ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್
Team Udayavani, May 23, 2022, 10:56 PM IST
ಬೆಂಗಳೂರು: ಲೋಕಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ದೇಶದ ಪ್ರತಿಯೊಬ್ಬ ನಾಗರಿಕರು ಅಹಿಂಸಾ ಮಾರ್ಗವನ್ನು ಅನುಸರಿಸುವ ಮೂಲಕ ಶಾಂತಿಯ ಸಮಾಜ ನಿರ್ಮಾಣ ಮಾಡಲು ಮುಂದಡಿಯಿಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಚಿಕ್ಕಪೇಟೆಯಲ್ಲಿ ಜೈನ ಸಮುದಾಯದ ವತಿಯಿಂದ ಆಯೋಜಿಸ ಲಾಗಿದ್ದ ಸದ್ಗುರು ಸಮಾಗಮ, ರಾಜೋಹರನ್ ಉತ್ಸವದಲ್ಲಿ ಮಾತನಾಡಿದ ಅವರು, ಜೈನ ಸಮಾಜವು ಮಾನವ ಸೇವೆಯ ಜತೆಗೆ ಅನೇಕ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ ದತ್ತಿ ಕಾರ್ಯಗಳ ಮೂಲಕ ಜೈನ ಧರ್ಮದ ಕೊನೆಯ ತೀರ್ಥಂಕರರಾದ ಶ್ರೀ ಮಹಾವೀರ ಸ್ವಾಮಿಗಳ “ಬದುಕು ಮತ್ತು ಬದುಕಲು ಬಿಡಿ” ಎಂಬ ಅಮರ ಸಂದೇಶವನ್ನು ಈಡೇರಿಸುತ್ತಿದೆ. ಧೀಕ್ಷೆ ಪಡೆದವರು ಕ್ರೋಧ, ಅಹಂಕಾರ, ಮೋಸ, ಆಸೆ ಇತ್ಯಾದಿಗಳನ್ನು ಜಯಿಸುತ್ತಿದ್ದಾರೆ ಎಂದುವರು ಹೇಳಿದರು.
ಆಚಾರ್ಯ ಪ್ರವರ್ ಶ್ರೀ ವರ್ಧಮಾನ್ ಸಾಗರ್ ಸುರೀಶ್ವರ್ ಮಹಾರಾಜ್ ಮತ್ತು ಶ್ರೀಮದ್ ವಿಜಯ್ ನರರತ್ನ ಸುರೀಶ್ವರ್ ಮಹಾರಾಜ್ ಸಾಹಿಬ್, ಸಚಿವ ಬಿ.ಸಿ. ನಾಗೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
MUST WATCH
ಹೊಸ ಸೇರ್ಪಡೆ
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಬೀದಿನಾಯಿ ದಾಳಿಯಿಂದ ಮೃತಪಟ್ಟರೆ ಸ್ಥಳೀಯ ಆಡಳಿತವೇ ಹೊಣೆ; ಹೈಕೋರ್ಟ್
ನಾಡಪ್ರಭು ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬೇಡಿ; ಗಂಗರುದ್ರಯ್ಯ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ