ಇಂದಿನಿಂದ ರಂಜಾನ್ ಉಪವಾಸ: ಹೊಸ ಗೈಡ್ ಲೈನ್ಸ್ ಪ್ರಕಟಿಸಿದ ಸರ್ಕಾರ
Team Udayavani, Apr 13, 2021, 4:32 PM IST
ಬೆಂಗಳೂರು: ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಒಂದು ತಿಂಗಳ ಕಾಲ ಈ ಆಚರಣೆ ಇರಲಿದ್ದು, ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಕಂಟೈನ್ ಮೆಂಟ್ ಜೋನ್ ನಲ್ಲಿರುವ ಮಸೀದಿಗಳನ್ನು ತೆರೆಯುವಂತಿಲ್ಲ. ಈ ಬಾರಿಯೂ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿಲ್ಲ. ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಎರಡು ಮೀಟರ್ ನಷ್ಟು ಅಂತರ ಕಾಪಾಡಬೇಕು.
ಇದನ್ನೂ ಓದಿ:ಸೆಲ್ಫಿ ತೆಗೆಯಲು ಹೋಗಿ ಕಾಳಿ ನದಿಗೆ ಬಿದ್ದಿದ್ದ ಯುವಕ-ಯುವತಿಯ ಶವ ಪತ್ತೆ
ಮನೆಯಲ್ಲಿಯೇ ಇಫ್ತಾರ್ ಕೂಟ ಆಯೋಜಿಸಬಹುದು. ಸಾರ್ವಜನಿಕವಾಗಿ ಇಫ್ತಾರ್ ನಡೆಸಬಾರದು. ಮಸೀದಿಗೆ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಬೇಕು. ಪ್ರಾರ್ಥನೆಗೆ ಸ್ವಂತ ಜಮಖಾನ ಮಾತ್ರ ಬಳಸಬೇಕು ಎಂಬಿತ್ಯಾದಿ ನಿಯಮಗಳನ್ನು ರಾಜ್ಯ ಸರ್ಕಾರ ರೂಪಿಸಿದೆ.
ಕಳೆದ ವರ್ಷವೂ ಕೋವಿಡ್ ಕಾರಣದಿಂದ ರಂಜಾನ್ ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ಸಾಮೂಹಿಕ ಪ್ರಾರ್ಥನೆಗೆ ಕಳೆದ ವರ್ಷವೂ ಅವಕಾಶ ನೀಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ