ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ


Team Udayavani, May 24, 2022, 5:40 AM IST

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ಬೆಂಗಳೂರು: ತಾ.ಪಂ. ಹಾಗೂ ಜಿ.ಪಂ.ಗಳ ಕ್ಷೇತ್ರಗಳ ಸೀಮೆಗಳನ್ನು ನಿಗದಿಪಡಿಸುವ ಸಂಬಂಧ ಕರ್ನಾಟಕ ಪಂಚಾಯತ್‌ರಾಜ್‌ ಸೀಮಾ ನಿರ್ಣಯ ಆಯೋಗ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಗಡಿ ನಿಗದಿಗೆ ಮಾರ್ಗಸೂಚಿಗಳು
– ತಾ|ನಲ್ಲಿರುವ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವ, ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿರುವ ಗ್ರಾಮಾಂತರ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಗ್ರಾಮೀಣ ಪ್ರದೇಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಇದೇ ಜಿ.ಪಂ. ಕ್ಷೇತ್ರಗಳ ನಿಗದಿಗೂ ಅನ್ವಯವಾಗುತ್ತದೆ.
– ಒಂದು ಜಿ.ಪಂ. ಕ್ಷೇತ್ರದೊಳಗೆ ಎಷ್ಟು ತಾ.ಪಂ. ಕ್ಷೇತ್ರಗಳನ್ನು ರಚಿಸಬಹುದೋ ಅಷ್ಟು ಕ್ಷೇತ್ರಗಳನ್ನು ಆ ಜಿ.ಪಂ. ಕ್ಷೇತ್ರದ ವ್ಯಾಪ್ತಿಯೊಳಗೆ ಅಳವಡಿಸಿರಬೇಕು.
– ಜಿ.ಪಂ. ಕ್ಷೇತ್ರದೊಳಗೆ ಬರುವ ಪೂರ್ಣ ಗ್ರಾ.ಪಂ.ಗಳನ್ನು ಸಾಧ್ಯವಾದಷ್ಟು ಒಟ್ಟುಗೂಡಿಸಿ, ತಾ.ಪಂ. ಕ್ಷೇತ್ರಗಳನ್ನು ನಿರ್ಧರಿಸಬೇಕು. ಸಾಧ್ಯವಾಗದಿದ್ದರೆ ಗ್ರಾಮಗಳನ್ನು ಗುಂಪು ಮಾಡುವುದು, ಈ ಸಂದರ್ಭದಲ್ಲಿ ಮೂಲ ಗ್ರಾಮವನ್ನು ವಿಭಜಿಸತಕ್ಕದ್ದಲ್ಲ. ಕಂದಾಯ ಗ್ರಾಮದ ದಾಖಲೆ ಗ್ರಾಮಗಳನ್ನು ಬೇರೆಯಾಗಿ ವಿಂಗಡಿಸಬಾರದು.
– ತಾ.ಪಂ., ಜಿ.ಪಂ. ಕ್ಷೇತ್ರದೊಳಗೆ ಒಟ್ಟುಗೂಡಿಸುವ ಸಂದರ್ಭ ಒಂದು ತಾ.ಪಂ. ಕ್ಷೇತ್ರ ಎರಡು ಜಿ.ಪಂ. ಕ್ಷೇತ್ರಗಳಿಗೆ ವಿಭಜಿಸತಕ್ಕದ್ದಲ್ಲ.
– ಪ್ರತೀ ಚುನಾವಣ ಕ್ಷೇತ್ರಗಳ ಜನಸಂಖ್ಯೆಯಲ್ಲಿ ಸಾಧ್ಯವಾಗುವಷ್ಟರ ಮಟ್ಟಿಗೆ ಹೆಚ್ಚಿನ ವ್ಯತ್ಯಾಸವಿರದಂತೆ ನೋಡಿಕೊಳ್ಳಬೇಕು. ಇದೇ ನಿಯಮ ಜಿ.ಪಂ. ಕ್ಷೇತ್ರ ನಿಗದಿಗೂ ಅನ್ವಯವಾಗುತ್ತದೆ.
– ಹೊಸ ಕ್ಷೇತ್ರ ರಚನೆ ಮಾಡಬೇಕಾದ ಸಂದರ್ಭ ಮಾತ್ರ ಆ ಕ್ಷೇತ್ರದಲ್ಲಿನ ಅತೀ ಹೆಚ್ಚು ಜನಸಂಖ್ಯೆಯಿರುವ ಗ್ರಾಮದ ಹೆಸರನ್ನು ಕ್ಷೇತ್ರದ ಹೆಸರಾಗಿ ಪರಿಗಣಿಸಬೇಕು. ಇದೇ ನಿಯಮ ಜಿ.ಪಂ. ಕ್ಷೇತ್ರಗಳ ನಿಗದಿಗೂ ಅನ್ವಯಿಸುತ್ತದೆ.
– ತಾಲೂಕಿನಲ್ಲಿರುವ ಗ್ರಾ.ಪಂ.ಗಳನ್ನು ವಿಭಜಿಸದೆ ಪೂರ್ಣ ಗ್ರಾ.ಪಂ.ಗಳನ್ನು ಒಟ್ಟುಗೂಡಿಸಿ ಜಿ.ಪಂ. ಕ್ಷೇತ್ರ ರಚನೆಯಾಗುವಂತೆ ನೋಡಿಕೊಳ್ಳಬೇಕು.
– ಗ್ರಾ.ಪಂ.ಗಳನ್ನು ಒಟ್ಟುಗೂಡಿಸುವಾಗ ಅಕ್ಕ-ಪಕ್ಕದ ಗ್ರಾ.ಪಂ.ಗಳನ್ನು ಒಟ್ಟುಗೂಡಿಸಬೇಕು. ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಚಾರ ಮತ್ತು ಸಂಪರ್ಕ ವ್ಯವಸ್ಥೆ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು. ಬೆಟ್ಟಗುಡ್ಡ, ಅರಣ್ಯ, ಜಲಾಶಯ, ನದಿ ಇತ್ಯಾದಿ ಅಡಚಣೆಗಳು ಇರಬಾರದು.

ಡಿಸಿಗಳ ಕರ್ತವ್ಯಗಳು
– ತಾ.ಪಂ., ಜಿ.ಪಂ. ಸೀಮಾ ನಿರ್ಣಯವನ್ನು ನಿಯಮಾ ನುಸಾರ ಕೂಲಂಕಷವಾಗಿ ಹಾಗೂ ಸ್ಥಳೀಯವಾಗಿ ಪರಿಶೀಲಿಸಿ ಕ್ಷೇತ್ರಗಳ ಗಡಿಗಳನ್ನು ನಿರ್ಣಯಿಸಬೇಕು.
– ಗಡಿಗಳನ್ನು ಗುರುತಿಸಿದ ಅನಂತರ ಪ್ರಸ್ತಾವಗಳನ್ನು ಆಯೋಗಕ್ಕೆ ಸಲ್ಲಿಸುವ ಪೂರ್ವದಲ್ಲಿ ಒಟ್ಟು ಪ್ರಕ್ರಿಯೆಯ ಭಾಗವಾಗಿ ಸ್ಥಳೀಯರ, ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಪಡೆದು, ಪರಿಶೀಲಿಸಿ ಪ್ರಸ್ತಾವಗಳನ್ನು ಸಲ್ಲಿಸಬೇಕು.
– ಹೊಸದಾಗಿ ರಚಿಸುವ ಜಿ.ಪಂ., ತಾ.ಪಂ. ಕ್ಷೇತ್ರಗಳ ಹೆಸರನ್ನು ನಿಗದಿಪಡಿಸುವಾಗ ಅತೀ ಹೆಚ್ಚು ಜನಸಂಖ್ಯೆ ಇರುವ ಗ್ರಾಮದ ಹೆಸರಲ್ಲದೇ ಐತಿಹಾಸಿಕ, ಶೈಕ್ಷಣಿಕ, ಸಾಂಸ್ಕೃತಿಕ, ವಾಣಿಜ್ಯ ಇತ್ಯಾದಿ ಮಹತ್ವವಿರುವ ಗ್ರಾಮಗಳ ಹೆಸರು ಪರಿಗಣಿಸಬೇಕು.
-ಪ್ರಸ್ತಾವವನ್ನು ಆಯೋಗಕ್ಕೆ ಸಲ್ಲಿಸುವಾಗ ಕ್ಷೇತ್ರಗಳ ನಕ್ಷೆಗಳೊಂದಿಗೆ ಸಲ್ಲಿಸಬೇಕು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.