ಯಾರ ಬಗ್ಗೆ ಭಯ ಇರುತ್ತೋ ಅವರೇ ಟಾರ್ಗೆಟ್ : ಸಿದ್ದರಾಮಯ್ಯ
Team Udayavani, Apr 24, 2022, 5:43 PM IST
ಕೊಪ್ಪಳ: ಯಾರ ಬಗ್ಗೆ ಭಯ ಇರತ್ತೋ ಅವರನ್ನೆ ಟಾರ್ಗೆಟ್ ಮಾಡುತ್ತಾರೆ ಅಲ್ವಾ ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಕುಷ್ಟಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕುಮಾರಸ್ವಾಮಿಗೂ ನನ್ನ ಬಗ್ಗೆ ಬಗ್ಗೆ ಭಯ ಇದೆ ಹಾಗಾಗಿ ನನ್ನ ಟಾರ್ಗೆಟ್ ಮಾಡ್ತಿದ್ದಾರೆ. ನನ್ನ ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ ಎನ್ನುವುದನ್ನು ಅವರನ್ನೇ ಕೇಳಿ ಎಂದರು.
ನಾನು ಕೊಪ್ಪಳ ಜಿಲ್ಲೆಯಿಂದ ಸ್ಪರ್ಧೆ ಮಾಡುವುದಿಲ್ಲ. ಸ್ಥಳಿಯ ಮುಖಂಡರು ಅಭಿಮಾನಕ್ಕಾಗಿ ಅವರು ಹೇಳುತ್ತಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಬಹುತೇಕ ಕಡೆ ನನಗೆ ಸ್ಪರ್ಧೆ ಮಾಡುವಂತೆ ಒತ್ತಾಯ ಇದೆ. ಆದರೆ ಇನ್ನು ಚುನಾವಣೆ ದೂರ ಇದೆ ಆಗ ನೋಡೋಣ ಎಂದರು.
ಪಿಎಸೈ ನೇಮಕಾತಿಯಲ್ಲಿ ಅಕ್ರಮ ನಡೆದ ವಿಚಾರ, ಅಕ್ರಮ ನಿಲ್ಲಬೇಕು. ಅರ್ಹರಿಗೆ ಅವಕಾಶ ಸಿಗಬೇಕು. ಯಾರು ತಪ್ಪು ಮಾಡುತ್ತಾರೋ ಅವರಿಗೆ ಕಠಿಣ ಶಿಕ್ಷೆ ಆಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ