ಪದವಿ ತರಗತಿ: ಕ್ಯಾರಿ ಓವರ್‌ ಪದ್ಧತಿ ಜಾರಿಗೆ ಚಿಂತನೆ


Team Udayavani, May 1, 2020, 5:45 AM IST

ಪದವಿ ತರಗತಿ: ಕ್ಯಾರಿ ಓವರ್‌ ಪದ್ಧತಿ ಜಾರಿಗೆ ಚಿಂತನೆ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕ್ಯಾರಿ ಓವರ್‌ ಪದ್ಧತಿಯಲ್ಲಿ ಪ್ರಥಮ ಮತ್ತು ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ, ಪರಿಸ್ಥಿತಿ ಸುಧಾರಿಸಿದ ಅನಂತರ ಪರೀಕ್ಷೆ ಮಾಡುವ ಸಂಬಂಧ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಯೋಜನೆ ಸಿದ್ಧಪಡಿಸಿಕೊಂಡಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಮತ್ತು ಪರೀಕ್ಷಾ ವಿಧಾನ ಸರಳೀಕರಿಸುವ ಬಗ್ಗೆ ವಿವಿಗಳ ಅನುದಾನ ಆಯೋಗ ಈಗಾಗಲೇ ಸಲಹೆ ರೂಪದ ಮಾರ್ಗಸೂಚಿ ನೀಡಿದೆ. ಜತೆಗೆ ರಾಜ್ಯಗಳ ಪರಿಸ್ಥಿತಿ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅನುಮತಿ ಕಲ್ಪಿಸಿದೆ.

ಪದವಿಯಲ್ಲಿ ಒಂದೆರೆಡು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಹೋಗಲು ಕ್ಯಾರಿ ಓವರ್‌ ಪದ್ಧತಿಯಡಿ ಅನುಮತಿಯಿದೆ. ಮುಂದಿನ ಸೆಮಿಸ್ಟರ್‌ಗಳಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವ ವಿಷಯವನ್ನು ಬರೆದು ಪಾಸ್‌ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಈ ವರ್ಷ ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್‌ ಪರೀಕ್ಷೆ ನಡೆಸಲು ಸಾಧ್ಯವಾಗಿಲ್ಲ. ಮುಂದಿನ ಆರು ತಿಂಗಳ ಕಾಲಾವಕಾಶದಲ್ಲಿ ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆ ನಡೆಸಿಕೊಳ್ಳಬಹುದು. ಆರನೇ ಸೆಮಿಸ್ಟರ್‌ಗೆ ಸಂಬಂಧಿಸಿದಂತೆ ಆದಷ್ಟು ಬೇಗ ಪರೀಕ್ಷೆ ನಡೆಸಬಹುದಾಗಿದೆ ಎಂದು ಕುಲಪತಿಯೊಬ್ಬರು ತಿಳಿಸಿದರು.

ಎರಡು ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಯ ಬಗ್ಗೆ ಅವಸರ ಮಾಡುವ ಅಗತ್ಯವಿಲ್ಲ. ಆದರೆ ಪರೀಕ್ಷೆ ವಿಧಾನದಲ್ಲಿ ಕೆಲವೊಂದು ಬದಲಾವಣೆ ಮಾಡಬೇಕಾಗುತ್ತದೆ. ಕ್ಯಾರಿ ಓವರ್‌ ಪದ್ಧತಿಯ ಸಮರ್ಪಕ ಉಪಯೋಗ ಈ ಅವಧಿಯಲ್ಲಿ ಮಾಡಿಕೊಳ್ಳಬಹುದಾಗಿದೆ. ಆನ್‌ಲೈನ್‌ ತರಗತಿಗಳು ನಡೆಯುತ್ತಿದೆ. ಹೀಗಾಗಿ ಸರಕಾರ ಪರಿಸ್ಥಿತಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ| ಕೆ.ಆರ್‌. ವೇಣುಗೋಪಾಲ್‌ ತಿಳಿಸಿದರು.

ಮೇ 5: ಪ್ರಥಮ ಪಿಯು ಫಲಿತಾಂಶ
ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಮೇ 5ರಂದು ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೂಚಿಸಿದ್ದಾರೆ.

ಫಲಿತಾಂಶವನ್ನು ಕಾಲೇಜಿನ ನೋಟಿಸ್‌ ಬೋರ್ಡ್‌ನಲ್ಲಿ ಪ್ರಕಟಿಸಬಾರದು. ವಿದ್ಯಾರ್ಥಿಗಳು ಗುಂಪಾಗಿ ಕಾಲೇಜಿಗೆ ಬಾರದಂತೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಅಥವಾ ಅವರ ಹೆತ್ತವರಿಗೆ ಮೊಬೈಲ್‌ ಸಂದೇಶ, ಇ-ಮೇಲ್‌ ಮೂಲಕ ಫಲಿತಾಂಶ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಹಾಗೆಯೇ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿ ಗಳಿಗೆ ಕಾಲೇಜು ಹಂತದಲ್ಲಿ ಪೂರಕ ಪರೀಕ್ಷೆ ನಡೆಸಲು ಇಲಾಖೆ ಮುಂದಿನ ದಿನಗಳಲ್ಲಿ ಸೂಚನೆ ನೀಡಲಿದೆ. ಹೀಗಾಗಿ ದಾಖಲಾತಿಗೆ ಬರುವಂತೆ ಒತ್ತಾಯಿಸುವಂತಿಲ್ಲ ಮತ್ತು ಒಟ್ಟಿಗೆ ಪೂರ್ಣ ಶುಲ್ಕ ಪಾವತಿಸುವಂತೆ ಒತ್ತಾಯಿ ಸಬಾರದು ಎಂದು ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.