ಸಾರಿಗೆ ನೌಕರರ ಮನವೊಲಿಕೆ ಪ್ರಯತ್ನವೇ ಇಲ್ಲ, ಪರ್ಯಾಯ ಮಾರ್ಗವಿದೆ: ಸರ್ಕಾರದ ದೃಢ ನಿರ್ಧಾರ
Team Udayavani, Apr 6, 2021, 12:58 PM IST
ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ನೌಕರರನ್ನು ಮನವೊಲಿಕೆಗೆ ಪ್ರಯತ್ನ ಇಲ್ಲ. ನಾವು ಪರ್ಯಾಯ ಮಾರ್ಗ ಅನುಸರಿಸುತ್ತೇವೆ. ಪ್ರತಿಭಟನೆ ಮಾಡುವವರ ವಿಷಯದಲ್ಲಿ ಕಾನೂನೂ ರೀತಿ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಹೇಳಿದರು.
ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ. 6ನೇ ವೇತನ ಆಯೋಗದಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಪರ್ಯಾಯ ಸಾರಿಗೆ ಸೌಲಭ್ಯ ಒದಗಿಸಲು ಸನ್ನದ್ಧ: ಬೆಳಗಾವಿ ಡಿಸಿ ಡಾ.ಕೆ.ಹರೀಶ್ ಕುಮಾರ್
ನಾಳೆ (ಎ.7) ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸಾರಿಗೆ ಬಸ್ ಗಳನ್ನು ಹಾನಿಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅವು ಸಾರ್ವಜನಿಕ ಸೊತ್ತು. ಅವುಗಳಿಗೆ ಹಾನಿಯಾದರೆ ಕ್ರಮ ಕೈಗೊಳ್ಳುತ್ತೇವೆ. ಮುಷ್ಕರ ನಿರತರ ನೌಕರರು ಕೆಲಸಕ್ಕೆ ಹಾಜರಾಗದಿದ್ದರೇ ವೇತನ ಕಡಿತಗೊಳಿಸಲಾಗುವ ನಿಯಮ ಕೂಡ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಮೇ 4 ರ ನಂತರವಷ್ಟೇ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಾಧ್ಯ: ಲಕ್ಷ್ಮಣ ಸವದಿ