ಗೌರಿ-ಗಣೇಶ ಹಬ್ಬಕ್ಕೆ ಗಣ್ಯರ ಶುಭಾಶಯ
Team Udayavani, Sep 1, 2019, 3:00 AM IST
ಬೆಂಗಳೂರು: ರಾಜ್ಯಪಾಲ ವಜೂಭಾಯ್ ವಾಲಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾ ಯಣ್, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಸುರೇಶ್ ಕುಮಾರ್, ಸಿ.ಟ.ರವಿ, ಕೋಟಾ ಶ್ರೀನಿವಾಸಪೂಜಾರಿ , ಶ್ರೀರಾಮುಲು, ಜೆಡಿಎಸ್ ರಾಜ್ಯಾ ಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಗೌರಿ ಹಾಗೂ ಗಣೇಶ ಹಬ್ಬದ ಶುಭಾಷಯ ಕೋರಿದ್ದಾರೆ.
ಗೌರಿ ಹಾಗೂ ಗಣೇಶ ಹಬ್ಬವು ವಿಘ್ನಗಳನ್ನು ನಿವಾರಿಸಿ, ಸುಖ, ಶಾಂತಿ ಹಾಗೂ ನೆಮ್ಮದಿಯನ್ನು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ. ಜತೆಗೆ, ಮಣ್ಣಿನ ಗೌರಿ, ಗಣೇಶಮೂರ್ತಿಗಳನ್ನೇ ಬಳಸಿ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಿ ಎಂದು ಕರೆ ನೀಡಿದ್ದಾರೆ.