ಸರಕಾರದಿಂದ 3 ಲಕ್ಷ ಮನೆ ನಿರ್ಮಾಣದ ಪಣ: ಸೋಮಣ್ಣ
Team Udayavani, Apr 9, 2022, 10:49 PM IST
ಬೆಂಗಳೂರು: ರಾಜ್ಯದ ಬಡ ಕುಟುಂಬಗಳಿಗೆ ಆಸರೆ ಆಗಲಿ ಎನ್ನುವ ಉದ್ದೇಶದಿಂದ ಸರಕಾರ 3 ಲಕ್ಷ ಮನೆಗಳನ್ನು ನಿರ್ಮಿಸುವ ಪಣತೊಟ್ಟಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಶನಿವಾರ ವಿವಿ ಪುರಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿಯಿಂದ 1.8 ಲಕ್ಷ ಮನೆಗಳು ಮತ್ತು ರಾಜೀವ್ ಗಾಂಧೀ ಆವಾಸ್ ವಸತಿ ಯೋಜನೆಯಡಿ 1.20 ಲಕ್ಷ ಮನೆಗಳು ಸೇರಿದಂತೆ ಒಟ್ಟು 3 ಲಕ್ಷ ಮನೆ ನಿರ್ಮಿಸಲಾಗುವುದು ಎಂದು ತಿಳಿಸಿದರು.
ನಗರ ಪ್ರದೇಶದಲ್ಲಿರುವ ಬಡವರಿಗೆ ಈಗಾಗಲೇ 1.20 ಲಕ್ಷ ಮನೆಗಳನ್ನು ಹಂಚಿಕೆ ಮಾಡಿದೆ. ಮುಂದಿನ ದಿನಗಳಲ್ಲಿ 1.8 ಲಕ್ಷ ಮನೆಗಳನ್ನು ಸೂರಿಲ್ಲದ ಬಡವರಿಗೆ ಹಂಚಿಕೆ ಮಾಡಲಾಗುವುದು. ರಾಜ್ಯದಲ್ಲಿ 2,800ಕ್ಕೂ ಅಧಿಕ ಕೊಳಗೇರಿ ಪ್ರದೇಶಗಳಿವೆ.
ಇದನ್ನೂ ಓದಿ:ಅಮಿತ್ ಶಾ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ಬೊಮ್ಮಾಯಿ
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ 6,300 ಎಕರೆ ಪ್ರದೇಶವನ್ನು ಕೊಳಚೆ ಪ್ರದೇಶ ನಿವಾಸಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಕೊಳಗೇರಿ ನಿವಾಸಿಗಳಿಗೆ ಯಾರ್ಯಾರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಅಂತಹವರಿಗೆ ಮುಂದಿನ ದಿನಗಳಲ್ಲಿ ಅವರ ಮನೆ ಬಾಗಿಲಿಗೆ ತೆರಳಿ ಹಕ್ಕುಪತ್ರ ನೀಡುವಂತಹ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮಹಿಳೆಯರ ಹೆಸರಿಗೆ ಮಾತ್ರ ಹಕ್ಕುಪತ್ರ
ಮಹಿಳೆಯರ ಸಬಲೀಕರಣ ಕೂಡ ಇದರಲ್ಲಿ ಸೇರಿದ್ದು ಕೊಳಚೆ ನಿವಾಸಿಗಳಿಗೆ ಹಕ್ಕುಪತ್ರವನ್ನು ನೀಡುವಾಗ ಮಹಿಳೆಯ ಹೆಸರಿಗೆ ಮಾತ್ರ ನೀಡಬೇಕು ಎಂದು ಸಚಿವ ಸೋಮಣ್ಣ ಅಧಿಕಾರಿಗಳಿಗೆ ಮಾಡಿದರು. ಪುರುಷ ಫಲಾನುಭವಿಗಳು ಹಕ್ಕು ಪತ್ರಗಳನ್ನು ಬೇರೆಯವರಿಗೆ ಮಾರಿಕೊಳ್ಳುವ ಸಾಧ್ಯತೆ ಇದೆ. ಆ ಹಿನ್ನೆಲೆಯಲ್ಲಿ ಮಹಿಳೆಯರ ಹೆಸರಿಗೆ ಮಾತ್ರ ಹಕ್ಕುಪತ್ರ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?