ಜಿಎಸ್ಟಿ ಸಂಗ್ರಹ: ತೆರಿಗೆ ಇಲಾಖೆಗೆ ಟಾಸ್ಕ್ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
Team Udayavani, Jul 1, 2022, 11:41 PM IST
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಂದು ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹ ಗುರಿಯನ್ನು ಮೀರುವ ದೊಡ್ಡ “ಟಾಸ್ಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಿಗೆ ಇಲಾಖೆಗೆ ನೀಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ವಾಣಿಜ್ಯ ತೆರಿಗೆಗಳ ಇಲಾಖೆಯು ಜಿಎಸ್ಟಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2020-21ನೇ ಸಾಲಿನಲ್ಲಿ 82,500 ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, 2021-22ನೇ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂ. ಸಂಗ್ರಹಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಗುರಿಯನ್ನು ಮೀರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.
ತೆರಿಗೆ ಸಂಗ್ರಹ, ಹೊಸ ವ್ಯವಸ್ಥೆ ಮತ್ತು ತಂತ್ರಜ್ಞಾನಗಳ ಅಳವಡಿಕೆ, ನಿರ್ವಹಣೆ ಸಹಿತ ಹಲವಾರು ವಿಚಾರಗಳಲ್ಲಿ ರಾಜ್ಯ ತೆರಿಗೆ ಇಲಾಖೆ ಮುಂಚೂಣಿಯಲ್ಲಿದೆ. ಯಾವುದೇ ಪ್ರಯೋಗ ಮಾಡಬೇಕಾದರೂ ಕೇಂದ್ರದ ಮೊದಲ ಆಯ್ಕೆ ಕರ್ನಾಟಕ ಆಗಿರುತ್ತದೆ. ಇದನ್ನು ಸ್ವತಃ ಕೇಂದ್ರ ಹಣಕಾಸು ಇಲಾಖೆ ಕಾರ್ಯದರ್ಶಿಗಳು ನನಗೆ ಹೇಳಿದ್ದಾರೆ. ಇದೆಲ್ಲದರ “ಕ್ರೆಡಿಟ್’ ನಮ್ಮ ಅಧಿಕಾರಿಗಳಿಗೆ ಸಲ್ಲುತ್ತದೆ. ಗರಿಷ್ಠ ತೆರಿಗೆ ಸಂಗ್ರಹ ಇದ್ದರೂ, ಸಂಪನ್ಮೂಲ ಕ್ರೋಡೀಕರಣ ವಿಚಾರಕ್ಕೆ ಬಂದರೆ ನಾವಿನ್ನಷ್ಟು ಸುಧಾರಣೆ ಆಗಬೇಕಾದ ಅಗತ್ಯ ಇದೆ ಎಂದು ತಿಳಿಸಿದರು.
ಅಭಿನಂದನೆ
ತೆರಿಗೆ ಆಡಳಿತಕ್ಕೆ ಕೊಡುಗೆ ನೀಡಿದ ಇಲಾಖೆ ಹೆಚ್ಚುವರಿ ಆಯುಕ್ತರನ್ನು ಅಭಿನಂದಿಸಲಾಯಿತು. ಅದೇ ರೀತಿ, ಇಲಾಖೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಮತ್ತು ಸಿಬಂದಿಯನ್ನು ಗುರುತಿಸಿ “ಮುಖ್ಯಮಂತ್ರಿಗಳ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಅಲ್ಲದೆ, “ಜಿಎಸ್ಟಿ ಪ್ರೈಮ್- 3′ ತಂತ್ರಾಂಶವನ್ನು ಅನಾವರಣಗೊಳಿಸಲಾಯಿತು. ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಬೆಂಗಳೂರು ವಿಭಾಗ- 4ಕ್ಕೆ ಟ್ರೋಫಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ