ರೈತ ಹೋರಾಟ ಬೆಂಬಲಿಸಿ ಜಂಟಿ ಅಧಿವೇಶನದ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: ಎಚ್ ಡಿ ದೇವೇಗೌಡ
Team Udayavani, Jan 29, 2021, 10:20 AM IST
ಬೆಂಗಳೂರು/ ಹೊಸದಿಲ್ಲಿ: ಕೃಷಿ ವಿಧೇಯಕಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವ ಸಲುವಾಗಿ ಇಂದು ಜಂಟಿ ಅಧಿವೇಶನದಲ್ಲಿ ನಡೆಯುವ ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ನಿರ್ಧರಿಸಿದ್ದಾರೆ.
ರಾಷ್ಟ್ರಪತಿ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ನಿರ್ಧರಿಸಿದೆ. ರಾಜ್ಯ ಸಭಾ ಸದಸ್ಯರಾಗಿರುವ ದೇವೇಗೌಡ ಅವರು ಕೂಡಾ ಇದೇ ತೀರ್ಮಾನ ಕೈಗೊಂಡಿದ್ದಾರೆ.
ಇದನ್ನೂ ಓದಿ:ಸಂಸತ್ ಅಧಿವೇಶನ ಇಂದು ಶುರು: ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ನನ್ನ ರೈತ ಸಹೋದರರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಸಂಸತ್ ನಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಬಲವಂತವಾಗಿ ಅಂಗೀಕರಿಸಲಾಗಿತ್ತು. ಜ.26ರಂದು ನಡೆದ ಘಟನೆಯಲ್ಲಿ ಕೇಂದ್ರ ಸರ್ಕಾರದ ಕೈವಾಡವಿರುವ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
In solidarity with my farmer brothers fighting against the three #FarmLaws, I have decided, after consulting my party @JanataDal_S units, not to attend the President’s joint address of Parliament today.
— H D Devegowda (@H_D_Devegowda) January 29, 2021
ಕಳೆದ ವರ್ಷವೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಪಕ್ಷಗಳು ರಾಷ್ಟ್ರಪತಿ ಭಾಷಣದಿಂದ ದೂರ ಉಳಿದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ