ರಾಜ್ಯಪಾಲರ ನೇಮಕ: ಡಿಎಚ್ಎಸ್ಗೆ ಸಿಗದ ಅವಕಾಶ
Team Udayavani, Oct 1, 2017, 7:00 AM IST
ಬೆಂಗಳೂರು: ಕೇಂದ್ರ ಸರಕಾರ ಮತ್ತೆ ಐವರು ರಾಜ್ಯಪಾಲರನ್ನು ನೇಮಕ ಮಾಡಿದ್ದು,ರಾಜ್ಯಪಾಲರ ಹುದ್ದೆ ನಿರೀಕ್ಷೆಯಲ್ಲಿದ್ದ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರಿಗೆ ಮತ್ತೆ ಅವಕಾಶ ಕೈತಪ್ಪಿದೆ.
ಶಂಕರಮೂರ್ತಿ ಅವರು ರಾಜ್ಯಪಾಲ ರಾಗಲಿದ್ದಾರೆ ಎಂಬ ಮಾತು ಕಳೆದ ಐದು ವರ್ಷಗಳಿಂದ ಕೇಳಿಬರುತ್ತಿತ್ತು. ಅದರಲ್ಲೂ 2014ರಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಬಾರಿ ರಾಜ್ಯಪಾಲರ ನೇಮಕ ಸಂದರ್ಭದಲ್ಲೂ ಶಂಕರಮೂರ್ತಿ ಅವರ ಹೆಸರು ಕೇಳಿಬರುತ್ತಿತ್ತಾದರೂ ಅಂತಿಮ ಹಂತದಲ್ಲಿ ಅವಕಾಶ ವಂಚಿತರಾಗುತ್ತಿದ್ದರು.
ಇತ್ತೀಚೆಗೆ ಮತ್ತೆ ರಾಜ್ಯಪಾಲರ ನೇಮಕದ ಮಾತು ಕೇಳಿಬಂದಾಗ ಶಂಕರಮೂರ್ತಿ ಅವರ ಹೆಸರು ಕೇಳಿಬಂದಿತ್ತು. ಅದರಲ್ಲೂ ಆಂಧ್ರಪ್ರದೇಶ-ತೆಲಂಗಾಣ ರಾಜ್ಯಕ್ಕೆ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡಲಾಗುತ್ತದೆ ಎಂದು ಊಹಾಪೋಹ ಸೃಷ್ಟಿಯಾಗಿತ್ತು. ಇದೀಗ ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆಯಾದರೂ ಅದರಲ್ಲಿ ಶಂಕರಮೂರ್ತಿ ಅವರ ಹೆಸರು ಇರಲಿಲ್ಲ.
ಆದರೆ, ತೆಲಂಗಾಣ-ಆಂಧ್ರಪ್ರದೇಶಕ್ಕೆ ರಾಜ್ಯಪಾಲರನ್ನು ನೇಮಕ ಮಾಡದ ಕಾರಣ ಶಂಕರಮೂರ್ತಿ ಅವರು ಇನ್ನೂ ರಾಜ್ಯಪಾಲ ರಾಗುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರಸ್ತುತ ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡುವ ಸಂದರ್ಭದಲ್ಲಿ ತಮಗೆ ಅವಕಾಶ ಸಿಗದ ಬಗ್ಗೆ ಶಂಕರಮೂರ್ತಿ ಅವರಿಗೆ ನಿರಾಶೆಯಾಗಿದೆ ಎನ್ನಲಾಗಿದ್ದು, ಇನ್ನೂ ಅವಕಾಶವಿದೆ. ಕಾದು ನೋಡೋಣ ಎಂದು ಆಪ್ತರ ಬಳಿ ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ