Govt ತಿಂಗಳ 20ರೊಳಗೆ ಮೊತ್ತ ಜಮೆ: ಫ‌ಲಾನುಭವಿಗಳ ಸಮಸ್ಯೆ ಅರಿತು ಸರಕಾರದ ತ್ವರಿತ ನಿರ್ಧಾರ


Team Udayavani, Nov 7, 2023, 6:30 AM IST

Govt ತಿಂಗಳ 20ರೊಳಗೆ ಮೊತ್ತ ಜಮೆ: ಫ‌ಲಾನುಭವಿಗಳ ಸಮಸ್ಯೆ ಅರಿತು ಸರಕಾರದ ತ್ವರಿತ ನಿರ್ಧಾರ

ಬೆಂಗಳೂರು ಅನ್ನಭಾಗ್ಯ, ಗೃಹಲಕ್ಷ್ಮಿ, ಇತರ ಸಾಮಾಜಿಕ ಭದ್ರತ ಮಾಸಾಶನ, ಪಿಂಚಣಿಗಳ ಫ‌ಲಾನುಭವಿಗಳು ಇನ್ನು ಚಿಂತಿಸ ಬೇಕಾದ ಅಗತ್ಯವಿಲ್ಲ. ಇನ್ನು ಮುಂದೆ ಪ್ರತೀ ತಿಂಗಳ 20ರ ಒಳಗೆ ಅನ್ನಭಾಗ್ಯ, ಗೃಹ ಲಕ್ಷ್ಮಿ ಮೊತ್ತ, ಪ್ರತೀ ತಿಂಗಳ 5ರ ಒಳಗೆ ಇತರ ಸಾಮಾಜಿಕ ಭದ್ರತ ಯೋಜನೆಗಳ ಮೊತ್ತ ವನ್ನು ಫ‌ಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲು ಸರಕಾರ ಸಿದ್ಧತೆ ನಡೆಸಿದೆ.

ಅನ್ನಭಾಗ್ಯ ಯೋಜನೆಯಡಿ ತಿಂಗಳ ಅಂತ್ಯದೊಳಗೆ ಆಯಾ ತಿಂಗಳ ಮೊತ್ತ ವನ್ನು ಪಾವತಿಸಲಾಗಿತ್ತು.

ಸೆಪ್ಟಂಬರ್‌ ಬಳಿಕ ಒಂದು ತಿಂಗಳು ವಿಳಂಬವಾಗಿ ಪಾವತಿ ಯಾಗುತ್ತಿರುವುದರಿಂದ ಸಾಕಷ್ಟು ದೂರು ಗಳಿವೆ. ಅದೇ ರೀತಿ ಗೃಹಲಕ್ಷ್ಮಿ ಯೋಜನೆಯ ಫ‌ಲಾನುಭವಿಗಳಿಗೆ ಎರಡು ತಿಂಗಳು ತಲುಪಿದ್ದ ಹಣ, ಮೂರನೇ ತಿಂಗಳ ಅನಂತರ ಸ್ಥಗಿತಗೊಂಡಿದೆ.

ಸಾಮಾಜಿಕ ಭದ್ರತ ಮಾಸಾಶನ, ಪಿಂಚಣಿ ಪಾವತಿಯಲ್ಲೂ ವ್ಯತ್ಯಯಗಳಾಗುತ್ತಿದೆ. ಹೀಗಾಗಿ ಫ‌ಲಾನುಭವಿ ಆಧಾರಿತ ಯೋಜನೆ ಗಳನ್ನು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯೊಂದಿಗೆ ಸರಕಾರದ ಏಕೀಕೃತ ನೇರ ನಗದು ವರ್ಗಾವಣೆ ಮೂಲಕವೇ ಅನುಷ್ಠಾನ ಗೊಳಿಸಲು ತಿಳಿವಳಿಕೆ ನೀಡಲಾಗಿದೆ.

ವೃದ್ಧಾಪ್ಯ ವೇತನ, ವಿಧವಾ ವೇತನಗಳಂ ತಹ ಪಾವತಿಗಳನ್ನು ಪ್ರತೀ ತಿಂಗಳ 5 ರೊಳಗೆ ಮಾಡಬೇಕಿದ್ದು, ಅದಕ್ಕೆ ಬೇಕಾದ ಪ್ರಕ್ರಿಯೆಗಳನ್ನು ಪ್ರತಿ ತಿಂಗಳ 1ರಿಂದ 5ರೊಳ ಗಾಗಿ ಪೂರ್ಣಗೊಳಿಸಬೇಕು. ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆಯ ಫ‌ಲಾನುಭವಿಗಳಿಗೆ ಪ್ರತೀ ತಿಂಗಳ 20ರೊಳಗಾಗಿ ನಗದು ಪಾವತಿ ಸಲು ಅಗತ್ಯ ಪ್ರಕ್ರಿಯೆಗಳನ್ನು 15ರಿಂದ 20ರೊಳಗೆ ಪೂರ್ಣಗೊಳಿಸುವಂತೆ ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ಹೆಚ್ಚಿದ ಒತ್ತಡ
ಪ್ರಸ್ತುತ ಆಧಾರ್‌ ಜೋಡಣೆಯಾದ ಬ್ಯಾಂಕ್‌ ಖಾತೆಗೆ ಡಿಬಿಟಿ ಮತ್ತು ಖಜಾನೆ-2 ಮೂಲಕ ಅಡೆತಡೆಯಿಲ್ಲದೆ ಹಣ ಪಾವತಿಸಲಾಗುತ್ತಿದೆ. ಆದರೆ ಆಧಾರ್‌ ಮತ್ತು ಬ್ಯಾಂಕ್‌ ಖಾತೆಗಳ ಜೋಡಣೆ ಆಗದೆ ಪದೇಪದೆ ಫ‌ಲಾನುಭವಿಗಳ ಪಟ್ಟಿಯಲ್ಲಿ ವ್ಯತ್ಯಾಸವಾಗುತ್ತಿದ್ದು, ಪ್ರತೀ ಕಡತವನ್ನು ಪರಿಶೀಲಿಸಲು ಖಜಾನೆ ಇಲಾಖೆ ಮೇಲೆ ಒತ್ತಡ ಹೆಚ್ಚುತ್ತಿದೆ.

ವೇತನ ಪಾವತಿಸುವ ಸಮಯದಲ್ಲಿ ಸರಕಾರದ ವಿವಿಧ ಫ‌ಲಾನುಭವಿ ಆಧಾರಿತ ಯೋಜನೆಗಳ ಬಿಲ್‌ಗ‌ಳ ಸಂಖ್ಯೆ ಹೆಚ್ಚಾದಲ್ಲಿ ವೇತನ ಪಾವತಿ ಮತ್ತು ಡಿಬಿಟಿ ಪಾವತಿಯಲ್ಲೂ ವಿಳಂಬವಾಗುವ ಸಂಭವವಿರುತ್ತದೆ. ಅಲ್ಲದೆ ಪ್ರತೀ ಕಡತದ ಪರಿಶೀಲನೆಗೆ ಸಮಯ ಬೇಕಾಗುವುದರಿಂದ ಮಂಜೂರಾತಿ ಪಟ್ಟಿ ಸೃಜನೆಯಲ್ಲೂ ತಡವಾಗಿ ಪಾವತಿಯಲ್ಲಿ ತೊಂದರೆಯಾಗುವ ಸಂಭವವಿರುತ್ತದೆ.

ವೇಳಾಪಟ್ಟಿ
ಫ‌ಲಾನುಭವಿಗಳಿಗೆ ತ್ವರಿತವಾಗಿ ಪಾವತಿ ಮಾಡಲು ಮತ್ತು ಡಿಡಿಒ, ಡಿಬಿಟಿ ಸೆಲ್‌ ಹಾಗೂ ಖಜಾನೆಗಳಿಗೆ ಯಾವುದಾದರೂ ತಾಂತ್ರಿಕ ಅಥವಾ ಆಡಳಿತಾತ್ಮಕ ಸಮಸ್ಯೆ ಇದ್ದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲು ಸೂಚಿಸ ಲಾಗಿದೆ. ಪ್ರತಿ ಹಂತದಲ್ಲೂ ಸಮನ್ವಯ ಸುಲಭಗೊಳಿಸಲು ಫ‌ಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ, ಮಾಸಿaಕವಾಗಿ ಪಾವತಿಸುವ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಸಾಮಾಜಿಕ ಭದ್ರತ ಪಿಂಚಣಿ ಯೋಜನೆಗಳಿಗೆ ನಿರ್ದಿಷ್ಟ ವೇಳೆಯೊಳಗೆ ಪಾವತಿ ಪ್ರಕ್ರಿಯೆ ಪೂರ್ಣಗೊಳಿಸಲು ಸಂಬಂಧಿತ ಇಲಾಖಾ ಡಿಡಿಒಗಳಿಗೆ ಸೂಚಿಸಿದೆ.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

kar49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

JDS MP ಪ್ರಜ್ವಲ್‌ ಎಲ್ಲಿ? ಕುಟುಂಬದವರು ಸಹಿತ ಯಾರಿಗೂ ಗೊತ್ತಿಲ್ಲ: ಜಿ.ಟಿ.ದೇವೇಗೌಡ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ

ಪರಿಷತ್‌ ಚುನಾವಣೆ: 3 ಪಕ್ಷಕ್ಕೂ ಬಂಡಾಯ ಬಿಸಿ; ಪಕ್ಷದ ವಿರುದ್ಧವೇ ಸಡ್ಡು ಹೊಡೆದು ಸ್ಪರ್ಧೆ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

Attendance ಕೊರತೆ ಇದ್ದರೂ ಎಸೆಸೆಲ್ಸಿ ಪರೀಕ್ಷೆ-2ಕ್ಕೆ ಅವಕಾಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.