ಒಂದು ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ: ಸಿದ್ದರಾಮಯ್ಯಗೆ ಸವಾಲು ಹಾಕಿದ ಕುಮಾರಸ್ವಾಮಿ


Team Udayavani, Dec 19, 2020, 11:54 AM IST

ಒಂದು ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ: ಸಿದ್ದರಾಮಯ್ಯಗೆ ಸವಾಲು ಹಾಕಿದ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ಶುಕ್ರವಾರ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಆಡಿದ ಮಾತಿಗೆ ಇಂದು ತಿರುಗೇಟು ನೀಡಿರುವ ಎಚ್ ಡಿಕೆ “ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ” ಎಂದು ಸವಾಲೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಹಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಎಚ್ ಡಿಕೆ ಸರಣಿ ಟ್ವೀಟ್ ಗಳು ಇಲ್ಲಿದೆ

1. ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ.

2. ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌-ಬಿಜೆಪಿ ಒಳಒಪ್ಪಂದ ಮಾಡಿಕೊಂಡವು, ಅದರಲ್ಲಿ ಕಾಂಗ್ರೆಸ್ಸಿಗರೂ ಸೇರಿದರು, ಬಾದಾಮಿಯಲ್ಲಿ ಗೆಲ್ಲದೇ ಹೋಗಿದ್ದರೆ ಭವಿಷ್ಯ ಕತ್ತಲಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದೆವೆ?

ಇದನ್ನೂ ಓದಿ:ಸಿದ್ದರಾಮಯ್ಯನವರು ಗೋಸುಂಬೆ ತರ ಆಡಬಾರದು, ನಾವು ಸ್ಪಷ್ಟವಿದ್ದೇವೆ: ಸಿ.ಟಿ ರವಿ ಆಕ್ರೋಶ

3. 2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ. ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್‌ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ. ಅದರ ಪರಿಣಾಮವಾಗಿ ಕಾಂಗ್ರೆಸ್‌ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ.

4. 2013ರ ಚುನಾವಣೆಯತ್ತ ಅವರು ಒಮ್ಮೆ ನೋಡಲಿ. ಆಗ ಅವರು ಯಾರನ್ನೆಲ್ಲ ಸೋಲಿಸಿದ್ದರು, ಕೊರಟಗೆರೆಯಲ್ಲಿ ಯಾರೊಂದಿಗೆ ಒಳಒಪ್ಪಂದ ಮಾಡಿಕೊಂಡು, ಯಾರ ಭವಿಷ್ಯವನ್ನು ಕತ್ತಲಲ್ಲಿಟ್ಟಿದ್ದರು ಎಂಬುದನ್ನು ಮನನ ಮಾಡಿಕೊಳ್ಳಲಿ. 2013ರ ಚುನಾವಣೆಯನ್ನು ಪರಾಮರ್ಶಿಸಿದರೆ, ಪಕ್ಷದ್ರೋಹದ ಆಧಾರದ ಮೇಲೆ ಅವರು ಕಾಂಗ್ರೆಸ್‌ ಬಿಡಬೇಕು! ಇದು ಅವರ ದ್ವಂದ್ವ.

5. ನನ್ನನ್ನು ಸೋಲಿಸಿದವರು, ಆತ್ಮವಿಮರ್ಶೆ ಮಾಡಿಕೊಂಡು ತಾವೇ ಪಕ್ಷಬಿಟ್ಟು ಹೋಗಬೇಕು ಎಂದು ಹೇಳಿದ್ದೀರಿ. 2009-10ರ ಉಪಚುನಾವಣೆ, 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್‌ ಬಿಡುವುದು ಯಾವಾಗ? ಈಗಾಗಲೇ ಒಂದು ಬಾರಿ ತಾಯಿಯಂಥ ಪಕ್ಷಕ್ಕೆ ದ್ರೋಹ ಮಾಡಿದ ನಿಮ್ಮ ಉತ್ತರ ಕೇಳಲು ಕಾತರನಾಗಿದ್ದೇನೆ.

6. 2018ರಲ್ಲಿ ಮೈತ್ರಿಯಾಗಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದು ಹೈಕಮಾಂಡ್‌ನ ನಿರ್ಧಾರವಾಗಿತ್ತು ಎಂದು ಸಿದ್ದರಾಮಯ್ಯ ಹಲವು ಬಾರಿ ಹೇಳಿದ್ದಾರೆ. ಆದರೆ, ಚಾಮುಂಡೇಶ್ವರಿ ಭಾಷಣದ ವೇಳೆ, ನಾನು ಒಪ್ಪದೇ ಹೋಗಿದ್ದಿದ್ದರೆ ಕುಮಾರಸ್ವಾಮಿ ಅವರನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂದಿದ್ದಾರೆ. ಇಲ್ಲಿ ದ್ವಂದ್ವ ಇಲ್ಲವೇ?

7. ಮೈತ್ರಿ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಸಿದ್ದವನದಲ್ಲಿ ಕುಳಿತು ಸರ್ಕಾರ ಬೀಳಿಸುವ ಚರ್ಚೆ ನಡೆಸಿದವರು ಸಿದ್ದರಾಮಯ್ಯ ಅಲ್ಲವೇ? ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ ಶಾಸಕರಲ್ಲಿ ಬಹುತೇಕರು ಅವರ ಬೆಂಬಲಿಗರಾಗಿರಲಿಲ್ಲವೇ? ಆದರೂ, ಸರ್ಕಾರ ಬೀಳಿಸಿದ್ದರ ಅಪವಾದದಿಂದ ಪಾರಾಗಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಇದು ಅವರ ಕಪಟ ನೀತಿ.

8. ಕುಮಾರಸ್ವಾಮಿ ಸಿಎಂ ಆಗಿ ಕಚೇರಿಗೇ ಬರುತ್ತಿರಲಿಲ್ಲವಂತೆ, ತಾಜ್‌ವೆಸ್ಟ್‌ಎಂಡ್‌ನಲ್ಲಿ ಇರುತ್ತಿದ್ದರಂತೆ. ಅಹೋರಾತ್ರಿ ಜನತಾ ದರ್ಶನ ತಾಜ್‌ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿತ್ತೋ? ಸಿಎಂ ಕಚೇರಿಯಲ್ಲಿ ನಡೆಯುತ್ತಿತ್ತೋ ಸಿದ್ದರಾಮಯ್ಯನವರೇ? ಬಾದಾಮಿಯಲ್ಲಿ ಈಗ ನಡೆಯುತ್ತಿರುವ 1200 ಕೋಟಿ ಕಾಮಗಾರಿಗಳು ತಾಜ್‌ವೆಸ್ಟ್‌ಎಂಡ್‌ನದ್ದ?

9. ಸಿಎಂ ಸ್ಥಾನದಿಂದ ಇಳಿದ ನಂತರ ಸಿದ್ದರಾಮಯ್ಯ ಸರ್ಕಾರಿ ನಿವಾಸ ತೊರೆಯಲಿಲ್ಲ. ಆ ವಿಚಾರದಲ್ಲಿ ಕಿಂಚಿತ್ತೂ ನಾಚಿಕೆ ಪ್ರದರ್ಶಿಸಲಿಲ್ಲ. ತಾವು ಸಿಎಂ ಆಗಿದ್ದಾಗ 6 ಗಂಟೆಗೆ ಹೇಳದೇ ಕೇಳದೇ ಕಚೇರಿ ತೊರೆದು ಅಜ್ಞಾತರಾಗುತ್ತಿದ್ದ ಸಿದ್ದರಾಮಯ್ಯ, ರಾತ್ರಿ 12 ಗಂಟೆ ವರೆಗೆ ಕಚೇರಿಯಲ್ಲಿ ದುಡಿಯುತ್ತಿದ್ದ ನನ್ನ ಬಗ್ಗೆ ಮಾತನಾಡುವ ನೈತಿಕತೆ ಉಳ್ಳವರೇ?

10. 37 ಸ್ಥಾನ ಗೆದ್ದಿದ್ದ ಜೆಡಿಎಸ್‌ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಅದು 37 ಸ್ಥಾನವಾಗಲಿ, ಅಥವಾ 100 ಸ್ಥಾನಗಳಾದರೂ ಆಗಿರಲಿ.  ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ.

11.ಜೆಡಿಎಸ್‌ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ.

12.ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‌ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.