ಸರ್ಕಾರ ಈಗಲೂ ಸುಭದ್ರ: ಜೆಡಿಎಸ್‌ ಶಾಸಕರ ವಿಶ್ವಾಸ


Team Udayavani, Jul 15, 2019, 3:06 AM IST

jds logo

ದೇವನಹಳ್ಳಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತದೆ. ಬಹುಮತ ಸಾಬೀತು ಪಡಿಸುವಲ್ಲಿ ಕುಮಾರಸ್ವಾಮಿ ಯಶಸ್ಸು ಸಾಧಿಸುತ್ತಾರೆಂದು ಜೆಡಿಎಸ್‌ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಕೋಡಗುರ್ಕಿ ಸಮೀಪದಲ್ಲಿರುವ ಪ್ರಸ್ಟೀಜ್‌ ಗಾಲ್ಫ್ಶೈರ್‌ ರೆಸಾರ್ಟ್‌ಗೆ ತೆರಳುವ ವೇಳೆ ಹಲವು ಶಾಸಕರು ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾರ್ವಜನಿಕರ ಹಣ ಬಳಸುತ್ತಿಲ್ಲ: ರೆಸಾರ್ಟ್‌ನ ಎಲ್ಲ ಖರ್ಚನ್ನು ಸ್ವಂತ ಹಣದಲ್ಲಿ ನಿಭಾಯಸುತ್ತಿದ್ದೇವೆ. ನಮಗೆ ವ್ಯವಸಾಯ, ಉದ್ದಿಮೆ ಸೇರಿ ಸಾಕಷ್ಟು ಆದಾಯವಿದೆ. ಅದರಲ್ಲೇ ಎಲ್ಲ ಖರ್ಚುಗಳನ್ನು ಭರಿಸುತ್ತಿದ್ದೇವೆ. ಈ ಖರ್ಚನ್ನು ಭರಿಸುವ ಸಾಮರ್ಥ್ಯ ನಮಗಿದೆ. ರೆಸಾರ್ಟ್‌ನ ಒಂದು ವಿಲ್ಲಾಗೆ 30 ಸಾವಿರ ರೂ. ಇದ್ದು, 5 ಮಂದಿ ವಾಸ್ತವ್ಯ ಮಾಡಬಹುದು. ಯಾವುದೇ ಕಾರಣಕ್ಕೂ ಸಾರ್ವಜನಿಕರ ಹಣ ಬಳಸುತ್ತಿಲ್ಲ ಎಂದು ಶಾಸಕರು ತಿಳಿಸಿದರು.

ಅತೃಪ್ತರ ಮನವೊಲಿಸುತ್ತೇವೆ – ಸಾ.ರಾ.ಮಹೇಶ್‌: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಮಾತನಾಡಿ, ರಾಜ್ಯ ರಾಜಕೀಯ ಹಲವು ತಿರುವುಗಳನ್ನು ಪಡೆಯುತ್ತಿದೆ. ಎರಡೂ ಪಕ್ಷಗಳ ನಾಯಕರು ಅತೃಪ್ತರ ಮನವೊಲಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಉಸ್ತುವಾರಿ ಮುರಳೀಧರ್‌ ಮತ್ತು ಈಶ್ವರಪ್ಪ ಜತೆಗಿನ ನನ್ನ ಭೇಟಿ ಆಕಸ್ಮಿಕವಾದುದು. ಇದಕ್ಕೆ ರಾಜಕೀಯ ಲೇಪನ ಬಳಿಯುವುದು ಸರಿಯಲ್ಲ. ಅಲ್ಲದೆ,ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಕೆಲ ಶಾಸಕರು ಇನ್ನೂ ನಾವು ಜನತಾದಳದಲ್ಲಿಯೇ ಇದ್ದೇವೆ. ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲರೂ ಒಟ್ಟಾಗಿ ಹೋಗುವ ಉದ್ದೇಶದಿಂದಲೇ ರೆಸಾರ್ಟ್‌ನಲ್ಲಿ ತಂಗಿದ್ದೇವೆ. ಸೋಮವಾರ ಅಧಿವೇಶನವಿದ್ದು, ಎಲ್ಲರೂ ಹಾಜರಾಗುತ್ತೇವೆ ಎಂದು ಹೇಳಿದರು.

ಸರ್ಕಾರ 5 ವರ್ಷ ಪೂರೈಸುತ್ತದೆ – ಶರವಣ: ವಿಧಾನ ಪರಿಷತ್‌ ಸದಸ್ಯ ಶರವಣ ಮಾತನಾಡಿ, ಸರ್ಕಾರ ಸುಭದ್ರವಾಗಿಯೇ ಇದೆ. ಮೈತ್ರಿ ಸರ್ಕಾರ 5 ವರ್ಷ ಪೂರ್ಣಗೊಳಿಸುತ್ತದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಹುಮತ ಸಾಬೀತು ಮಾಡಲಿದ್ದಾರೆ. ಎಲ್ಲವೂ ಶುಭ ಸೂಚಕವಾಗಿಯೇ ಇದೆ. ಭಗವಂತನ ಆಶೀರ್ವಾದದಿಂದ ಈ ಸರ್ಕಾರ ರಚನೆ ಆಗಿದೆ. ಸುಧಾಕರ್‌ ಸೇರಿ ಯಾರ ನಡೆಯ ಬಗ್ಗೆಯೂ ನಾನು ಈಗ ಮಾತನಾಡೋದಿಲ್ಲ. ನಿಮಗೆಲ್ಲ ಶುಭ ಸೂಚನೆ ಸಿಗುತ್ತದೆ ಎಂದು ಹೇಳಿದರು.

ಸಮಸ್ಯೆ ಬಗೆಹರಿಸುವ ಸಾಮರ್ಥ್ಯ ಸಿಎಂಗಿದೆ – ಅನ್ನದಾನಿ: ಮಳವಳ್ಳಿ ಶಾಸಕ ಅನ್ನದಾನಿ ಮಾತನಾಡಿ, ಆಯಾ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಸಹಜ. ಹಿಂದೆ ಸೋನಿಯಾ ಗಾಂಧಿ, ಗುಲಾಂ ನಬೀ ಆಜಾದ್‌ ನಿರ್ಧರಿಸಿದಂತೆ ಎಚ್‌.ಡಿ.ಕುಮಾರಸ್ವಾಮಿ 5 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಎರಡು ಪಕ್ಷಗಳು ಸೇರಿ ಮೈತ್ರಿ ಸರ್ಕಾರ ನಡೆಸುವಾಗ ಭಿನ್ನಮತ ಸರ್ವೇ ಸಾಮಾನ್ಯ. ಎಲ್ಲ ಸಮಸ್ಯೆಯನ್ನೂ ಬಗೆಹರಿಸುವ ಸಾಮರ್ಥ್ಯ ಮುಖ್ಯಮಂತ್ರಿಗಿದೆ. ಭಿನ್ನಮತೀಯರ ಎಲ್ಲ ಬೇಡಿಕೆಗಳನ್ನು ಆಲಿಸಿ, ಹಿರಿಯ ನಾಯಕರು ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಸ್ವಾರ್ಥಕ್ಕಾಗಿ ಕೆಲವರ ರಾಜೀನಾಮೆ – ಬಾಲಕೃಷ್ಣ: ಶ್ರವಣಬೆಳಗೋಳ ಶಾಸಕ ಬಾಲಕೃಷ್ಣ ಮಾತನಾಡಿ, ಮೋಜು-ಮಸ್ತಿಗಾಗಿ ಶಾಸಕರು ರೆಸಾರ್ಟ್‌ ವಾಸ್ತವ್ಯ ಮಾಡ್ತಿಲ್ಲ. 14 ತಿಂಗಳು ಯಶಸ್ವಿಯಾಗಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಆಡಳಿತ ನಡೆಸಿದೆ. 5 ವರ್ಷ ಆಡಳಿತ ನಡೆಸುವುದು ಖಚಿತ. ಕೆಲ ಶಾಸಕರು ಸ್ವಾರ್ಥಕ್ಕಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಕೆಶಿ, ಪರಮೇಶ್ವರ್‌ ಸೇರಿ ಅತೃಪ್ತರ ಮನವೊಲಿಸುತ್ತಾರೆ ಎಂದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.