Karnataka; ಸರಕಾರ Vs ಅತಿಥಿ ಉಪನ್ಯಾಸಕರು
ಇಂದು ಕರ್ತವ್ಯಕ್ಕೆ ಬಾರದ ಅತಿಥಿ ಉಪನ್ಯಾಸಕರ ವಜಾ?
Team Udayavani, Jan 1, 2024, 6:40 AM IST
ಬೆಂಗಳೂರು: ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತೀ ತಿಂಗಳಿಗೆ 5 ಸಾವಿರ ರೂ. ಏರಿಕೆ ಮಾಡಿದರೂ ಸೇವಾಭದ್ರತೆ ನೀಡುವಂತೆ ಪಟ್ಟುಹಿಡಿದಿದ್ದಾರೆ. ಹೀಗಾಗಿ ಅಂಥವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವ ಮೂಲಕ ಅವರ ವಿರುದ್ಧ ಸರಕಾರ ಬಲ ಪ್ರಯೋಗಕ್ಕೆ ಮುಂದಾಗಿದೆ.
ಸೋಮವಾರ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ಸೋಮವಾರ ಕಾಲೇಜುಗಳಿಗೆ ಗೈರು ಹಾಜರಾಗುವ ಅತಿಥಿ ಉಪನ್ಯಾಸಕರ ಪಟ್ಟಿ ತಯಾರಿಸಿ, ಅವರ ವಿವರಗಳನ್ನು ಸಲ್ಲಿಸುವಂತೆ ತನ್ನ ವ್ಯಾಪ್ತಿಯಲ್ಲಿ ಇರುವ ಎಲ್ಲ 430 ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಿದೆ.
ಇಂದು ಪಾದಯಾತ್ರೆ; ಕ್ರಮಕ್ಕೆ ಮುಂದಾದರೆ ಕೋರ್ಟ್ಗೆ
ಬೆಂಗಳೂರು: ರಾಜ್ಯ ಸರಕಾರ ಸೇವಾ ಭದ್ರತೆ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಅತಿಥಿ ಉಪನ್ಯಾಸಕರ ಒಕ್ಕೂಟವು ತುಮಕೂರಿನ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ಸೋಮವಾರ ಪಾದಯಾತ್ರೆ ಕೈಗೊಳ್ಳಲಿದೆ.
ಮಾಸಿಕ 5 ಸಾವಿರ ರೂ ಗೌರವ ಧನ ಹೆಚ್ಚಳ, ಆರೋಗ್ಯ ವಿಮೆ, ಐದು ಲಕ್ಷ ರೂಗಳ ನಿವೃತ್ತಿ ಇಡಗಂಟು ಭರವಸೆಯನ್ನು ನಾವು ಒಪ್ಪುವುದಿಲ್ಲ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ನಾಗನಾಳ ಮುನಿಯಪ್ಪ ಹೇಳಿದ್ದಾರೆ.
ನಮ್ಮ ವಿರುದ್ಧ ಸರಕಾರ ಕಠಿನ ಕ್ರಮಕ್ಕೆ ಮುಂದಾದರೆ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಅವರು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ