ಅತಿಥಿ ಉಪನ್ಯಾಸಕರಿಗೆ 8 ತಿಂಗಳಿಂದ ವೇತನವಿಲ್ಲ


Team Udayavani, Jan 13, 2017, 3:45 AM IST

Ullala—Photo-Before.jpg

ಬೆಂಗಳೂರು: ಒಂದು ತಿಂಗಳು ವೇತನ ತಡವಾದರೂ ಜೀವನ ನಡೆಸುವುದು ಎಷ್ಟು ಕಷ್ಟ ಎಂಬ ಅನುಭವ ಎಲ್ಲರಿಗೂ ಇರುತ್ತದೆ.
ಆದರೆ, ಎಂಟು ತಿಂಗಳಿಂದ ಸಂಬಳವೇ ಬರದಿದ್ದರೆ….? ಹೌದು, ಇಂತಹ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ರಾಜ್ಯದ ಸರ್ಕಾರಿ
ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು. ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕಳೆದ 8 ತಿಂಗಳಿಂದ ವೇತನ ನೀಡದೆ ರಾಜ್ಯ ಸರ್ಕಾರ ದುಡಿಸಿಕೊಳ್ಳುತ್ತಿದೆ. ಆದರೂ, ವೇತನದ ಬಗ್ಗೆ ಪ್ರಶ್ನಿಸಿದರೆ ಕೆಲಸಕ್ಕೆ ಎಲ್ಲಿ ಕುತ್ತು ಬರುತ್ತದೋ ಎಂದು ಅತಿಥಿ ಉಪನ್ಯಾಸಕರು ಮೂಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಯುಜಿಸಿ ನಿಯಮ ಪ್ರಕಾರ, ಇತರೆ ಕಾಯಂ ಉಪನ್ಯಾಸಕರಂತೆ ಅತಿಥಿ ಉಪನ್ಯಾಸಕರಿಗೂ ಪ್ರತೀ ತಿಂಗಳು ವೇತನ ನೀಡಬೇಕು. ಆದರೆ, ಈ ನಿಯಮ ಉಪನ್ಯಾಸಕರ ನೇಮಕಾತಿ ಪರಿಪಾಠ ಆರಂಭವಾದಾಗಿನಿಂದಲೂ ಪಾಲನೆಯಾಗಿಲ್ಲ. ಕೆಲ ವರ್ಷಗಳ ಹಿಂದೆ
ವರ್ಷಕ್ಕೊಮ್ಮೆ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ನಡೆಯುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಅದನ್ನು ಬದಲಿಸಿದ್ದ ರಾಜ್ಯ ಸರ್ಕಾರ, ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ವೇತನ ಬಿಡುಗಡೆಗೆ ಕ್ರಮ ವಹಿಸಿತ್ತು. ಆದರೂ, ಯಾವುದೇ ಪ್ರಯೋಜನವಾಗಿಲ್ಲ. ವೇತನ ಬಾಕಿ ಉಳಿಸಿಕೊಳ್ಳುವ ಅವ್ಯವಸ್ಥೆ ಮುಂದುವರೆದೇ ಇದೆ ಎಂಬುದು ಅತಿಥಿ ಉಪನ್ಯಾಸಕರ ಅಳಲು.

ಸಚಿವರಾದ ಆರ್‌.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ ಅವರು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿದ್ದಾಗ ಕನಿಷ್ಠ ಎರಡು ತಿಂಗಳಿಗೊಮ್ಮೆಯಾದರೂ ಅತಿಥಿ ಉಪನ್ಯಾಸಕರಿಗೆ ವೇತನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರ ಬಳಿಕ ಇಲಾಖೆಯ ಜವಬ್ದಾರಿ ವಹಿಸಿಕೊಂಡಿರುವ ಸಚಿವ ಬಸವರಾಜ ರಾಯರೆಡ್ಡಿ ಅವರು ಅತಿಥಿ ಉಪನ್ಯಾಸಕರ ಸಮಸ್ಯೆ ಕೇಳಲು ಸಿದದ್ದರಿಲ್ಲ. ತಮಗೆ 8 ತಿಂಗಳಿಂದ ವೇತನ ಬಂದಿಲ್ಲ ಎಂದು ಕಾರ್ಯಕ್ರಮವೊಂದರಲ್ಲಿ ನಮ್ಮ ಅತಿಥಿ ಉಪನ್ಯಾಸಕರೊಬ್ಬರು ಸಚಿವರ ಗಮನ ಸೆಳೆದರೆ “ಅದಕ್ಕೆ ನಾನೇನು ಮಾಡಲಿ?’ ಎಂಬ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎಂದು ರಾಜ್ಯ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಬಿ.ರಾಜಶೇಖರ ಮೂರ್ತಿ ಆರೋಪಿಸುತ್ತಾರೆ.

ಒಂದೆರಡು ತಿಂಗಳ ವೇತನ ಬಿಡುಗಡೆ?:
ಕಾಲೇಜು ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ, ರಾಜ್ಯದ ದಕ್ಷಿಣದ ಜಿಲ್ಲೆಗಳ ಕಾಲೇಜುಗಳಿಗೆ 2 ತಿಂಗಳ ವೇತನ ಹಾಗೂ ಉತ್ತರದ ಜಿಲ್ಲೆಗಳ ಕಾಲೇಜಿಗಳಿಗೆ 1 ತಿಂಗಳ ವೇತನ ಆಯಾ ಕಾಲೇಜು ಪ್ರಾಂಶುಪಾಲರ ಅಕೌಂಟುಗಳಿಗೆ ಇತ್ತೀಚೆಗೆ ಬಿಡುಗಡೆಯಾಗಿದೆ. ಆದರೆ, ಈ ಬಾರಿಯಿಂದ ವೇತನ ನೀಡಿಕೆಗೆ ಸರ್ಕಾರ ಅತಿಥಿ ಉಪನ್ಯಾಸಕರಿಂದ ಪ್ಯಾನ್‌ಕಾರ್ಡ್‌, ಆಧಾರ್‌ ಕಾರ್ಡ್‌ ಮತ್ತಿತರರ ದಾಖಲೆಗಳನ್ನು ಪಡೆಯುವಂತೆ ಸೂಚಿಸಿರುವುದರಿಂದ ಈ ವೇತನ ಬಿಡುಗಡೆಯೂ ವಿಳಂಬವಾಗಿದೆ ಎನ್ನುತ್ತಾರೆ ನಗರದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರೊಬ್ಬರು. ಪದವಿ ಕಾಲೇಜಿಗೆ ಅತಿಥಿ ಉಪನ್ಯಾಸಕರೇ ಜೀವಾಳ ರಾಜ್ಯದ ಬಹುತೇಕ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರೇ ಜೀವಾಳ. ಏಕೆಂದರೆ 412 ಕಾಲೇಜುಗಳಲ್ಲಿರುವ ಕಾಯಂ ಬೋಧಕರಿಗಿಂತ ಮೂರು ಪಟ್ಟು ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಯಂ ಬೋಧಕರ ಸಂಖ್ಯೆ ಕೇವಲ 4,800 ಇದ್ದರೆ, ಅತಿಥಿ ಉಪನ್ಯಾಸಕರ ಸಂಖ್ಯೆ 14,531. ಈ ಅತಿಥಿ ಉಪನ್ಯಾಸಕರ ಬೋಧ ನಾಅನುಭವಕಾಯಂ ಬೋಧಕರಿಗೇನೂಕಡಿಮೆಇಲ್ಲ. ಕಳೆದಹತ್ತಾರುವರ್ಷಗಳಿಂದಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಇವರಿಗೆ ಸರ್ಕಾರ ನೀಡುತ್ತಿರುವ ವೇತನ ಮಾತ್ರ 9,500 ರಿಂದ 
11,500 ರೂ. ಮಾತ್ರ. ಸೇವೆ ಕಾಯಂ ಆಗಿರುವ ಉಪನ್ಯಾಸಕರು, ಪ್ರಾಧ್ಯಾಪಕರಿಗೆ ತಿಂಗಳಿಗೆ 1 ಲಕ್ಷ ರೂ.ನಿಂದ 1.5 ಲಕ್ಷ ರೂ. ವರೆಗೆ ಯುಜಿಸಿ ವೇತನ ಶ್ರೇಣಿ ಇದೆ. ಆದರೆ, ಅವರಷ್ಟೇ ವಿದ್ಯಾರ್ಹತೆ, ಅನುಭವ ಇದ್ದರೂ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೀಡುತ್ತಿರುವುದು ಸ್ನಾತಕೋತ್ತರ ಪದವಿ ಪೂರೈಸಿರುವವರಿಗೆ 9,500 ರೂ., ನೆಟ್‌, ಸ್ಲೆಟ್‌, ಪಿಎಚ್‌ಡಿ ಹೊಂದಿರುವವರಿಗೆ 11,500 ರೂ. ಮಾತ್ರ ಎನ್ನುತ್ತಾರೆ ಅತಿಥಿ ಉಪನ್ಯಾಸಕರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.