ಜಿಎಸ್ ಟಿ ಹಾಕಿದರೂ ವಸ್ತುಗಳ ದರ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ: ಸಿಎಂ ಬೊಮ್ಮಾಯಿ
Team Udayavani, Jul 18, 2022, 11:33 AM IST
ಬೆಂಗಳೂರು: ನಾವು ಹಾಲು, ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್ ಟಿ ಹಾಕಿದ್ದೇವೆ. ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಬ್ರಾಂಡೆಡ್ ಇದ್ದವರಿಗೆ ಮಾತ್ರ 5% ಜಿಎಸ್ ಟಿ ಹಾಕಿದ್ದೇವೆ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ. ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮಾಡದಿದ್ದರೇ ಟ್ಯಾಕ್ಸ್ ಗ್ರಾಹಕರಿಗೆ ಬೀಳುತ್ತಿತ್ತು. ಇದನ್ನು ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳವಾಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಇದನ್ನು ಜಿಎಸ್ ಟಿ ಕೌನ್ಸಿಲ್ ನಲ್ಲಿ ಮಾತಾಡುತ್ತೇವೆ ಎಂದರು.
ಇದನ್ನೂ ಓದಿ:ನಾವು ಬದಲಾಗುವುದು ಯಾವಾಗ? ಸುಧಾರಣೆಗಳು ಎಂದು?: ಸಿನಿಮಾ ಉದಾಹರಣೆ ನೀಡಿದ ಎಚ್ ಡಿಕೆ
ಜಿಎಸ್ ಟಿ ಕಾರಣದಿಂದ ದರ ಹೆಚ್ಚಳ ಮಾಡಿದ್ದಾರೆ, ಆದರೆ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. 5% ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇದನ್ನು ಜಿಎಸ್ ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ