Krishna Byre Gowda; ಸಾಮಾಜಿಕ ಭದ್ರತಾ ಪಿಂಚಣಿದಾರರಿಗೂ ಗೃಹ ಲಕ್ಷ್ಮೀ

1.30 ಕೋಟಿ ಅರ್ಜಿ ನಿರೀಕ್ಷೆ, ಅರ್ಜಿ ವಿಲೇವಾರಿಗೆ ಕಂದಾಯ ಇಲಾಖೆ ಸಾಥ್‌

Team Udayavani, Jun 10, 2023, 7:35 AM IST

Krishna Byre Gowda; ಸಾಮಾಜಿಕ ಭದ್ರತಾ ಪಿಂಚಣಿದಾರರಿಗೂ ಗೃಹ ಲಕ್ಷ್ಮೀ

ಬೆಂಗಳೂರು: ವಿವಿಧ ಬಗೆಯ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ 78 ಲಕ್ಷ ಮಂದಿಯೂ ಗೃಹಲಕ್ಷ್ಮೀ ಯೋಜನೆಯ ಫ‌ಲಾನುಭವಿಗಳಾಗಲಿದ್ದಾರೆ, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟಪಡಿಸಿದರು.

ಕಂದಾಯ ಇಲಾಖೆಯ ವ್ಯಾಪ್ತಿಗೊಳಪಡುವ ಪಿಂಚಣಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ವಿಕಲಚೇತನರು, ವಯೋವೃದ್ಧರು, ವಿಧವೆಯರು, ಮಂಗಳಮುಖೀಯರು ಸೇರಿ ಒಟ್ಟು 78 ಲಕ್ಷ ಮಂದಿಗೆ ವರ್ಷಕ್ಕೆ 10,411 ಕೋಟಿ ರೂ.ಗಳನ್ನು ಪಿಂಚಣಿಗಾಗಿ ಸರ್ಕಾರ ಖರ್ಚು ಮಾಡಲಾಗುತ್ತಿದೆ. ಈ ಕಾರ್ಯಕ್ರಮ 2023-24ನೇ ಸಾಲಿಗೂ ಮುಂದುವರಿಯಲಿದೆ. ಈ ಬಗ್ಗೆ ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಪಿಂಚಣಿ ಮೊಟಕುಗೊಳಿಸುವುದಿಲ್ಲ, ಪಿಂಚಣಿ ಜತೆಗೆ ಹೆಚ್ಚುವರಿಯಾಗಿ ಗೃಹಲಕ್ಷ್ಮೀ ಯೋಜನೆಯೂ ದೊರೆಯಲಿದೆ ಎಂದರು.

1.30 ಕೋಟಿ ಅರ್ಜಿ ನಿರೀಕ್ಷೆ: ಗೃಹಲಕ್ಷ್ಮೀ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸುತ್ತಿದ್ದು, ತಳಮಟ್ಟದಲ್ಲಿ ಈ ಇಲಾಖೆಗೆ ಸಿಬ್ಬಂದಿ ಕೊರತೆ ಇರುವುದರಿಂದ ಪಿಂಚಣಿ ಪಾವತಿಯಲ್ಲಿ ಕಂದಾಯ ಇಲಾಖೆಗೆ ಅನುಭವ ಇರುವುದು ಹಾಗೂ ಈಗಾಗಲೇ ವ್ಯವಸ್ಥೆ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸ್ವೀಕಾರ ಮತ್ತು ವಿಲೇವಾರಿಗೆ ಕಂದಾಯ ಇಲಾಖೆ ಸಹಕಾರ ನೀಡಲಿದೆ ಎಂದು ಸಚಿವರು ವಿವರಿಸಿದರು.

ಈ ಸಂಬಂಧ ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಅಂದಾಜು 1.30 ಕೋಟಿ ಅರ್ಜಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಅರ್ಜಿಗಳನ್ನು ಕೇವಲ ಒಂದು ತಿಂಗಳಲ್ಲಿ ವಿಲೇವಾರಿ ಮಾಡುವುದು ಇಲಾಖೆಗೆ ಸವಾಲಾಗಿದೆ. ಇಡೀ ವರ್ಷದಲ್ಲಿ 1.50 ಕೋಟಿ ಅರ್ಜಿ ವಿಲೇವಾರಿ ಮಾಡುವ ಇಲಾಖೆ ಎರಡು ತಿಂಗಳಲ್ಲಿ 1.30 ಕೋಟಿ ಅರ್ಜಿ ಸ್ವೀಕರಿಸಿ ವಿಲೇವಾರಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಅಟಲ್‌ ಜನಸ್ನೇಹಿ ಕೇಂದ್ರದ ನಿರ್ದೇಶಕ ಕರೀಗೌಡ ಉಪಸ್ಥಿತರಿದ್ದರು.

ಆನ್‌ಲೈನ್‌ ಅರ್ಜಿಗೆ ಆದ್ಯತೆ ನೀಡಿ
898 ನಾಡ ಕಚೇರಿಗಳು, ಬಾಪೂಜಿ ಸೇವಾ ಕೇಂದ್ರಗಳು, ಬೆಂಗಳೂರು ಒನ್‌, ಗ್ರಾಮ ಒನ್‌ ಸೇರಿದಂತೆ ಒಟ್ಟು 7 ರಿಂದ 8 ಸಾವಿರ ಕೇಂದ್ರಗಳಿಗೆ ಅರ್ಜಿ ಕಳುಹಿಸಬೇಕಿದೆ. ಕೆಲವು ಕಡೆ ಎಲ್ಲಾ ರೀತಿಯ ಸೌಲಭ್ಯಗಳು ಇಲ್ಲ. ಕೆಲವೊಂದು ಸಮಸ್ಯೆಗಳಿವೆ. ಅನ್‌ಲೈನ್‌ ಮತ್ತು ಆಫ್ಲೈನ್‌ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದ್ದರೂ ಆನ್‌ಲೈನ್‌ಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದ ಸಚಿವ ಕೃಷ್ಣಬೈರೇಗೌಡ ಅವರು ಈ ಸಂಬಂಧ ಆ್ಯಪ್‌ ಸಹ ಸಿದ್ಧಪಡಿಸಲಾಗುತ್ತಿದೆ. ಆ್ಯಪ್‌ ವಾರದೊಳಗೆ ಸಿದ್ಧವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.