ಪಂ. ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೈ; ಮುಂದೂಡಿಕೆ ಸೂಕ್ತ: ಜೆಡಿಎಸ್
Team Udayavani, Nov 6, 2020, 5:55 AM IST
ಮಂಗಳೂರು/ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವುದು ಸೂಕ್ತ ಎಂದು ತಜ್ಞರ ಸಮಿತಿ ವರದಿ ನೀಡಿರುವ ಬೆನ್ನಲ್ಲೇ ತಾನು ಚುನಾವಣೆಗೆ ಸಿದ್ಧ ಎಂದು ಬಿಜೆಪಿ ತಿಳಿಸಿದೆ. ಕಾಂಗ್ರೆಸ್ ಕೂಡ ಚುನಾವಣ ಆಯೋಗವು ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಿ ಒಮ್ಮತದ ಅಭಿಪ್ರಾಯ ಪಡೆದು ಚುನಾವಣೆ ನಡೆಸಬೇಕು ಎಂದು ಅಭಿಪ್ರಾಯಪಟ್ಟಿದೆ. ಆದರೆ ಜೆಡಿಎಸ್ ಈಗಿನ ಪರಿಸ್ಥಿತಿಯಲ್ಲಿ ಚುನಾವಣೆ ಮುಂದೂಡುವುದು ಸೂಕ್ತ ಎನ್ನುವ ಮೂಲಕ ವಿರೋಧ ವ್ಯಕ್ತಪಡಿಸಿದೆ.
ಮಂಗಳೂರಿನಲ್ಲಿ ಪಕ್ಷದ ಕಾರ್ಯಕಾರಿಣಿ ಮತ್ತು ಕೋರ್ ಕಮಿಟಿ ಸಭೆಯ ಅನಂತರ ಮಾತ ನಾಡಿದ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧ ಎಂದು ತಿಳಿಸಿದರು.
ಒಮ್ಮತದ ಅಭಿಪ್ರಾಯ
ಚುನಾವಣೆ ನಡೆಸುವಂತೆ ಕೋರ್ಟ್ ಸೂಚಿಸಿದೆ. ಚು. ಆಯೋಗವು ಎಲ್ಲ ರಾಜಕೀಯ ಪಕ್ಷಗಳ ಸಭೆ ಕರೆದು ಚರ್ಚಿಸಿ, ಒಮ್ಮತದ ಅಭಿಪ್ರಾಯ ಪಡೆದು ಚುನಾವಣೆ ನಡೆಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.
ಈಗಿನ ಪರಿಸ್ಥಿತಿಯಲ್ಲಿ ಕಷ್ಟ
ಗ್ರಾ. ಪಂ. ಚುನಾವಣೆಯಿಂದ ಕೊರೊನಾ ಹೆಚ್ಚಿದರೆ ಅಪಾಯ. ಹೀಗಾಗಿ ಮುಂದೂಡುವುದು ಸೂಕ್ತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ