ಸ್ವಾಮೀಜಿಗಳ ಬಳಿ ಕಮಿಷನ್ ಕೇಳುವ ನಾಚಿಕೆಗೇಡಿನ ಸರ್ಕಾರ: ಸಿದ್ದರಾಮಯ್ಯ ಟೀಕೆ
Team Udayavani, Apr 18, 2022, 4:14 PM IST
ಬೆಂಗಳೂರು: ಸ್ವಾಮೀಜಿಗಳ ಬಳಿಯೇ ಲಂಚ ಕೇಳುತ್ತಾರೆಂದರೆ ಎಂಥಹ ನಾಚಿಕೆಗೇಡಿನ ಸರ್ಕಾರವಿದು? ಇದು 40% ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಠಗಳಿಗೆ ಕೊಟ್ಟ ಅನುದಾನ ಪಡೆಯುವುದಕ್ಕೂ ಕಮಿಷನ್ ಕೊಡಬೇಕು ಎಂದು ಸ್ವಾಮೀಜಿಗಳು ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಸ್ವಾಮೀಜಿಗಳ ಬಳಿ ಕಮಿಷನ್ ಕೇಳೋದು ನಾಚಿಕೆಗೇಡಿನತನ. ಸಿಎಂ ಮನೆ ಮುತ್ತಿಗೆ ಹಾಕಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಎಫ್ಐಆರ್ ಹಾಕಿದ್ದಾರೆ. ನಾನು ಎ1 ಆದರೂ ಆಗಲಿ, ಎ2 ಆದರೂ ಆಗಲಿ, ನಾವು ಎದುರಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿಯೊಂದಿಗೆ ಕುಮಾರಸ್ವಾಮಿಯ ಮ್ಯಾಚ್ ಫಿಕ್ಸಿಂಗ್: ಸತೀಶ್ ಜಾರಕಿಹೊಳಿ
ಹುಬ್ಬಳ್ಳಿಯಲ್ಲಿ ಹಿರೇಮಠ ಎನ್ನುವಾತ ಪೋಸ್ಟ್ ಮಾಡಿದ್ದ. ಯಾಕಾಗಿ ಪೋಸ್ಟ್ ಮಾಡಿದ್ದ ಅಂತ ಗೊತ್ತಿಲ್ಲ. ನಾವು ಮಾಡುತ್ತಿರುವ ಹೋರಾಟವನ್ನು ಡೈವರ್ಟ್ ಮಾಡಲು ಮಾಡಿದರೇ ಎಂದು ಗೊತ್ತಿಲ್ಲ. ಆದರೆ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಪೋಸ್ಟ್ ಮಾಡಿದ ಬಳಿಕ ಗಲಾಟೆಯಾಗಿದೆ. ಯಾರು ಕೂಡ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಅಮಾಯಕರು ಬಿಡುಗಡೆ ಆಗಬೇಕು ಎಂದರು.