ಪದವಿ ತರಗತಿಗಳು ನಾಳೆ ಆರಂಭ


Team Udayavani, Nov 16, 2020, 6:12 AM IST

ಪದವಿ ತರಗತಿಗಳು ನಾಳೆ ಆರಂಭ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ಕಾರಣಕ್ಕಾಗಿ ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾನಿಲಯಗಳ ತರಗತಿ ಕೊಠಡಿಗಳ ಬಾಗಿಲುಗಳು ಮಂಗಳವಾರದಿಂದ ಸಕಲ ಸುರಕ್ಷಾ ಕ್ರಮದೊಂದಿಗೆ ತೆರೆಯಲಿವೆ ಮತ್ತು ಬೋಧನ ಚಟುವಟಿಕೆಗಳು ನಡೆಯಲಿವೆ. ಜತೆಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತವಾಗಿ ಮಂಗಳವಾರದಿಂದಲೇ ಆರಂಭವಾಗಲಿದೆ.

ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಿ.ವಿ.ಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿವೆ. ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್‌ಲೈನ್‌ ಹಾಗೂ ಆಫ್ಲೈನ್‌ ಬೋಧನೆಗಳು ನಿರಂತರವಾಗಿರಲಿವೆ. ಸುರಕ್ಷತಾ ಕ್ರಮವಾಗಿ ಕಾಲೇಜು ಆವರಣವನ್ನು ಸ್ಯಾನಿಟೈಸ್‌ ಮಾಡುವ ಕಾರ್ಯ ಆರಂಭವಾಗಿದೆ.

ಕಡ್ಡಾಯವಲ್ಲ
ವಿದ್ಯಾರ್ಥಿಗಳು ಕಾಲೇಜಿಗೆ ಬರಲೇಬೇಕು ಎಂಬ ಕಡ್ಡಾಯ ನಿಯಮವಿಲ್ಲ. ಹಾಗೆಯೇ ವಿದ್ಯಾರ್ಥಿಗಳು ಕಾಲೇಜಿಗೆ ಕಡ್ಡಾಯವಾಗಿ ಬರಬೇಕು ಎಂದು ಆಡಳಿತ ಮಂಡಳಿಗಳು ಒತ್ತಡ ಹೇರುವಂತಿಲ್ಲ. ಬಹುತೇಕ ವಿಶ್ವವಿದ್ಯಾನಿಲಯಗಳು ನ. 17ರಿಂದ ಪದವಿಯ 5ನೇ ಸೆಮಿಸ್ಟರ್‌ ಮತ್ತು ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ತರಗತಿ ನಡೆಸಲಿವೆ. ಉಳಿದಂತೆ ಎಲ್ಲ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಹಾಗೂ ಆಫ್ಲೈನ್‌ ವ್ಯವಸ್ಥೆಯಲ್ಲೇ ಬೋಧನೆ ಮುಂದುವರಿಯಲಿವೆ. ಪದವಿಯ 5ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್‌ ವಿದ್ಯಾರ್ಥಿಗಳು ಭೌತಿಕ ತರಗತಿಯಲ್ಲಿ ಭಾಗವಹಿಸಲು ಇಚ್ಛಿಸದೇ ಇದ್ದಲ್ಲಿ ಆನ್‌ಲೈನ್‌ ಬೋಧನಾ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಸರಕಾರದ ಸೂಚನೆಯಂತೆ ನ. 17ರಿಂದ ತರಗತಿ ಆರಂಭಿಸಲು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೂ ಸೂಚನೆ ನೀಡಿದ್ದೇವೆ. ಎಸ್‌ಒಪಿ ಅನುಷ್ಠಾನ ಸೇರಿ ಕಾಲೇಜಿನ ಪ್ರವೇಶದ್ವಾರದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದ್ದೇವೆ.
-ಡಾ| ಪಿ.ಎಸ್‌. ಯಡಪಡಿತ್ತಾಯ ಕುಲಪತಿ, ಮಂಗಳೂರು ವಿ.ವಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.