ಗಡಿತಂಟೆ ಕೆದಕುತ್ತಿರುವ ಮಹಾ ಸಿಎಂ
Team Udayavani, Dec 26, 2019, 3:04 AM IST
ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಗಡಿ ತಂಟೆಯನ್ನು ಮಹಾ ರಾಷ್ಟ್ರ ಮುಖ್ಯಮಂತ್ರಿ ಕೆದಕುತ್ತಿದ್ದಾರೆ. ಇಷ್ಟಾ ದರೂ ರಾಜ್ಯದ ಹಿತ ಕಾಯುವ ನಿಟ್ಟಿನಲ್ಲಿ ಯಾವ ಪ್ರತಿಕ್ರಿಯೆಗೂ ಮುಂದಾಗದಿರುವುದನ್ನು ನೋಡಿದರೆ, ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ ಎನಿಸುತ್ತಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಆರೋಪಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಹದಾಯಿ, ಕಳಸಾ- ಬಂಡೂರಿ ವಿಚಾರದಲ್ಲಿ ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಅವರು ರಾಜ್ಯದ ಗೃಹ ಸಚಿವರಿಗೆ ಬರೆದ ಪತ್ರಕ್ಕೆ ಬಿಜೆಪಿ ನಾಯಕರು ಸ್ವಾಗತ, ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಸಚಿವರ ಪತ್ರದ ಸಾರಾಂಶ ನೋಡಿದರೆ ಅದು ಕನ್ನಡಿಗರಿಗೆ ಮಾಡಿದ ಮೋಸ ಎಂಬುದು ಸ್ಪಷ್ಟವಾಗುತ್ತದೆ ಎಂದರು. ಗಡಿ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ ಠಾಕ್ರೆ ಉದ್ಧಟತನದ ವರ್ತನೆಯಷ್ಟೇ ಅಲ್ಲ, ಕರ್ನಾಟಕವನ್ನು ಅವಮಾನಿಸುವ ರೀತಿ ಹೇಳಿಕೆ ನೀಡಿದ್ದರೂ ರಾಜ್ಯ ಸರ್ಕಾರದಿಂದ ಇದು ವರೆಗೂ ಅಧಿಕೃತ ಹೇಳಿಕೆ ವ್ಯಕ್ತವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು