಗ್ರ ಚರ್ಚೆಯ ನಂತರವಷ್ಟೇ ‘ಎನ್‍ಇಪಿ-2020’ ನ್ನು ಜಾರಿ ಮಾಡುವ ಕುರಿತು ಯೋಚಿಸಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.