25ರಿಂದ ಮಂತ್ರಾಲಯದಲ್ಲಿ ಗುರು ವೈಭವೋತ್ಸವ
Team Udayavani, Feb 18, 2020, 3:05 AM IST
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆ.25ರಿಂದ ಮಾ.2ರವರೆಗೆ ಶ್ರೀ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಯರ 399ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 425ನೇ ವರ್ಧಂತಿ ಉತ್ಸವದ ನಿಮಿತ್ತ ಹಮ್ಮಿಕೊಂಡಿರುವ ಕಾರ್ಯಕ್ರಮದ ಅಂಗವಾಗಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಏಳು ದಿನದವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ನಿತ್ಯ ಬೆಳಗ್ಗೆ 10 ಗಂಟೆಯಿಂದ ವಿದ್ವಾಂಸರಿಂದ ಜ್ಞಾನಯಜ್ಞ. ರಾತ್ರಿ 7ಕ್ಕೆ ಅಭಿನಂದನಾ ಮತ್ತು ಅಭಿವಂದನಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಜನಪ್ರತಿನಿಧಿ ಗಳು, ಧಾನಿಗಳನ್ನು ಸನ್ಮಾನಿಸಲಾಗುವುದು. ಸಂಜೆ ವಿವಿಧ ಸಂಗೀತಗಾರರಿಂದ ಸಾಂಸ್ಕೃತಿಕ, ಧಾರ್ಮಿಕ, ಪೌರಾಣಿಕ ನಾಟಕ, ಭರತನಾಟ್ಯ ಕಾರ್ಯಕ್ರಮಗಳು ಜರುಗಲಿವೆ.
ಮಾ.2ರಂದು ಬೆಳಗ್ಗೆ 8ಕ್ಕೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ ಶ್ರೀ ರಾಯರಿಗೆ ಶೇಷವಸ್ತ್ರ ಸಮರ್ಪಣೆ ನಡೆಯಲಿದ್ದು. ಅಂದೇ ಶ್ರೀ ರಾಯರ ಪ್ರಾಕಾರ ದಲ್ಲಿ ಚೆನ್ನೈನ ಶ್ರೀ ರಾಘವೇಂದ್ರ ಸ್ವಾಮಿ ನಾದಹಾರ ಸೇವಾ ಟ್ರಸ್ಟ್ನಿಂದ 450 ಕಲಾವಿದರು ಏಕಕಾಲಕ್ಕೆ ನಾದಹಾರ ಸರ್ಮರ್ಪಣೆ ಮಾಡುವರು. ವಿವಿಧ ಪುಸ್ತಕಗಳ ಲೋಕಾ ರ್ಪಣೆ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.