ರಾಜ್ಯದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಆಗ್ರಹಿಸಿದ ಮಾಜಿ ಪ್ರಧಾನಿ ದೇವೇಗೌಡರು
Team Udayavani, Apr 27, 2020, 3:10 PM IST
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಂದ ಹಣ್ಣು ತರಕಾರಿ ಹೂವು ಬೆಳೆದು ಸಂಕಷ್ಟಕ್ಕೆ ಸಿಲುಕಿ ನಷ್ಟಕ್ಕೆ ಈಡಾದ ಹಳೇ ಮೈಸೂರು, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ರಾಜ್ಯದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದಿರುವ ಅವರು, ಮಾವು ಬೆಳೆಗಾರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ ತೊಂದರೆಯಾಗದಂತೆ ಕ್ರಮಕೈಗೊಳ್ಳ ಬೇಕೆಂದು ಮನವಿ ಮಾಡಿದ್ದಾರೆ.
ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ಉದಯವಾಣಿ ಪತ್ರಿಕೆಯ ಕ್ಲಿಪಿಂಗ್ ಸಹ ಲಗತ್ತಿಸಿದ್ದಾರೆ. ‘ಉದಯವಾಣಿ’ ಪತ್ರಿಕೆಯಲ್ಲಿ ಹಣ್ಣು ತರಕಾರಿ ಬೆಳೆದ ರೈತರ ಸಮಸ್ಯೆ ಕುರಿತು “9500 ಸಾವಿರ ಟಬ್ ಹಣ್ಣು ತರಕಾರಿ ಮಾರಾಟ” ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು.